ಹಾಕಿ: ವನಿತೆಯರಿಗೆ ಮೊದಲ ಸೋಲು


Team Udayavani, Mar 9, 2018, 6:50 AM IST

Indian-women-suffer-first.jpg

ಸಿಯೋಲ್‌: ದಕ್ಷಿಣ ಕೊರಿಯಾ ಪ್ರವಾಸದಲ್ಲಿ ಭಾರತದ ವನಿತಾ ಹಾಕಿ ತಂಡ ಮೊದಲ ಸೋಲನುಭವಿಸಿದೆ. ಗುರುವಾರ ಸಿಯೋಲ್‌ನ “ಜಿಂಚುನ್‌ ನ್ಯಾಷನಲ್‌ ಆ್ಯತ್ಲೆಟಿಕ್‌ ಸೆಂಟರ್‌’ನಲ್ಲಿ ನಡೆದ 3ನೇ ಪಂದ್ಯದಲ್ಲಿ ದಕ್ಷಿಣ ಕೊರಿಯಾ 2-1 ಗೋಲುಗಳಿಂದ ರಾಣಿ ರಾಮ್‌ಪಾಲ್‌ ಪಡೆಯನ್ನು ಮಣಿಸಿತು.

ಮೊದಲೆರಡು ಪಂದ್ಯಗಳನ್ನು ಗೆದ್ದ ಭಾರತ 2-0 ಮುನ್ನಡೆಯಲ್ಲಿತ್ತು. ಗುರುವಾರದ ಪಂದ್ಯವನ್ನೂ ಜಯಿಸಿದ್ದರೆ ಸರಣಿ ವಶಪಡಿಸಿಕೊಳ್ಳಬಹುದಿತ್ತು. ಆದರೆ ಆತಿಥೇಯ ಪಡೆ ಮೊದಲ ಗೆಲುವಿನೊಂದಿಗೆ ಸರಣಿಯನ್ನು ಜೀವಂತವಾಗಿ ಇರಿಸಿದೆ. 5 ಪಂದ್ಯಗಳ ಸರಣಿಯ 4ನೇ ಮುಖಾಮುಖೀ ಶುಕ್ರವಾರ ನಡೆಯಲಿದೆ.

ಕೊರಿಯಾ ಆಕ್ರಮಣಕಾರಿ ಆರಂಭ
ಅತ್ಯಂತ ಆಕ್ರಮಣಕಾರಿಯಾಗಿ ಆಟ ಆರಂಭಿಸಿದ ಕೊರಿಯನ್‌ ವನಿತೆಯರು ಪಂದ್ಯದ 2 ಗೋಲುಗಳನ್ನು ಮೊದಲ ಕ್ವಾರ್ಟರ್‌ನಲ್ಲೇ ಬಾರಿಸಿ ಪ್ರಾಬಲ್ಯ ಮೆರೆದರು. ಪಂದ್ಯದ 12ನೇ ನಿಮಿಷದಲ್ಲಿ ಸಿಯುಲ್‌ ಕಿ ಚಿಯಾನ್‌, ಎರಡೇ ನಿಮಿಷದಲ್ಲಿ ಯುರಿಮ್‌ ಲೀ ಗೋಲುಗಳನ್ನು ಸಿಡಿಸಿ ಕೊರಿಯಾಕ್ಕೆ 2-0 ಮುನ್ನಡೆ ಒದಗಿಸಿದರು. ಎರಡೂ ಗೋಲುಗಳು ಪೆನಾಲ್ಟಿ ಕಾರ್ನರ್‌ ಮೂಲಕವೇ ಬಂದವು. ಈ ಸಂದರ್ಭದಲ್ಲಿ ಭಾರತದ ರಕ್ಷಣಾ ವಿಭಾಗ ಬಹಳ ದುರ್ಬಲವಾಗಿ ಗೋಚರಿಸಿತು. ಭಾರತದ ಆಟಗಾರ್ತಿಯರು ಕೊರಿಯಾದ ಮಿಡ್‌ ಫೀಲ್ಡ್‌ ಮೇಲೆ ಒತ್ತಡ ಹೇರಿದರೂ ಇದನ್ನು ಮೀರಿ ನಿಲ್ಲುವ ಮೂಲಕ ಆತಿಥೇಯರು ಪಾರಮ್ಯ ಸಾಧಿಸಿದರು.

