ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಮಾರಾಮಾರಿ


Team Udayavani, Mar 12, 2018, 6:30 AM IST

Ban120318.jpg

ಬೆಳಗಾವಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಒಳಬೇಗುದಿ ಭುಗಿಲೆದ್ದಿದೆ. ಶನಿವಾರ ಕಲಬುರಗಿಯಲ್ಲಿ ಕಾರ್ಯಕರ್ತರ ಮಾರಾಮಾರಿ ನಡೆದ ಬೆನ್ನಲ್ಲೇ ಭಾನುವಾರ ನಗರದಲ್ಲಿ ನಡೆದ ಬಿಜೆಪಿ ಬೂತ್‌ಮಟ್ಟದ ಸಭೆಯಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಪಿ.ಡಿ. ಧೋತ್ರೆ ಹಾಗೂ ಮುಖಂಡ ಸುನೀಲ ಚೌಗಲೆ ಮೇಲೆ ಮಾಜಿ ಶಾಸಕ ಹಾಗೂ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ.

ಅನಗೋಳದ ಭಾಗ್ಯನಗರ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ನವಶಕ್ತಿ ಸಮಾವೇಶದಲ್ಲಿ ಬಿಜೆಪಿ ಮುಖಂಡರೇ ಒಬ್ಬರಿಗೊಬ್ಬರೂ ಹೊಡೆದಾಡಿಕೊಂಡು ಬೀದಿಗೆ ಬಂದಿದ್ದು,  ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬೂತ್‌ಮಟ್ಟದ ಸಭೆಯಲ್ಲಿ ಮಾಜಿ ಶಾಸಕ ಅಭಯ ಪಾಟೀಲ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಸಭೆ ನಡೆಯುತ್ತಿದ್ದಂತೆ ಬಿಜೆಪಿ ಮುಖಂಡ ಹಾಗೂ ಟಿಕೆಟ್‌ ಆಕಾಂಕ್ಷಿ ಪಿ.ಡಿ. ಧೋತ್ರೆ ಸಭೆಗೆ ಬಂದಿದ್ದಾರೆ. ಆಗ ಸಭೆಗೆ ಏಕೆ ಬಂದಿದ್ದೀಯಾ ಎಂದು ಮಾಜಿ ಶಾಸಕರ ಬೆಂಬಲಿಗರು ಪ್ರಶ್ನಿಸಿದ್ದಾರೆ. ಆಗ ಧೋತ್ರೆ ಅವರು ಸಮಾವೇಶಕ್ಕೆ ಬರುವಂತೆ ಸಂದೇಶ ಬಂದಿದೆ. ಹೀಗಾಗಿ  ಬಂದಿರುವುದಾಗಿ ತಿಳಿಸುತ್ತಿದ್ದಂತೆ ಮಾಜಿ ಶಾಸಕ ಅಭಯ ಪಾಟೀಲ್‌ ಹಾಗೂ ಧೋತ್ರೆ ನಡುವೆ ಮಾತಿನ ಚಕಮಕಿ ನಡೆದಿದೆ. ಮಧ್ಯೆ ಪ್ರವೇಶಿಸಿದ ಅಭಯ ಪಾಟೀಲ್‌ ಬೆಂಬಲಿಗರು ಹಾಗೂ ಧೋತ್ರೆ ನಡುವೆ ಗುದ್ದಾಟ ಆರಂಭವಾಗುತ್ತಿದ್ದಂತೆ ಪರಸ್ಪರ  ಹೊಡೆದಾಡಿಕೊಂಡಿದ್ದಾರೆ. ಆಗ ಧೋತ್ರೆ ಅವರಿಗೆ  ಹಿಗ್ಗಾಮುಗ್ಗಾ ಥಳಿಸಲಾಗಿದೆ. ಸುನೀಲ ಚೌಗಲೆ  ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಸಮಾವೇಶದಲ್ಲಿ ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸಹ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ಸೇರಿ ಪಕ್ಷದ ಪದಾಧಿಕಾರಿಗಳು ಇದ್ದರು. ಇವರ ಸಮ್ಮುಖದಲ್ಲೇ ಗಲಾಟೆ ನಡೆದಿದ್ದು ತೀವ್ರ ಇರಸುಮುರಸು ಉಂಟು ಮಾಡಿದೆ. ಗಾಯಗೊಂಡ ಪಿ.ಡಿ. ಧೋತ್ರೆ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ನಂತರ  ಬಿಜೆಪಿ ಪದಾಧಿಕಾರಿಗಳು, ಮುಖಂಡರು ಆಗಮಿಸಿ ಆರೋಗ್ಯ ವಿಚಾರಿಸಿದರು. ಆವರಣದ ಸುತ್ತ ಕಾರ್ಯಕರ್ತರು ಜಮಾಯಿಸಿದ್ದರು. ಕೆಲಕಾಲ ಈ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸುದ್ದಿ ಹರಡುತ್ತಿದ್ದಂತೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಹಾಗೂ ನೇಕಾರರ ನಾಯಕ ಎಂ.ಡಿ. ಲಕ್ಷ್ಮೀನಾರಾಯಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಧೋತ್ರೆ ಅವರ ಆರೋಗ್ಯ ವಿಚಾರಿಸಿದರು.

ಯಾರ ಮೇಲೂ ನಾವು ಹಲ್ಲೆ ನಡೆಸಿಲ್ಲ. ಸುಳ್ಳು ಆರೋಪ ಹೊರಿಸಿ ಎಂಇಎಸ್‌ನವರಿಗೆ ಬೆಂಬಲ ನೀಡುವ ಕುತಂತ್ರ ಇದಾಗಿದೆ. ರಾಜಕೀಯವಾಗಿ ನಮ್ಮನ್ನು ತುಳಿಯುವ ಪ್ರಯತ್ನ ಇದಾಗಿದೆ. ಎಂಇಎಸ್‌ ಬೆಂಬಲಿಗರ ಹೊಸ ನಾಟಕ ಇದಾಗಿದೆ. ಹಲ್ಲೆ ಮಾಡುವಂಥ ಪ್ರವೃತ್ತಿಗೆ ನಾವು ಇಳಿಯುವುದಿಲ್ಲ.
– ಅಭಯ ಪಾಟೀಲ, ಮಾಜಿ ಶಾಸಕ

ನೇಕಾರರ ಮುಖಂಡ ಧೋತ್ರೆ ಅವರ ಮೇಲೆ ಹಲ್ಲೆ ನಡೆಸಿರುವ ಮಾಜಿ ಶಾಸಕರ ಗೂಂಡಾವರ್ತನೆಯನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಗೃಹ ಸಚಿವರು ಹಾಗೂ ಐಜಿಪಿ ಗಮನಕ್ಕೆ ತಂದು ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಲಾಗುವುದು. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
– ಎಂ.ಡಿ. ಲಕ್ಷ್ಮೀನಾರಾಯಣ, ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.