ಹಸಿವು ಮುಕ್ತ ಕರ್ನಾಟಕಕ್ಕೆ ಪ್ರಯತ್ನ : ಐವನ್ ಡಿ’ಸೋಜಾ
Team Udayavani, Mar 8, 2018, 11:22 AM IST
ಸುರತ್ಕಲ್ : ದೇಶದಲ್ಲಿ ಉಳುವವನಿಗೆ ಭೂಮಿಯ ಹಕ್ಕು ನೀಡಿದ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಂಟೀನ್ ಆರಂಭಿಸುವ ಮೂಲಕ ಹಸಿವು ಮುಕ್ತ ಕರ್ನಾಟಕಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಮುಖ್ಯ ಸಚೇತಕ ಐವನ್ ಡಿ’ಸೋಜಾ ಹೇಳಿದರು.
ಸುರತ್ಕಲ್ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉಚಿತ ಅಕ್ಕಿ ಭಾಗ್ಯ, ಹಕ್ಕುಪತ್ರ ಮತ್ತಿತರ ಮೂಲಸೌಲಭ್ಯದ ಬಳಿಕ ಇದೀಗ ಬಡ ವರ್ಗಕ್ಕೆ ಬೇಕಾದ ಆಹಾರವನ್ನೂ ಕನಿಷ್ಠ ದರದಲ್ಲಿ ನೀಡುವ ಸೌಲಭ್ಯ ಸರಕಾರ ನೀಡುತ್ತಿದೆ. ಇಂದಿರಾ ಕ್ಯಾಂಟೀನ್ನಲ್ಲಿಯೂ ಉಚಿತವಾಗಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.
ಶಾಸಕ ಮೊದಿನ್ ಬಾವಾ ಮಾತನಾಡಿ, ಇಂದಿರಾ ಕ್ಯಾಂಟೀನ್ ಆರಂಭದ ಬಳಿಕ ಸರ್ವರಿಗೂ ಆಹಾರ ಭದ್ರತೆ ಕುರಿತ ಪರಿಕಲ್ಪನೆ ಕಾಂಗ್ರೆಸ್ ಆಡಳಿತದಿಂದ ಸಾಕಾರವಾಗಿದೆ ಎಂದರು. ಮೇಯರ್ ಕವಿತಾ ಸನಿಲ್ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು.
ಕಾರ್ಪೊರೇಟರ್ ಪ್ರತಿಭಾ ಕುಳಾಯಿ, ಶಶಿಧರ್ ಹೆಗ್ಡೆ, ದೀಪಕ್ ಪೂಜಾರಿ, ಪುರುಷೋತ್ತಮ್ ಚಿತ್ರಾಪುರ, ಕುಮಾರ್ ಮೆಂಡನ್, ಅಯಾಝ್ ಕೃಷ್ಣಾಪುರ, ಮಾಜಿ ಮೇಯರ್ ಗುಲ್ಜಾರ್ ಬಾನು, ಆಯುಕ್ತ ನಝೀರ್, ಗಣ್ಯರು ನೂತನ ಕ್ಯಾಂಟಿನ್ನಲ್ಲಿ ಆಹಾರ ಖಾದ್ಯವನ್ನು ಸವಿದರು. ಮೊದಲ ದಿನದ ಆಹಾರ ಸವಿಯಲು ಸಾರ್ವಜನಿಕರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