ಕನ್ನಡಕ್ಕೊಬ್ಬ ಸ್ಟೈಲಿಶ್‌ ವಿಲನ್‌


Team Udayavani, Mar 9, 2018, 4:45 PM IST

kannadakobba.jpg

ಇವರನ್ನು ನೀವು ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನೋಡಿರುತ್ತೀರಿ. ಸಖತ್‌ ಸ್ಟೈಲಿಶ ವಿಲನ್‌ ಆಗಿ ಅನೇಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಿಧಾನವಾಗಿ ಈಗ ಒಂದಷ್ಟು ಸಿನಿಮಾಗಳಲ್ಲಿ ಬಿಝಿಯಾಗುತ್ತಿದ್ದಾರೆ ಕೂಡಾ. ಇವರ ಹೆಸರು ದೀಪಕ್‌ ಶೆಟ್ಟಿ. ಈಗಾಗಲೇ “ಶ್ರೀಕಂಠ’, “ಟೈಗರ್‌’, “ಭರ್ಜರಿ’, “ಗೌಡ್ರು ಹೋಟೆಲ್‌’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟಿಸಿರುವ ಅಷ್ಟೂ ಸಿನಿಮಾಗಳಲ್ಲಿ ದೀಪಕ್‌ ಮಾಡಿರೋದು ನೆಗೆಟಿವ್‌ ಪಾತ್ರಗಳನ್ನೇ.  

ದೀಪಕ್‌ ಹುಟ್ಟಿದ್ದು, ಬೆಳೆದಿದ್ದು, ಓದಿದ್ದು ಎಲ್ಲವೂ ಮಂಗಳೂರಿನಲ್ಲಿ. ಉದ್ಯೋಗ ಅರಸಿ ಹೋಗಿದ್ದು ದುಬೈಗೆ. ದುಬೈನಲ್ಲಿ ಒಳ್ಳೆಯ ಉದ್ಯೋಗವೂ ಇತ್ತು. ಕೆಲಸದ ವಿಚಾರದಲ್ಲಿ ಬೇಸರವಾಗುವಂಥದ್ದೇನೂ ಇರಲಿಲ್ಲ. ಆದರೆ, ಮನಸ್ಸು ಮಾತ್ರ ಬೇರೇನೋ ಬಯಸುತ್ತಿತ್ತು. ಈ ಕ್ಷೇತ್ರ ನನ್ನದಲ್ಲ. ದಿನಾ ನಾನು ನಾನಾಗಿದ್ದರೆ ಚೆನ್ನಾಗಿರಲ್ಲ, ದಿನಕ್ಕೊಂದು ಪಾತ್ರವಾಗಬೇಕು, ಹೊಸ ಹಾದಿ ಹಿಡಿಯಬೇಕೆಂಬ ತುಡಿತ ಜೋರಾಗುತ್ತದೆ. ದೀಪಕ್‌ ಶೆಟ್ಟಿ ದುಬೈನಿಂದ ಮಂಗಳೂರು ಫ್ಲೈಟ್‌ ಹತ್ತಿಯೇ ಬಿಡುತ್ತಾರೆ.

ಹೀಗೆ ಬಂದ ಅವರು ಮಾಡೆಲಿಂಗ್‌ನಲ್ಲೂ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಮಾಡೆಲಿಂಗ್‌ನಿಂದ ದೀಪಕ್‌ ಶೆಟ್ಟಿ ನೇರವಾಗಿ ಪ್ರವೇಶಿಸಿದ್ದು ಕಿರುತೆರೆಗೆ. “ಕಾದಂಬರಿ’ ಎಂಬ ಧಾರಾವಾಹಿಯಲ್ಲಿ ನಟಿಸುವ ಮೂಲಕ ದೀಪಕ್‌ ಬಣ್ಣದ ಲೋಕಕ್ಕೆ ಎಂಟ್ರಿಕೊಡುತ್ತಾರೆ. ಆ ನಂತರ ವಿನು ಬಳಂಜ ಅವರ “ಪ್ರೀತಿ ಇಲ್ಲದ ಮೇಲೆ’, “ಬಂದೇ ಬರುತಾವ ಕಾಲ’, “ನಿಗೂಢ’ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಆದರೆ, ದೀಪಕ್‌ ಶೆಟ್ಟಿಗೆ ಬ್ರೇಕ್‌ ಕೊಟ್ಟಿದ್ದು, “ಲವ್‌ಲವಿಕೆ’ ಧಾರಾವಾಹಿ.

ಈ ಧಾರಾವಾಹಿಯಲ್ಲಿ ವಯಸ್ಸಾದ ಪಾತ್ರ ಮಾಡುವ ಮೂಲಕ ಅನೇಕರ ಗಮನ ಸೆಳೆಯುತ್ತಾರೆ. ಈ ಧಾರಾವಾಹಿ ನೋಡಿ, ನಂದಕಿಶೋರ್‌ “ಟೈಗರ್‌’ ಚಿತ್ರದಲ್ಲಿ ಅವಕಾಶ ಕೊಟ್ಟರಂತೆ. “ನನಗೆ “ಲವ್‌ಲವಿಕೆ’ ಧಾರಾವಾಹಿ ಒಳ್ಳೆಯ ಹೆಸರು ತಂದುಕೊಟ್ಟಿತು. ಆ ಧಾರಾವಾಹಿಯಲ್ಲಿ ನಾನು ವಯಸ್ಸಾದ ಪಾತ್ರ ಮಾಡಿದ್ದೆ. ನನ್ನ ಹೇರ್‌ಸ್ಟೈಲ್‌ ಕೂಡಾ ಅದಕ್ಕೆ ಹೊಂದುವಂತಿತ್ತು. ಆ ಪಾತ್ರ ಒಪ್ಪಿಕೊಂಡಾಗ ಅನೇಕರು “ನಿನ್ನ ಕಥೆ ಮುಗೀತು, ಮುಂದೆ ನಿನಗೆ ಇಂತಹ ಪಾತ್ರಗಳೇ ಬರುತ್ತವೆ’ ಎಂದು ಹೆಸರಿಸಿದರು.

ಆದರೆ, ನಾನು ಅದನ್ನು ಸವಾಲಾಗಿ ಸ್ವೀಕರಿಸಿ, ಪಾತ್ರ ಮಾಡಿದೆ. ಅದು ನನಗೆ ಒಳ್ಳೆಯ ಹೆಸರು ತಂದುಕೊಟ್ಟಿತು’ ಎಂದು ತಮ್ಮ ಬಣ್ಣದ ಲೋಕದ ಆರಂಭದ ಬಗ್ಗೆ ಹೇಳುತ್ತಾರೆ ದೀಪಕ್‌ ಶೆಟ್ಟಿ. ದೀಪಕ್‌ ಶೆಟ್ಟಿಯವರು ಇಲ್ಲಿವರೆಗೆ ನಟಿಸಿದ ಸಿನಿಮಾಗಳನ್ನು ನೋಡಿದರೆ ಅಲ್ಲಿ ನಿಮಗೆ ಕಾಣಸಿಗೋದು ಒಬ್ಬ ಸ್ಟೈಲಿಶ್‌ ವಿಲನ್‌. ಮಾಡರ್ನ್ ಲುಕ್‌ನ ಸೂಟು-ಬೂಟು ಹಾಕಿಕೊಂಡಿರುವ ವಿಲನ್‌ ಪಾತ್ರಗಳಲ್ಲೇ ದೀಪಕ್‌ ಕಾಣಿಸಿಕೊಂಡಿದ್ದಾರೆ. ಮುಂದೆ ಒಪ್ಪಿಕೊಂಡಿರುವ ಸಿನಿಮಾಗಳಲ್ಲೂ ಅದೇ ತರಹದ ಪಾತ್ರ ಅವರಿಗೆ ಸಿಕ್ಕಿದೆಯಂತೆ.

