ದೇರಳಕಟ್ಟೆ: “ನಿಟ್ಟೆ ಎಕೋಲೇಡ್ಸ್ -2018ಗೆ’ ಚಾಲನೆ
Team Udayavani, Mar 7, 2018, 6:00 AM IST
ಉಳ್ಳಾಲ: ವೈದ್ಯಕೀಯ ಕ್ಷೇತ್ರದೊಂದಿಗೆ ಕ್ರೀಡಾ ಕ್ಷೇತ್ರಕ್ಕೆ ಅವಿನಾಭಾವ ಸಂಬಂಧವಿದ್ದು, ವೈಜ್ಞಾನಿಕವಾಗಿ ಕ್ರೀಡೆ ಬದಲಾಗುತ್ತಿದ್ದು, ಭಾರತ ಸಹಿತ ವಿಶ್ವಾದಾದ್ಯಂತ ವೃತ್ತಿಪರತೆಯೊಂದಿಗೆ ವ್ಯಾವಹಾರಿಕವಾಗಿ ಮತ್ತು ಮನೋರಂಜನ ಕ್ಷೇತ್ರವಾಗಿ ಪ್ರಸಿದ್ಧಿಯನ್ನು ಪಡೆಯುತ್ತಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಸಹ ಕುಲಾಧಿಪತಿ ಎನ್. ವಿಶಾಲ್ ಹೆಗ್ಡೆ ಅಭಿ ಪ್ರಾಯಪಟ್ಟರು.
ದೇರಳಕಟ್ಟೆಯ ಕ್ಷೇಮ ಆಡಿಟೋರಿಯಂನಲ್ಲಿ ಮಂಗಳವಾರ ಪ್ರಾರಂಭಗೊಂಡ ದಕ್ಷಿಣ ವಲಯ ಮಟ್ಟದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳ ಅಂತರ್ ಕಾಲೇಜು ಕ್ರೀಡಾಕೂಟ “ನಿಟ್ಟೆ ಎಕೋಲೇಡ್ಸ್ -2018ಗೆ’ ಚಾಲನೆ ನೀಡಿ ಮಾತನಾಡಿದರು.
ನಿಟ್ಟೆ ವಿ.ವಿ. ಕುಲಸಚಿವೆ ಅಲ್ಕಾ ಕುಲಕರ್ಣಿ, ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ ಡೀನ್ ಡಾ| ಪಿ.ಎಸ್. ಪ್ರಕಾಶ್, ವೈಸ್ ಡೀನ್ಗಳಾದ ಡಾ| ಅಮೃತ್ ಮಿರಾಜ್ಕರ್, ಡಾ| ಜಯಪ್ರಕಾಶ್ ಶೆಟ್ಟಿ, ಎ.ಬಿ.ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಯು.ಎಸ್. ಕೃಷ್ಣ ನಾಯಕ್, ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ| ರಾಜೇಂದ್ರ ಪ್ರಸಾದ್, ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ| ಧಾನೇಶ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ| ಫಾತಿಮಾ ಡಿ’ಸಿಲ್ವ, ಉಪಪ್ರಾಂಶುಪಾಲೆ ಸವಿತಾ ನಾಯಕ್, ಸ್ಟೂಡೆಂಟ್ ಕೌನ್ಸಿಲ್ ಅಧ್ಯಕ್ಷೆ ಇಂದೂ ಉಪಸ್ಥಿತರಿದ್ದರು.
ಕ್ರೀಡಾ ಸಲಹೆಗಾರ ಡಾ| ಮುರಲೀಕೃಷ್ಣ ಸ್ವಾಗತಿಸಿದರು. ಮಿಖಾಯ ಕಾರ್ಯಕ್ರಮ ನಿರೂಪಿಸಿದರು. ಸ್ಟೂಡೆಂಟ್ ಕೌನ್ಸಿಲ್ ನ್ಪೋರ್ಟ್ಸ್ ಸೆಕ್ರೆಟರಿ ಅಜಯ್ ಶರ್ಮಾ ವಂದಿಸಿದರು. ಕೇರಳ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ 25 ವೈದ್ಯ ಮತ್ತು ದಂತ ವೈದ್ಯಕೀಯ ಕಾಲೇಜಿನ ಕ್ರೀಡಾ ತಂಡಗಳು ಭಾಗವಹಿಸಿದ್ದು, ಮಾ. 9ರಂದು ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