ರಸ್ತೆ ಬದಿಗೆ ಇಳಿದರೆ ಪ್ರಾಣಕ್ಕೆ ಆಪತ್ತು 


Team Udayavani, Mar 11, 2018, 12:17 PM IST

11-March-9.jpg

ಸುಳ್ಯ : ಬೆಳ್ಳಾರೆ-ಸವಣೂರು ಸಂಪರ್ಕ ರಸ್ತೆಯ ಕುಂಡಡ್ಕದಲ್ಲಿ ರಸ್ತೆ ಬದಿ ಕುಸಿದಿದ್ದು, ವಾಹನ ಸೈಡ್‌ಗೆ ಇಳಿದರೆ, ಪ್ರಾಣಕ್ಕೆ ಆಪತ್ತು ಕಟ್ಟಿಟ್ಟ ಬುತ್ತಿ. ಮಡಿಕೇರಿ, ಸುಳ್ಯ ಭಾಗದಿಂದ ಈ ರಸ್ತೆಯಿಂದ ಶಾಂತಿಮೊಗರು ಹೊಸ ಸೇತುವೆ ಮೂಲಕ ಧರ್ಮಸ್ಥಳಕ್ಕೆ ತೆರಳಬಹುದಾದ ಕಾರಣ, ವಾಹನ ಸಂಚಾರವು ಹೆಚ್ಚಾಗಿದೆ.

ಸವಣೂರು-ಬೆಳ್ಳಾರೆ ರಸ್ತೆಯ ಕನ್ನಡ ಕುಮೇರು ತನಕ ರಸ್ತೆ ಅಗಲ ಕಾಮಗಾರಿ ಆಗಿದ್ದು, ಉಳಿದ ಭಾಗ ವಿಸ್ತರಣೆ ಆಗಿಲ್ಲ. ಪರಣೆ-ಮುಕ್ಕೂರು-ಕುಂಡಡ್ಕ-ಪೆರುವಾಜೆ-ಬೆಳ್ಳಾರೆ ರಸ್ತೆ ಏಕ ಪಥ ರಸ್ತೆಯಾಗಿದ್ದು, ಎದುರಿನಿಂದ ವಾಹನ ಬಂದರೆ ಬದಿಗೆ ಇಳಿಸಬೇಕು. ಆಗ ಅಪಾಯ ಎದುರಾಗುತ್ತಿದ್ದು, ಹಲವು ವಾಹನಗಳು ಅಪಘಾತಕ್ಕೆ ಈಡಾಗಿವೆ. ಕೆಲವು ಕೂದಲಳೆಯ ಅಂತರದಿಂದ ಪಾರಾಗಿದೆ ಅನ್ನುತ್ತಾರೆ ವಾಹನ ಸವಾರ ಯೂಸುಫ್‌ ಮುಕ್ಕೂರು.

ಮನವಿಗೆ ಇಲ್ಲ ಸ್ಪಂದನೆ
ಕುಂಡಡ್ಕದ ರಸ್ತೆ ಕುಸಿತದ ಬಳಿ ವಾಹನ ಸೈಡ್‌ಗೆ ಇಳಿದರೆ ನೇರವಾಗಿ ಮಳೆನೀರು ಹರಿದು ಹೋಗುವ ದೊಡ್ಡ ಚರಂಡಿಗೆ ಬೀಳುವ ಅಪಾಯವಿದೆ. ಲೋಕೋಪಯೋಗಿ ಇಲಾಖಾ ವ್ಯಾಪ್ತಿಗೆ ಈ ರಸ್ತೆ ಸೇರಿದೆ. ಕುಸಿತದ ಜಾಗದಲ್ಲಿ ತಡೆಗೋಡೆ ನಿರ್ಮಿಸುವಂತೆ ಜನರು ಒತ್ತಾಯಿಸಿದ್ದಾರೆ. ಆದರೆ ಅದಕ್ಕೆ ಸ್ಪಂದನೆ ಸಿಕ್ಕಿಲ್ಲ ಎಂದು ಪಾದಚಾರಿ ವೆಂಕಟರಮಣ ಕುಂಡಡ್ಕ ತಿಳಿಸಿದ್ದಾರೆ.

ಅಪಾಯಕಾರಿ ಮರ
ರಸ್ತೆ ಕುಸಿತದ ಬಳಿಯೇ ಅಪಾಯಕಾರಿ ಮರವಿದೆ. ಇಲ್ಲಿ ಎಚ್‌ಟಿ ಲೈನ್‌, ಟಿ.ಸಿ. ಇದೆ. ಕೆಲ ತಿಂಗಳ ಹಿಂದಷ್ಟೇ ಎಚ್‌ಟಿ ಲೈನ್‌ ಮೇಲೆ ಮರದ ಗೆಲ್ಲು ಬಿದ್ದು, ವಿದ್ಯುತ್‌ ಕಂಬಧರೆಗುರುಳಿತ್ತು. ಮನೆಯ ಎಲೆಕ್ಟ್ರಾನಿಕ್‌ ಪರಿಕರಗಳು ಹಾನಿಗೀಡಾಗಿದ್ದವು. ಇಲ್ಲಿ ರಸ್ತೆಗೆ ತಡಗೋಡೆ, ಅಪಾಯಕಾರಿ ಮರ ತೆರವು ಆಗಬೇಕು ಎನ್ನುತ್ತಾರೆ ಉಮ್ಮರ್‌ ಕುಂಡಡ್ಕ.

ಅಪಾಯದ ಎಚ್ಚರಿಕೆ
ಶನಿವಾರವೂ ಕಾರೊಂದು ಇಲ್ಲಿ ಅದೃಷ್ಟವಶಾತ್‌ ಪಾರಾಗಿದ್ದು, ಅಪಾಯದ ಬಗ್ಗೆ ಕುಸಿತದ ಸ್ಥಳದಲ್ಲಿ ಮರದ ತುಂಡು, ಹಗ್ಗ ಕಟ್ಟಲಾಗಿದೆ. ಮೂರು ರಸ್ತೆ ಸೇರುವ ತಿರುವು ರಸ್ತೆ ಇದಾಗಿದೆ. ಆದರೂ ಇಲ್ಲಿ ಲೋಕೋಪಯೋಗಿ ಇಲಾಖೆ ಎಚ್ಚರಿಕೆಯ ಫಲಕ ಅಳವಡಿಸಿಲ್ಲ. ತಿರುವಿನ ಪರಿವೆಯೇ ಇಲ್ಲದ ಕಾರಣ ಕೆಲ ವರ್ಷಗಳ ಹಿಂದೆ ಬೈಕ್‌ ಸವಾರರಿಬ್ಬರು ಆಳೆತ್ತರದ ಚರಂಡಿ ಬಿದ್ದ ಘಟನೆ ಸಂಭವಿಸಿತ್ತು. ಅದಾಗ್ಯೂ ಅಧಿಕಾರಿಗಳು ಸ್ಪಂದಿಸುವ ಮನಸ್ಸು ಮಾಡಿಲ್ಲ.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.