ಮನೆಮದ್ದು : ಶ್ವೇತ ವರ್ಣದ ಹಲ್ಲುಗಳಿಗಾಗಿ


Team Udayavani, Mar 6, 2018, 9:00 AM IST

gk2.jpg

ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ನಗು ಅತೀ ಅಗತ್ಯ. ನಗು ಆಕರ್ಷಣೀಯವಾಗಿರಲು ಸುಂದರ ಹಲ್ಲುಗಳು ಅನಿವಾರ್ಯ. ಆದ್ದರಿಂದ ಹಲ್ಲುಗಳ ಬಗ್ಗೆ ಕಾಳಜಿ ವಹಿಸುವುದು ಅತೀ ಮುಖ್ಯ.  ಹಲ್ಲುಗಳು ಹಳದಿಯಾಗದಂತೆ ರಕ್ಷಿಸಲು ವಿಟಮಿನ್‌ ಎ ಅಧಿಕವಾಗಿರುವ ಹಸುರು ತರಕಾರಿಗಳ ಸೇವನೆ ಸಹಕಾರಿ. ಹಾಲು ಮತ್ತು ಹಾಲಿನ ಇತರ ಉತ್ಪನ್ನಗಳಲ್ಲಿ ಕ್ಯಾಲ್ಸಿಯಂ ಅಧಿಕ ಪ್ರಮಾಣದಲ್ಲಿರುವುದರಿಂದ ಅವುಗಳ ಸೇವನೆ ಹಲ್ಲುಗಳನ್ನು ಗಟ್ಟಿಯಾಗಿಸುತ್ತವೆ. ಅಲ್ಲದೆ ಬೆಳ್ಳಗೆ ಹೊಳೆಯುವಂತೆ ಮಾಡುತ್ತವೆ. ಎಣ್ಣೆ ತಿಂಡಿ, ಮಸಾಲೆಯುಕ್ತ ಕರುಕುರು ತಿಂಡಿಗಳು, ಚಾಕಲೇಟ್‌, ಫಾಸ್ಟ್‌ಪುಡ್‌ಗಳಿಂದ ದೂರ ಇದ್ದಷ್ಟು ಹಲ್ಲುಗಳ ಆರೋಗ್ಯ ಚೆನ್ನಾಗಿರುತ್ತದೆ  ಮತ್ತು ಅವುಗಳು ಬೆಳ್ಳಗಿರುತ್ತವೆ.

ಹಳದಿ ಹಲ್ಲುಗಳು ವ್ಯಕ್ತಿಯಲ್ಲಿ ಕೀಳರಿಮೆಗೆ ಕಾರಣವಾಗಿ ಆತ ಮಾನಸಿಕವಾಗಿ ನೊಂದುಕೊ ಳ್ಳುವಂತೆ ಮಾಡುತ್ತವೆ. ಅಲ್ಲದೆ ಹಳದಿ ಹಲ್ಲು ಹೊಂದಿರುವ ವ್ಯಕ್ತಿ ಇತರರೊಂದಿಗೆ ಮಾತನಾಡಲು, ಬೆರೆಯಲು ಹಿಂಜರಿಯುತ್ತಾರೆ. ಆದ್ದರಿಂದ ಹಳದಿ ಹಲ್ಲುಗಳಿಂದ ಮುಕ್ತಿ ಹೊಂದಲು ಕೆಲವೊಂದು ಮನೆ ಮದ್ದುಗಳನ್ನು ಬಳಸುವುದು ಉತ್ತಮ.   

