ಚರ್ಚೆಗೆ ನಾವು ಸಿದ್ಧ: ಅನಂತ್ ಕುಮಾರ್
Team Udayavani, Mar 7, 2018, 9:45 AM IST
ಹೊಸದಿಲ್ಲಿ: ಪಿಎನ್ಬಿ ಹಗರಣ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ, ಆದರೆ, ವಿಪಕ್ಷಗಳೇ ತಪ್ಪಿಸಿಕೊಂಡು ಓಡಾಡುತ್ತಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಆರೋಪಿಸಿದ್ದಾರೆ. ಸಂಸತ್ನಲ್ಲಿ ಗದ್ದಲ ಬಿಟ್ಟು ಬನ್ನಿ, ಚರ್ಚೆ ನಡೆಸೋಣ ಎಂದೂ ಅವರು ವಿಪಕ್ಷಗಳಿಗೆ ಆಹ್ವಾನ ನೀಡಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಸದಸ್ಯರು ಪ್ರಧಾನಿ ಅವರ ಹೇಳಿಕೆಗಾಗಿ ಪಟ್ಟು ಹಿಡಿದ ವೇಳೆ ಅವರು, “ಪಿಎನ್ಬಿ ಹಗರಣ ಇಂದಿನದ್ದಲ್ಲ. ಅದು ಯುಪಿಎ ಕಾಲದಲ್ಲೇ ಶುರುವಾಗಿದ್ದು. ಹೀಗಾಗಿ ನಾವಂತೂ ಚರ್ಚೆಗೆ ಸಿದ್ಧರಿದ್ದೇವೆ’ ಎಂದರು. ಇನ್ನು,ರಾಜ್ಯ ಸಭೆಯಲ್ಲೂ ಪದೇ ಪದೆ ಗದ್ದಲವಾದ್ದರಿಂದ ಕಲಾಪವನ್ನು ಮುಂದೂಡಬೇಕಾಯಿತು. ಈ ಮಧ್ಯೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸತ್ ಭವನದ ಮುಂದಿರುವ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!