ಐಕ್ಯಯಾನ ಭಾವಗಾನ; ಶತಮಾನದ ಕವಿಗೆ ಗಾಯನ ನಮನ


Team Udayavani, Mar 7, 2018, 12:17 PM IST

7-March-10.jpg

ಸುಬ್ರಹ್ಮಣ್ಯ (ಕೊಳಂಬೆ ಪುಟ್ಟಣ್ಣ ಗೌಡ ವೇದಿಕೆ): ನಾಲ್ಕು ದಿಕ್ಕುಗಳಿಂದ ಹಸಿರು ಹೊದಿಕೆ ಹಾಸಿರುವ, ನಾಗರಾಧನೆಯ ಪ್ರಮುಖ ನೆಲೆಬೀಡು ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಎರಡನೆ ದಿನ ಬಹುಸಂಸ್ಕೃತಿಯ ಏಕತೆ ಸಾರುವ ಭಾವಗಾನ, ಶತಮಾನದ ಕವಿಗಳಿಗೆ ಗಾಯನ, ಅಕ್ಷರದ ನುಡಿ ನಮನ, ನೆಲದ ಬಗೆಗಿನ ಗೋಷ್ಠಿ, ಕವಿಗೋಷ್ಠಿಗಳು ಬಿತ್ತರಗೊಂಡವು.

ಕೊಳಂಬೆ ಪುಟ್ಟಣ್ಣ ಗೌಡ ವೇದಿಕೆಯಲ್ಲಿ ಹಿರಿಯ-ಕಿರಿಯ ಬರೆಹಗಾರರು ಅಕ್ಷರ ಜಾತ್ರೆಯಲ್ಲಿ ಗಾಯನ, ಮಾತು, ಅಭಿನಯದ ಮೂಲಕ ಸಾಹಿತ್ಯದ ಬಹುಬಗೆಯ ಆಯಾಮಗಳನ್ನು ತೆರೆದಿಟ್ಟರು. ಕುಲ್ಕುಂದ ಶಿವರಾವ್‌ (ನಿರಂಜನ) ವೇದಿಕೆಯಲ್ಲಿ ನೆರೆದಿದ್ದ ಸಾಹಿತ್ಯಾಸಕ್ತರು ಇವುಗಳಿಗೆ ಸಾಕ್ಷಿಯಾದರು. ಎರಡನೆ ದಿನ 3,000ಕ್ಕೂ ಮಿಕ್ಕಿ ಅಕ್ಷರ ಪ್ರೇಮಿಗಳು ಸಮ್ಮೇಳನಕ್ಕೆ ಆಗಮಿಸಿದ್ದರು.

ಆರು ವಿಚಾರಗೋಷ್ಠಿಗಳು
ಮಂಗಳವಾರ ವಿವಿಧ ಶೀರ್ಷಿಕೆಗಳಲ್ಲಿ ಆರು ವಿಚಾರ ಗೋಷ್ಠಿಗಳು ನಡೆದವು. ಸಾಹಿತ್ಯ-ಸಂಸ್ಕೃತಿ ವಿಕಾಸ, ತೌಳವ ಚಿಂತನೆ, ಕನ್ನಡ ಶಾಲೆಗಳ ಅಭಿವೃದ್ಧಿ ಪರಿಕಲ್ಪನೆ, ನಿರಂಜನ ಬದುಕು-ಬರಹ, ಸಂವಾದ-ಸಾಹಿತ್ಯದ ಪ್ರೇರಣೆಗಳು, ಸುಬ್ರಹ್ಮಣ್ಯದ ಇತಿಹಾಸ-ಸಾಂಸ್ಕೃತಿಕ ಸಂಪದ, ಕನ್ನಡ ಅನುಷ್ಠಾನ ವಿಚಾರದಲ್ಲಿ ವಿಷಯ ತಜ್ಞರು ಅಭಿಪ್ರಾಯ ಮಂಡಿಸಿದರು. ಭಾವಗಾನ, ಶತಮಾನದ ಕವಿ ಗೋಪಾಲಕೃಷ್ಣ ಅಡಿಗರಿಗೆ ಕವಿ ನಮನ, ಶತಮಾನದ ಕವಿ ಮಂದಾರ ಕೇಶವ ಭಟ್‌ ಅವರಿಗೆ ಕವಿ ನಮನ, ಯುವ ಕವಿಗೋಷ್ಠಿ ಹಾಗೂ ಸಾಧಕರಿಗೆ ಸಮ್ಮಾನ, ಸಾಂಸ್ಕೃತಿಕ ರಂಗದಲ್ಲಿ ಯಕ್ಷಗಾನ ತಾಳಮದ್ದಳೆ ಪ್ರದರ್ಶನಗೊಂಡಿತ್ತು.