ಮನೆಮದ್ದು
·  ಅಡುಗೆ ಸೋಡ, ಉಪ್ಪು, ಮಾವಿನ ಎಲೆ, ಗೇರು ಎಲೆ ಇತ್ಯಾದಿಗಳನ್ನು ಬಳಸಿ ಹಲ್ಲು ಉಜ್ಜುವುದರಿಂದ ಹೊಳಪು ಲಭಿಸುವುದು.
·  ಉಪ್ಪು, ಸೋಡಾ, ಪುದೀನ ಎಲೆಗಳನ್ನು ಬೆರೆಸಿ ಪೇಸ್ಟ ಮಾಡಿಕೊಳ್ಳಿ. ಇದನ್ನು ಹಲ್ಲುಗಳ ಮೇಲೆ ಹಚ್ಚಿ 20 ನಿಮಿಷ ಬಿಡಿ, ಅನಂತರ  ಬಿಸಿನೀರಿನಲ್ಲಿ ಬಾಯಿ ಮುಕ್ಕಳಿಸಿ. ಇದು ಹಲ್ಲು ಹಳದಿಯಾಗಿರುವುದನ್ನು ನಿವಾರಿಸುತ್ತದೆ. 
·  ಬೇವಿನ ಎಲೆಯನ್ನು ನೀರೊಳಗೆ ಹಾಕಿ ಕುದಿಸಿ, ಕಷಾಯ ಮಾಡಿ ಮೌತ್‌ವಾಶ್‌ನಂತೆ ಬಳಸಿ.
·  ಕಬ್ಬನ್ನು ಜಗಿದು ತಿನ್ನುವುದರಿಂದ ಹಲ್ಲುಗಳು ಗಟ್ಟಿಯಾಗುತ್ತವೆ. ಹಲ್ಲಿನ ಮೇಲಿನ ಕಲೆ, ಹಲ್ಲು ಹಳದಿಯಾಗುವುದನ್ನು ತಡೆಯಬಹುದು.
·  ಕ್ಯಾಲ್ಷಿಯಂ ಹೇರಳವಾಗಿರುವ ಆಹಾರ ಪದಾರ್ಥಗಳನ್ನು ಸೇವಿಸಿ. 
·  ನಿಂಬೆ ರಸವನ್ನು ಉಪ್ಪಿನೊಂದಿಗೆ ಮಿಶ್ರ ಮಾಡಿ ಹಲ್ಲುಜ್ಜುವುದರಿಂದ ಹೊಳಪು ಲಭಿಸುತ್ತದೆ.  
·  ನಿಂಬೆಹಣ್ಣಿನ ಸಿಪ್ಪೆಯಿಂದ ಉಜ್ಜಿದರೂ ಹಲ್ಲುಗಳು ಬೆಳ್ಳಗಾಗುತ್ತವೆ. 
·  ವಿವಿಧ ಜೀವಸತ್ವಗಳಿರುವ ತರಕಾರಿಗಳ ಸೇವನೆ ಉತ್ತಮ. 
·  ಹಲ್ಲುಗಳ ವರ್ಣ ಬದಲಾಯಿಸುವ ಆಂಟಿ ಬಯೋಟಿಕ್‌ಗಳ ಅನಗತ್ಯ ಸೇವನೆಯನ್ನು ಆದಷ್ಟು ಕಡಿಮೆ ಮಾಡಿ.
·  ಸ್ಟ್ರಾಬೆರಿಯಿಂದ ಉಜ್ಜುವುದರಿಂದಲೂ ಹಳದಿ ಹಲ್ಲಿನಿಂದ ಮುಕ್ತಿ ಪಡೆಯಬಹುದು.
·  ಪುದೀನ ಬಳಸಿರುವ ಟೂತ್‌ ಪೇಸ್ಟ್‌ ಬಳಕೆ ಉಪಯುಕ್ತ.
·  ತೆಂಗಿನೆಣ್ಣೆ ಒಂದು ಚಮಚ ಬಾಯಿಗೆ ಹಾಕಿ 5 ನಿಮಿಷಗಳ ಬಳಿಕ ಬಾಯಿ ಮುಕ್ಕಳಿಸಿ.
·  ಬೇವಿನ ಎಣ್ಣೆ ಬಳಸಿ ಮೌತ್‌ವಾಶ್‌ ಮಾಡಿ.
·  ತುಳಸಿ ಎಲೆಗಳನ್ನು  ನೆರಳಲ್ಲಿ ಇಟ್ಟು ಒಣಗಿಸಿ ಪುಡಿಮಾಡಿ ಹಲ್ಲುಜ್ಜಲು ಉಪಯೋಗಿಸಿ.
·  ಸ್ವಲ್ಪ ತೆಂಗಿನೆಣ್ಣೆಗೆ ಚಿಟಿಕೆಯಷ್ಟು ಅರಿಸಿ ನ ಪುಡಿ ಮಿಶ್ರ ಮಾಡಿ ಹಲ್ಲುಜ್ಜಿ. 
·  ಅರಿಸಿನವನ್ನು ಹಾಲಿನೊಂದಿಗೆ ಚೆನ್ನಾಗಿ ಮಿಶ್ರ ಮಾಡಿ ಹಲ್ಲುಜ್ಜಲು ಬಳಸಬಹುದು.

ಜಿಕೆ

ಟಾಪ್ ನ್ಯೂಸ್

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.