“ಅಮ್ಮಾ ಐ ಲವ್‌ ಯೂ’ ಹೆಸರಿಗಾಗಿ ಕಾಯುತ್ತಿರುವ ಚಿತ್ರತಂಡ


Team Udayavani, Mar 6, 2018, 11:01 AM IST

Amma-I-Love.jpg

ದ್ವಾರಕೀಶ್‌ ಚಿತ್ರದಡಿ ನಿರ್ಮಾಣವಾಗುತ್ತಿರುವ 51ನೇ ಚಿತ್ರವಾದ “ಅಮ್ಮಾ ಐ ಲವ್‌ ಯೂ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವನ್ನು ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆ ಮಾಡಬೇಕೆಂಬುದು ನಿರ್ಮಾಪಕ ಯೋಗಿ ದ್ವಾರಕೀಶ್‌ ಯೋಚನೆ. ಆದರೆ, ಇದುವರೆಗೂ ಚಿತ್ರದ ಪ್ರಚಾರವನ್ನೇ ಶುರು ಮಾಡಿಲ್ಲ. ಅದಕ್ಕೆ ಕಾರಣ, ಇನ್ನೂ ಟೈಟಲ್‌ ಸಿಗದಿರುವುದು.

ಹೌದು, “ಅಮ್ಮಾ ಐ ಲವ್‌ ಯೂ’ ಎಂಬ ಹೆಸರಿನಲ್ಲೇ ಚಿತ್ರದ ಚಿತ್ರೀಕರಣವಾಗಿದ್ದರೂ ಮತ್ತು ಅದೇ ಹೆಸರಿನಲ್ಲಿ ಚಿತ್ರವನ್ನು ಬಿಡುಗಡೆ ಮಾಡಬೇಕೆಂದು ಚಿತ್ರತಂಡದವರು ಹೊರಟಿದ್ದರೂ, ಇದುವರೆಗೂ ಚಿತ್ರತಂಡದವರಿಗೆ ಟೈಟಲ್‌ ಸಿಕ್ಕಿಲ್ಲವಂತೆ. ಇನ್ನೂ ಹೆಸರು ಸಿಗದ ಕಾರಣ, ಚಿತ್ರತಂಡದವರು ಚಿತ್ರದ ಪ್ರಚಾರವನ್ನೂ ಮಾಡುತ್ತಿಲ್ಲ. ಹಾಗಾಗಿ ಚಿತ್ರದ ಬಿಡುಗಡೆಗೆ ಇನ್ನು ಒಂದೇ ಒಂದು ತಿಂಗಳಿದ್ದರೂ ಪ್ರಚಾರ ಮಾತ್ರ ಆಗುತ್ತಿಲ್ಲ.

“ನಾವು “ಅಮ್ಮಾ ಐ ಲವ್‌ ಯೂ’ ಹೆಸರಿನಲ್ಲಿ ಚಿತ್ರ ಮಾಡಿದ್ದೇವೆ. ಆದರೆ, ವಾಣಿಜ್ಯ ಮಂಡಳಿಯಲ್ಲಿ “ಅಮ್ಮ’ ಎಂಬ ಹೆಸರು ಬೇರೆ ನಿರ್ಮಾಪಕರ ಹೆಸರಿನಲ್ಲಿದೆ. ಅವರು “ಅಮ್ಮ¾’ ಎಂಬ ಹೆಸರು ಮೊದಲು ನೋಂದಾಯಿಸಿದ್ದರಿಂದ, ಅವರು ಚಿತ್ರ ಮಾಡಿದ ನಂತರ, ನೀವು ಬೇಕಾದರೆ “ಅಮ್ಮಾ ಐ ಲವ್‌ ಯೂ’ ಹೆಸರಿನಲ್ಲಿ ಚಿತ್ರ ಮಾಡಿಕೊಳ್ಳಿ ಎಂದು ಹೇಳುತ್ತಿದ್ದಾರೆ. ಆದರೆ, ನಮ್ಮ ಚಿತ್ರ ರೀ-ರೆಕಾರ್ಡಿಂಗ್‌ ಹಂತದಲ್ಲಿದೆ.

ಮುಂದಿನ ತಿಂಗಳು ಬಿಡುಗಡೆ ಮಾಡುವ ಯೋಚನೆ ಇದೆ. ಹೀಗಿರುವಾಗ ಅವರು ಮಾಡಿ ಮುಗಿಸಿದ ನಂತರ, ನಾವು ಚಿತ್ರ ಮಾಡಬೇಕು ಎಂದರೆ ಹೇಗೆ? ಅವರು ಯಾವಾಗ ಚಿತ್ರ ಮಾಡುತ್ತಾರೋ ಗೊತ್ತಿಲ್ಲ. ಮೇಲಾಗಿ ಅದು “ಅಮ್ಮ’, ನಮ್ಮದು “ಅಮ್ಮಾ ಐ ಲವ್‌ ಯೂ’. ಎರಡೂ ಬೇರೆ ಟೈಟಲ್‌ಗ‌ಳು. ಈಗಾಗಲೇ ಅಲ್ಪಸ್ವಲ್ಪ ಬದಲಾವಣೆಯೊಂದಿಗೆ ಒಂದೇ ಹೆಸರಿಟ್ಟುಕೊಂಡು ಸಾಕಷ್ಟು ಚಿತ್ರಗಳು ಬಂದಿವೆ.

ಎಲ್ಲಕ್ಕಿಂತ ಹೆಚ್ಚಾಗಿ “ಅಮ್ಮ’ ಎಂಬ ಹೆಸರಿನ ಅವಧಿ ಮುಗಿದಿದೆ. ಅದನ್ನು ಆ ನಿರ್ಮಾಪಕರು ವಿಸ್ತರಿಸಿಲ್ಲ. ಹಾಗಿದ್ದರೂ ನಮಗೆ ಇನ್ನು ಹೆಸರು ಸಿಗುತ್ತಿಲ್ಲ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಅವರ ಜೊತೆಗೆ ಮಾತನಾಡಿ, “ಅಮ್ಮಾ ಐ ಲವ್‌ ಯೂ’ ಎಂಬ ಹೆಸರನ್ನು ಕೊಡಿ ಎಂದು ಮನವಿ ಮಾಡಿದ್ದೇನೆ’ ಎನ್ನುತ್ತಾರೆ ಯೋಗಿ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಕಡೆಯಿಂದ ಹೆಸರು ಸಿಗುತ್ತಿದ್ದಂತೆಯೇ, ಚಿತ್ರದ ಪ್ರಚಾರ ಶುರು ಮಾಡಿ, ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ ಯೋಗಿ ದ್ವಾರಕೀಶ್‌. ಅಂದ ಹಾಗೆ, “ಅಮ್ಮಾ ಐ ಲವ್‌ ಯೂ’ ಚಿತ್ರವನ್ನು ಕೆ.ಎಂ. ಚೈತನ್ಯ ನಿರ್ದೇಶಿಸಿದ್ದು, ಚಿರಂಜೀವಿ ಸರ್ಜಾ, ನಿಶ್ವಿ‌ಕಾ ನಾಯ್ಡು, ಸಿತಾರಾ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.