ವಿರೋಧದ ನಡುವೆಯೇ “ಅಶೋಕ್ ಖೇಣಿ” ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!
Team Udayavani, Mar 5, 2018, 12:13 PM IST
ಬೆಂಗಳೂರು: ನೈಸ್ ಹಗರಣದ ಸುಳಿಯಲ್ಲಿ ಸಿಲುಕಿದ್ದ ಶಾಸಕ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬಾರದೆಂಬ ವಿರೋಧದ ನಡುವೆಯೇ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಅಶೋಕ್ ಖೇಣಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬಾರದೆಂದು ಧರಂಸಿಂಗ್ ಪುತ್ರ ಅಜಯ್ ಸಿಂಗ್, ಶಾಸಕರಾದ ಮುನಿರತ್ನ, ಭೈರತಿ ಬಸವರಾಜು ಹಾಗೂ ಎಸ್ ಟಿ ಸೋಮಶೇಖರ್ ಸೇರಿದಂತೆ ಬೆಂಗಳೂರಿನ ಶಾಸಕರು ವಿರೋಧ ವ್ಯಕ್ತಪಡಿಸಿದ್ದರು.
ಖೇಣಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೂ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು. ಖೇಣಿ ವಿರುದ್ಧ ನೈಸ್ ಸೇರಿದಂತೆ ಹಲವು ಹಗರಣಗಳ ಆರೋಪವಿದೆ. ಹೀಗಾಗಿ ಖೇಣಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟ ಉಂಟಾಗಲಿದೆ ಎಂದು ಕಾಂಗ್ರೆಸ್ ಶಾಸಕರು ದೂರಿನಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.
ಕಾಂಗ್ರೆಸ್ ಶಾಸಕರೇ ಖೇಣಿ ವಿರುದ್ಧ ತಿರುಗಿ ಬಿದ್ದಿದ್ದರು. ನೈಸ್ ಹಗರಣದ ಬಗ್ಗೆ ಸದನ ಸಮಿತಿ ವರದಿ ನೀಡಿತ್ತು. ಆದರೆ ವರದಿ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲವಾಗಿತ್ತು. ಜೆಡಿಎಸ್ ಪಕ್ಷ ನೈಸ್ ಹಗರಣದ ಬಗ್ಗೆ ಹೋರಾಟ ನಡೆಸಿತ್ತು. ಇದೀಗ ನೈಸ್ ಹಗರಣದ ಬಗ್ಗೆ ವಾಕ್ಸಮರಕ್ಕೆ ಇಳಿಯುತ್ತಿದ್ದ ಕಾಂಗ್ರೆಸ್ ಪಕ್ಷವೇ ಖೇಣಿಯನ್ನು ಪಕ್ಷಕ್ಕೆ ಬರಮಾಡಿಕೊಂಡಿರುವುದು ಚರ್ಚೆ, ಟೀಕೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು
MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್ಡಿಕೆ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು