ಸಂಗಮ ಸ್ಥಳದಲ್ಲಿ ಮುಕ್ತಿ ಧಾಮಕ್ಕೆ ಶಂಕುಸ್ಥಾಪನೆ 


Team Udayavani, Mar 11, 2018, 5:30 PM IST

11-March-17.jpg

ಉಪ್ಪಿನಂಗಡಿ: ಗಯಾಪದ ಕ್ಷೇತ್ರ, ದಕ್ಷಿಣ ಕಾಶಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸನ್ನಿಧಿ ಮುಂದೆ, ಸಂಗಮ ತಾಣದಲ್ಲಿ ಮುಕ್ತಿಧಾಮ ನಿರ್ಮಾಣಕ್ಕೆ ಶಂಕು ಸ್ಥಾಪನೆ ಕಾರ್ಯಕ್ರಮ ಮಾ. 9ರಂದು ಜರಗಿತು.

ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ರಘುನಾಥ ರೈ ಶಂಕುಸ್ಥಾಪನೆ ನೆರವೇರಿಸಿದರು. ಆಸ್ತಿಕ ಬಂಧುಗಳ ಅಪರ ಕ್ರಿಯೆ ಸಲುವಾಗಿ ನದಿ ಸಂಗಮದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ಮುಕ್ತಿಧಾಮ ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 1 ಕೋಟಿ ರೂಪಾಯಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಭಾರತದ ಉತ್ತರದಲ್ಲಿ ಕಾಶೀ ವಿಶ್ವನಾಥ, ವೀರಭದ್ರ ಸನ್ನಿಧಿಯಿದ್ದು, ಉತ್ತರ ಕಾಶಿಯೆಂದೇ ಪ್ರಸಿದ್ಧಿಯಾಗಿದೆ. ದಕ್ಷಿಣದಲ್ಲಿ ಸಹಸ್ರಲಿಂಗೇಶ್ವರ, ಮಹಾ ಕಾಳಿ, ಕಾಲಭೈರವ ಇದ್ದು ದಕ್ಷಿಣ ಕಾಶಿಯೆಂದೇ ಪ್ರಖ್ಯಾತವಾಗಿದೆ. ಗಂಗೆ- ಯಮುನೆಯವರ ಸಂಗಮವಾಗಿ ಪ್ರಯಾಗವೆಂದು ಉತ್ತರ ಕಾಶಿ ಪ್ರಸಿದ್ಧವಾಗಿದೆ. ಉಪ್ಪಿನಂಗಡಿಯಲ್ಲಿ ಕುಮಾರಧಾರಾ-ನೇತ್ರಾವತಿ ಹಾಗೂ ಗುಪ್ತಗಾಮಿನಿಯಗಿ ಸರಸ್ವತಿ ನದಿ ಹರಿಯುತ್ತಿದ್ದಾಳೆ ಎಂದು ಐಹಿತ್ಯ ಇದ್ದು, ತ್ರಿವೇಣಿ ಸಂಗಮವೆನಿಸಿದೆ. ಭಕ್ತಿ, ಮುಕ್ತಿ ಎರಡನ್ನೂ ಕರುಣಿಸುವ ಸಹಸ್ರಲಿಂಗೇಶ್ವರನ ಸನ್ನಿಧಿ ಸದ್ಗತಿದಾಯಕ ಕ್ರಿಯೆಗಳ ಮೂಲಕ ಮೋಕ್ಷಧಾಮ ವೆನಿಸಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಮುಕ್ತಿ ಧಾಮ ನಿರ್ಮಾಣ ಮಾಡಬೇಕು ಎನ್ನುವ ಬಹುಕಾಲದ ಬೇಡಿಕೆ ಈಡೇರುವ ಕಾಲ ಕೂಡಿ ಬಂದಿದೆ ಎಂದರು.

ದೇವಸ್ಥಾನದ ಅರ್ಚಕ ಹರೀಶ್‌ ಉಪಾಧ್ಯಾಯ ಪೂಜಾ ವಿಧಿ-ವಿಧಾನ ನೆರವೇರಿಸಿದರು. ಸಮಿತಿ ಸದಸ್ಯರಾದ ಜಿ. ಕೃಷ್ಣ ರಾವ್‌ ಅರ್ತಿಲ, ಬೆಳ್ಳಿಪ್ಪಾಡಿ ಪ್ರಕಾಶ್‌ ರೈ, ಸೋಮನಾಥ, ರಾಧಾಕೃಷ್ಣ ನಾೖಕ್‌, ಡಾ| ರಾಜಾರಾಮ, ಅನಿತಾ ಕೇಶವ್‌, ಸವಿತಾ ಹರೀಶ್‌, ಮಾಜಿ ಅಧ್ಯಕ್ಷ ಸಂಜೀವ ಗಾಣಿಗ, ಸ್ಥಳೀಯ ಪ್ರಮುಖರಾದ ಯು. ರಾಮ, ಕಂಗ್ವೆ ವಿಶ್ವನಾಥ ಶೆಟ್ಟಿ, ಕೆ. ಗಣೇಶ್‌ ಭಟ್‌ ಎನ್‌. ಉಮೇಶ್‌ ಶೆಣೈ ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಸ್ವಾಗತಿಸಿ, ವ್ಯವಸ್ಥಾಪಕ ವೆಂಕಟೇಶ್‌ ವಂದಿಸಿದರು. ಪ್ರಸಾದ್‌, ದಿವಾಕರ ವಿವಿಧ ಕಾರ್ಯಕ್ರಮ ನಿರೂಪಿಸಿದರು.

ಸಂಗಮ ಸ್ಥಳದಲ್ಲಿ ಮುಕ್ತಿಧಾಮ
ಪ್ರತಿ ವರ್ಷ ಮಳೆಗಾಲ ಆರಂಭವಾದಂತೆ ವರ್ಷದ 4 ತಿಂಗಳು ನೇತ್ರವಾತಿ ಹಾಗೂ ಕುಮಾರಧಾರ ನದಿಗಳು ತುಂಬಿ ಹರಿಯುತ್ತಿದ್ದು, ಎರಡು ನದಿಗಳ ಜೋಡಣೆಯಾಗುವಲ್ಲಿ ಪಿಂಡ ಪ್ರದಾನ ನಡೆಸಿದರೆ ಮೃತರಿಗೆ ಸದ್ಗತಿ ದೊರೆಯುವ ಭಾವನೆಯಿದ್ದು, ಮಳೆಗಾಲದಲ್ಲಿ ಅಲ್ಲಿಗೆ ತೆರಳಲು ತುಂಬಿ ಹರಿಯುತ್ತಿದ್ದ ನದಿಗಳ ನೀರಿನಿಂದ ಅಸಾಧ್ಯವಾಗಿತ್ತು. ಪಿಂಡ ಪ್ರದಾನಕ್ಕೆ ತೆರಳಿದ್ದ ಕೆಲವು ಭಕ್ತರು ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರು. ಈ ಅಪಾಯ ತಪ್ಪಿಸಲು ಹಾಗೂ ಭಕ್ತರ ನಂಬಿಕೆಯಂತೆ ಪಿಂಡ ಪ್ರದಾನ ನೆರವೇರಿಸಲು ಅನುಕೂಲವಾಗುವಂತೆ ಎರಡು ನದಿಗಳ ಸಂಗಮದಲ್ಲಿ ಈ ಮುಕ್ತಿಧಾಮ ರಚಿಸುವ ಪ್ರಯತ್ನ ನಡೆಸಲಾಗಿದೆ. ಸರಕಾರದ ಅನುದಾನಕ್ಕಾಗಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಈಗಲೂ ಪ್ರಯತ್ನ ಮುಂದುವರಿಸಿದ್ದಾರೆ. ನೀಲಿ ನಕಾಶೆಯನ್ನು ಮುಜರಾಯಿ ಇಲಾಖೆಗೆ ತಲುಪಿಸಲಾಗಿದೆ. ದೇವಸ್ಥಾನದ ಸ್ವಂತ ನಿಧಿ,ಸಾರ್ವಜನಿಕ ದೇಣಿಗೆಯನ್ನು ಮುಕ್ತಿಧಾಮ ಕಾರ್ಯಕ್ಕೆ ಅಣಿಯಾಗಿದ್ದೇವೆ ಎಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರಿಶ್ಚಂದ್ರ ತಿಳಿಸಿದ್ದಾರೆ .

ಟಾಪ್ ನ್ಯೂಸ್

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

Doping detection among minor sports stars

ಅಪ್ರಾಪ್ತರಲ್ಲಿ ಡೋಪಿಂಗ್‌ ಪತ್ತೆ: ಹೆಚ್ಚಿನ ಬಜೆಟ್‌ಗೆ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.