ಬಿಡುವಿಲ್ಲದ ಕಾರ್ಯಕ್ರಮ
ಉದಯರಾಗದಿಂದ ತೊಡಗಿ ಸಂಜೆಯ ಸಾಂಸ್ಕತಿಕ ಕಾರ್ಯಕ್ರಮದ ತನಕ 125ಕ್ಕೂ ಅಧಿಕ ಕಲಾವಿದರು, ಸಾಹಿತಿಗಳು ನಾನಾ ರೂಪದಲ್ಲಿ ವೇದಿಕೆಯೇರಿ ಸಾಹಿತ್ಯದ ಕಂಪು ಪಸರಿಸಿದರು. ಮೂರು ದಿನವೂ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಒಂದೆಡೆ ವಿಚಾರ ಮಂಡನೆ ನಡೆದರೆ, ಇನ್ನೊಂದೆಡೆ ಬಗೆ-ಬಗೆಯ ಗೀತೆಗಳು ಮನ ತಣಿಸಿತ್ತು.

ಅತಿಥಿ ದೇವೋಭವ
ಮಂಗಳವಾರ ಅಕ್ಷರ ಪ್ರೇಮಿಗಳ ಉದರ ತಣಿಸಲು ನಾನಾ ಬಗೆಯ ಮೆನುಗಳನ್ನು ಸಿದ್ಧಪಡಿಸಲಾಗಿತ್ತು. ಬೆಳಗ್ಗೆ 350 ಮಂದಿಗೆ ಇಡ್ಲಿ, ವಡೆ, ಕಾಫಿ, ಚಹಾ, ಬೆಳಗ್ಗೆ 10ಕ್ಕೆ ಚಹಾ, ಬಿಸ್ಕತ್‌, ಮಧ್ಯಾಹ್ನ 1,500ಕ್ಕೂ ಮಿಕ್ಕಿ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಅನ್ನ, ಸಾಂಬಾರು, ತೋವೆ, ಸಾರು, ಗುಜ್ಜೆ ಪಲ್ಯ, ಕಡ್ಲೆಬೇಳೆ ಪಾಯಸ, ಪೈನಾಪಲ್‌ ಶಿರಾ, ಮಜ್ಜಿಗೆ, ಸಂಜೆ 400 ಮಂದಿಗೆ ಚಹಾ, ಕಾಫಿ, ತಿಂಡಿ, ರಾತ್ರಿ ಸಾವಿರಕ್ಕೂ ಅಧಿಕ ಮಂದಿಗೆ ಅನ್ನ, ಸಾರು, ಸಾಂಬಾರು, ಪಾಯಸ, ಪಲ್ಯ, ಚಟ್ನಿ, ಮಜ್ಜಿಗೆ ಸವಿಯನ್ನು ಉಣಬಡಿಸಲಾಯಿತು.

ವಿದ್ಯಾರ್ಥಿಗಳೇ ಅಧಿಕ
ಸಮ್ಮೇಳನದಲ್ಲಿ ಎರಡನೇ ದಿನವೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿತ್ತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಆಗಮಿಸಿದ್ದರು. ಸಭಾಂಗಣದಲ್ಲಿ ಶೇ. 75ಕ್ಕಿಂತ ಅಧಿಕ ಭಾಗ ವಿದ್ಯಾರ್ಥಿಗಳಿಂದಲೇ ತುಂಬಿತ್ತು. ಅಕ್ಷರ ಜಾತ್ರೆಯಲ್ಲಿ ಕಾಣಿಸಿಕೊಳ್ಳುವ ಮಧ್ಯ ವಯಸ್ಕರು, ಹಿರಿಯರ ಸಂಖ್ಯೆ ಕಡಿಮೆ ಇತ್ತು. ವಸ್ತು ಪ್ರದರ್ಶನದ ಮಳಿಗೆಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವೀಕ್ಷಿಸಿದರು. ಆರ್ಟ್‌ ಗ್ಯಾಲರಿ, ಪುರಾತನ ಪರಿಕರ ಹಾಗೂ ಕತ್ತಿ, ಗುರಾಣಿ ತಯಾರಿ ಕೇಂದ್ರದಲ್ಲಿ ಅಕ್ಷರ ಪ್ರೇಮಿಗಳು ಕುತೂಹಲದಿಂದ ನೆರೆದು, ವಿಚಾರಿಸುತ್ತಿದ್ದರು.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.