“ಬಹುಶಃ ನನ್ನ ಸಾಲ್ಟ್ ಅಂಡ್‌ ಪೆಪ್ಪರ್‌ ಹೇರ್‌ಸ್ಟೈಲ್‌ ಹಾಗೂ ನನ್ನ ಲುಕ್‌ನಿಂದಾಗಿ ನನಗೆ ಸ್ಟೈಲಿಶ್‌ ವಿಲನ್‌ ಪಾತ್ರಗಳು ಸಿಗುತ್ತಿರಬಹುದು. ಆದರೆ, ಪಾತ್ರಗಳ ಹಿನ್ನೆಲೆ ಬೇರೆಯಾಗಿರುವುದರಿಂದ ಹೊಸತನದಿಂದ ಪಾತ್ರ ನಿರ್ವಹಿಸಲು ಪ್ರಯತ್ನಿಸುತ್ತಿದ್ದೇನೆ’ ಎನ್ನುವುದು ದೀಪಕ್‌. ಮುಂದೆ “ಅಸತೋಮ ಸದ್ಗಮಯ’, “ಕಾಲಚಕ್ರ’, “ಪೊಗರು’ ಸೇರಿದಂತೆ ಇನ್ನೂ ಒಂದಷ್ಟು ಚಿತ್ರಗಳಲ್ಲಿ ದೀಪಕ್‌ ಶೆಟ್ಟಿ ನಟಿಸಲಿದ್ದಾರಂತೆ. ಸದ್ಯ ಯೋಗರಾಜ್‌ ಭಟ್‌ ನಿರ್ದೇಶನದ “ಪಂಚತಂತ್ರ’ ಚಿತ್ರದಲ್ಲಿ ದೀಪಕ್‌ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಹಿಪ್ಪಿ ಸ್ಟೈಲ್‌ನ ಪಾತ್ರವಂತೆ. ವಯಸ್ಸಾದರೂ ದೇಹವನ್ನು ಗಟ್ಟಿಮುಟ್ಟಾಗಿಟ್ಟುಕೊಂಡು ಜಾಲಿಯಾಗಿರುವ ಪಾತ್ರ ಸಿಕ್ಕಿದೆಯಂತೆ. ದೀಪಕ್‌ ಶೆಟ್ಟಿಗೆ ಸಾಕಷ್ಟು ಅವಕಾಶಗಳು ಬರುತ್ತಿವೆ. ಬಹುತೇಕ ಪಾತ್ರಗಳು ನೆಗೆಟಿವ್‌. ಹಾಗಾದರೆ ಒಂದು ಸಿನಿಮಾ ಒಪ್ಪಿಕೊಳ್ಳುವ ಮುನ್ನ ದೀಪಕ್‌ ಏನು ನೋಡುತ್ತಾರೆ ಎಂಬ ಪ್ರಶ್ನೆ ಬರುತ್ತದೆ. ಅದಕ್ಕೂ ಅವರು ಉತ್ತರಿಸಿದ್ದಾರೆ.

“ನಾನು ಯಾವುದೇ ಪಾತ್ರ ಒಪ್ಪಿಕೊಳ್ಳುವ ಮುನ್ನ ಆ ಪಾತ್ರದ ಆದ್ಯತೆ ನೋಡುತ್ತೇನೆ. ಸಿನಿಮಾಕ್ಕೆ ಆ ಪಾತ್ರ ಎಷ್ಟು ಪ್ರಾಮುಖ್ಯವಾಗಿರುತ್ತದೆ ಎಂಬುದು ಕೂಡಾ ಮುಖ್ಯವಾಗುತ್ತದೆ. ಜೊತೆಗೆ ಸುಖಾಸುಮ್ಮನೆ ಬಂದು ಬಿಲ್ಡಪ್‌ ಕೊಡುವ ಪಾತ್ರ ನನಗಿಷ್ಟವಿಲ್ಲ. ನಟನೆಗೆ ಅವಕಾಶವಿರಬೇಕು. ಜೊತೆಗೆ ಆ ಪಾತ್ರ ನನಗೆ ಹೊಂದಿಕೆಯಾಗಬೇಕು. ಯಾರು ಸಿಕ್ಕಿಲ್ಲ ಎಂಬ ಕಾರಣಕ್ಕೆ ನಾನು ಪಾತ್ರ ಮಾಡಲು ಸಿದ್ಧವಿಲ್ಲ’ ಎಂದು ತಮ್ಮ ಸಿನಿಮಾ ಆಯ್ಕೆಯ ಬಗ್ಗೆ ಹೇಳುತ್ತಾರೆ. 

* ರವಿಪ್ರಕಾಶ್ ರೈ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.