ಭಾರತ ದ್ವಿತೀಯ ಕ್ವಾರ್ಟರ್‌ನಲ್ಲಿ ತಿರುಗಿ ಬಿತ್ತು. 16ನೇ ನಿಮಿಷದಲ್ಲಿ ಲಾಲ್ರೆಮಿÕಯಾಮಿ ಭಾರತದ ಪರ ಗೋಲಿನ ಖಾತೆ ತೆರೆದರು. ಅನಂತರ ಭಾರತ ಪಂದ್ಯದ ಮೇಲೆ ಹಿಡಿತ ಸಾಧಿಸಿತಾದರೂ ಅವಕಾಶಗಳನ್ನು ಕೈಚೆಲ್ಲುವ ಮೂಲಕ ನಿರಾಸೆ ಮೂಡಿಸಿತು. ದಕ್ಷಿಣ ಕೊರಿಯಾದ ಗೋಲ್‌ಕೀಪರ್‌ ಹೀಬಿನ್‌ ಜಂಗ್‌ ಅಮೋಘ ಪ್ರದರ್ಶನದ ಮೂಲಕ ಪ್ರವಾಸಿಗರ ಪ್ರಯತ್ನವನ್ನು ವಿಫ‌ಲಗೊಳಿಸಿದರು.

ತೃತೀಯ ಕ್ವಾರ್ಟರ್‌ನಲ್ಲಿ ಕೊರಿಯಾಕ್ಕೆ ಗೋಲು ಗಳಿಕೆಯ ಸಾಕಷ್ಟು ಅವಕಾಶಗಳಿದ್ದವು. 3 ಪೆನಾಲ್ಟಿ ಕಾರ್ನರ್‌ ಸಹಿತ ಎಲ್ಲ ಅವಕಾಶಗಳು ಕೈಕೊಟ್ಟವು. ಭಾರತದ ಗೋಲು ಪೆಟ್ಟಿಗೆಯ ಮುಂದೆ ನಿಂತಿದ್ದ ನೀಳಕಾಯದ ರಜನಿ ಎಟಿಮರ್ಪು ಕೊರಿಯನ್ನರಿಗೆ ಕಂಟಕವಾಗಿ ಪರಿಣಮಿಸಿದರು.

ಸಾಧ್ಯವಾಗಲಿಲ್ಲ ಸಮಬಲ
ಕೊನೆಯ ಕ್ವಾರ್ಟರ್‌ನಲ್ಲಿ ಭಾರತದ ಪ್ರದರ್ಶನ ಉತ್ತಮ ಮಟ್ಟದಲ್ಲಿತ್ತು. ಪಂದ್ಯವನ್ನು ಸಮಬಲಕ್ಕೆ ತರಲು ಇನ್ನಿಲ್ಲದ ಪ್ರಯತ್ನ ಮಾಡಿತು. ಪಂದ್ಯದ ಕೊನೆಯ 4 ನಿಮಿಷಗಳಲ್ಲಿ ಲಭಿಸಿದ 2 ಪೆನಾಲ್ಟಿ ಕಾರ್ನರ್‌ಗಳು ವ್ಯರ್ಥವಾದವು. ಗೋಲಿ ಹೀಬಿನ್‌ ಜಂಗ್‌ ಜಬರ್ದಸ್ತ್ ಪ್ರದರ್ಶನ ನೀಡಿ ತಂಡವನ್ನು ಬಚಾಯಿಸಿದರು.

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.