ಚುನಾವಣೆ ರಣತಂತ್ರ: ಆರ್‌ಎಸ್‌ಎಸ್‌ ನೆರವು ಕೋರಿದ ಬಿಜೆಪಿ ನಾಯಕರು


Team Udayavani, Mar 6, 2018, 7:20 PM IST

Mohan-Bhagwat-700.jpg

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ ಕುಮಾರ್‌ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ರಣತಂತ್ರಕ್ಕೆ ಸಂಬಂಧಿಸಿ ರಾಜ್ಯದ ಆರ್‌ಎಸ್‌ಎಸ್‌ ನಾಯಕರೊಂದಿಗೆ ಸಭೆ ನಡೆಸಿ ಮುಂಬರುವ ಚುನಾವಣೆಗೆ ಸಂಘ ಪರಿವಾರದ ಯೋಜನೆಯನ್ನು ರೂಪಿಸುವ ಬಗ್ಗೆ ಚರ್ಚಿಸಿರುವುದಾಗಿ ತಿಳಿದು ಬಂದಿದೆ. 

“ಮಾರ್ಚ್‌ 3ರಂದು ಸಂಘ ಪರಿವಾರ ರಾಜ್ಯದಲ್ಲಿನ ತನ್ನ ಪ್ರಧಾನ ಕಾರ್ಯಾಲಯದಲ್ಲಿ  ವಾರ್ಷಿಕ ಸಂಚಾಲನಾ ಸಭೆ ನಡೆಸಿತು. ಬಿ ಎಸ್‌ ಯಡಿಯೂರಪ್ಪ, ಅನಂತ ಕುಮಾರ್‌, ಸದಾನಂದ ಗೌಡ ಮತ್ತು ಇತರರು ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಘ ಪರಿವಾರದ ನೆರವನ್ನು ಅವರು ಕೋರಿದರು’ ಎಂದು ಹಿರಿಯ ಆರ್‌ಎಸ್‌ಎಸ್‌ ನಾಯಕರೋರ್ವರು ಮಾಧ್ಯಮಕ್ಕೆ ತಿಳಿಸಿದರು. 

ಇದಕ್ಕೆ ಉತ್ತರವಾಗಿ ಸಂಘವು ತಾನು ಬಿಜೆಪಿಗೆ ಚುನಾವಣಾ ನೆರವು ನೀಡಲು ನೇರ ಪ್ರವೇಶ ಮಾಡುವುದಿಲ್ಲ; ಆದರೆ ಸಂಘದ ಸ್ವಯಂಸೇವಕರಿಗೆ ಆ ರೀತಿಯಲ್ಲಿ ನೆರವಾಗುವುದಕ್ಕೆ ಪೂರ್ಣ ಸ್ವಾತಂತ್ರ್ಯವಿದೆ ಎಂದು ಆರ್‌ಎಸ್‌ಎಸ್‌ ನಾಯಕರು ತಿಳಿಸಿದರು. 

ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಅವರ ಬಗ್ಗೆ ಒಲವು ಹೊಂದಿರುವ ಓಬಿಸಿ ಮತ್ತು ದಲಿತರ ಓಟುಗಳನ್ನು ಒಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಅನ್ನು ಕೇಳಿಕೊಂಡಿದೆಯೇ ? ಎಂಬ ಪ್ರಶ್ನೆಗೆ ಉತ್ತರವಾಗಿ “ಅಂತಹ ಯಾವುದೇ ಸಲಹೆಯನ್ನು ನಾವು ನೀಡಿಲ್ಲ ಅಥವಾ ಬಿಜೆಪಿ ಆ ರೀತಿಯಲ್ಲಿ ಏನನ್ನೂ ಕೇಳಿಲ್ಲ’ ಎಂದವರು ಹೇಳಿದರು. 

ಆರ್‌ಎಸ್‌ಎಸ್‌ ಕಾರ್ಯಕರ್ತರು ಬಿಜೆಪಿಗೆ ಚುನಾವಣೆ ಸಂಬಂಧವಾಗಿ ಯಾವ ರೀತಿಯಲ್ಲಿ ನೆರವಾಗುವರು ಎಂಬ ಪ್ರಶ್ನೆಗೆ ಉತ್ತರವಾಗಿ ಅವರು, “ಅರ್ಹ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲು ಅತ್ಯಧಿಕ ಸಂಖ್ಯೆಯಲ್ಲಿ ಮತ ಹಾಕುವಂತೆ ಮತದಾರರ ಮನ ಒಲಿಸುವ ಕೆಲಸವನ್ನು ಆರ್‌ಎಸ್‌ಎಸ್‌ ಕಾರ್ಯಕರ್ತರು ಮಾಡಬಲ್ಲರು’ ಎಂದು ಹೇಳಿದರು. 

“ಪ್ರಜಾಸತ್ತೆಯ ಯಶಸ್ಸಿಗೆ ದೊಡ್ಡ ಸಂಖ್ಯೆಯಲ್ಲಿ ಮತದಾರರು ಮತ ಹಾಕುವುದು ಮತ್ತು ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬಹಳ ಮುಖ್ಯವಾಗಿರುವುದರಿಂದ ಆರ್‌ಎಸ್‌ಎಸ್‌ ಕಾರ್ಯಕರ್ತರು ಆ ಸಂದೇಶವನ್ನು ಮತದಾರರಿಗೆ ತಲುಪಿಸಲು ಕ್ಷೇತ್ರ ಕಾರ್ಯ ಮಾಡಬಲ್ಲರು’ ಎಂದು ಆ ಆರ್‌ಎಸ್‌ಎಸ್‌ ನಾಯಕ ಹೇಳಿದರು. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.