ಮತದಾನ ಮಾಡದವರಿಗೆ ಸೌಲಭ್ಯ ನಿರಾಕರಣೆ ಚಿಂತನ


Team Udayavani, Mar 12, 2018, 3:08 PM IST

bid-.jpg

ಬೀದರ: ಮತದಾನ ಒಂದು ಸಾಂವಿಧಾನಿಕ ಹಕ್ಕಾಗಿದ್ದು ಪ್ರತಿ ಭಾರತೀಯನ ಕರ್ತವ್ಯವೂ ಹೌದು. ಆದರೆ ಜನ ನಿರಾಸಕ್ತಿಯಿಂದ ಮತದಾನ ಮಾಡದಿದ್ದರೆ ಅಂಥವರಿಗೆ ಸರ್ಕಾರದ ಎಲ್ಲ ಸೌಲಭ್ಯಗಳನ್ನು ನಿರಾಕರಿಸುವ ಕುರಿತು
ಚಿಂತನೆ ನಡೆದಿದೆ ಎಂದು ಜಿಪಂ ಸಿಇಒ ಡಾ| ಆರ್‌. ಸೆಲ್ವಮಣಿ ಹೇಳಿದರು.

ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಪ್ರಜಾಪ್ರಭುತ್ವ ಮೌಲ್ಯಗಳ ಜಾಗೃತಿಗಾಗಿ ಚುನಾವಣೆ ನಿಮಿತ್ತ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಹಿಂದಿಗಿಂತ ಈಗ ಮತದಾನದ ಪ್ರಮಾಣ ಹೆಚ್ಚಾದರೂ ಪೂರ್ಣಪ್ರಮಾಣದ
ಗುರಿ ತಲುಪಲಾಗುತ್ತಿಲ್ಲ. ಮತದಾರರ ದಿನಾಚರಣೆ ಸೇರಿದಂತೆ ಅನೇಕ ರೀತಿಯ ಪ್ರಚಾರ ಕಾರ್ಯಕ್ರಮ ಆಯೋಜಿಸಿದ್ದು ಬರುವ ದಿನಗಳಲ್ಲಿ ಈ ಪ್ರಕ್ರಿಯೆಗೆ ಹೊಸ ತಿರುವು ಬರಲಿ. ಅದಕ್ಕೆ ಸಾಹಿತಿ, ಕಲಾವಿದರ ನೆರವಿರಲಿ
ಎಂದರು.

ಸ್ವತ್ಛ ಭಾರತ ಮಿಷನ್‌ನ ನೋಡಲ್‌ ಅಧಿಕಾರಿ ಡಾ|ಗೌತಮ ಅರಳಿ ಮಾತನಾಡಿ, ಪ್ರಜ್ಞಾವಂತ ಸುಶೀಕ್ಷಿತ ಮತದಾರರ ನಿಷ್ಕಾಳಜಿಯಿಂದಲೆ ಮತದಾನದ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಸಲ ಮಹಿಳೆಯರು, ಮೊದಲ ಮತದಾರರಾದ ಯುವಕರು, ಅಂಗವಿಕಲರಿಗೆ ಹೆಚ್ಚು ಮಾಹಿತಿ ನೀಡಲಾಗುತ್ತಿದ್ದು, ಇವರೆಲ್ಲರಿಂದ ಶೇ. 100 ಮತದಾನ ಮಾಡಿಸುವ ಗುರಿ ಹೊಂದಲಾಗಿದೆ. ಮತ ಮಾರಿಕೊಳ್ಳುವ ಕೆಟ್ಟ ಪ್ರವೃತ್ತಿಯ ಸಂಗತಿಗಳೂ ಗಮನಕ್ಕೆ ಬಂದಿದ್ದು ದುರಂತದ ಸಂಗತಿಯೆಂದು ವಿಷಾದ ವ್ಯಕ್ತಪಡಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು
ಇರುವ ಮಹತ್ವದ ಅಸ್ತ್ರವೆಂದರೆ ಮತದಾನ. ಅದು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗಿ ನೆರವಾಗಬೇಕು ಎಂದರು.

ಶಾಂತಿಕಿರಣ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಚಂದ್ರಕಾಂತ ಪಾಟೀಲ, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ
ಸುಕಾಲೆ ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಅಧ್ಯಕ್ಷ ಎಂ.ಎಸ್‌. ಮನೋಹರ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಂತರ ನಡೆದ ಕವಿ ಗೋಷ್ಠಿಯಲ್ಲಿ ಓಂಕಾರ ಪಾಟೀಲ, ಡಾ| ವಜ್ರಾ ಪಾಟೀಲ, ವಿದ್ಯಾವತಿ ಬಲ್ಲೂರ, ಸಂಗಪ್ಪಾ ತೌಡೆ, ಸಾಧನಾ ರಂಜೋಳಕರ್‌, ಶ್ರೀದೇವಿ ಪಾಟೀಲ, ನಿತೇಶ್‌ ಶೇರಿಕಾರ, ಬಾಲಾಜಿ ಕುಂಬಾರ, ಶರಣಬಸವ ಲಂಗೋಟಿ, ಸುನೀತಾ ದಾಡಗಿ, ಶಾಮರಾವ್‌ ನೆಲವಾಡೆ, ನಾಗಶೆಟ್ಟಿ ಪಾಟೀಲ, ಪುಣ್ಯಾವತಿ ವಿಸಾಜಿ, ಕಸ್ತೂರಿ ಪಟಪಳ್ಳಿ ಮೊದಲಾದವರು ಕವನ ವಾಚನ ಮಾಡಿದರು. ನಿರ್ಣಾಯಕರಾಗಿ ಸಾಹಿತಿಗಳಾದ ಎಂ.ಜಿ. ದೇಶಪಾಂಡೆ, ಚಂದ್ರಪ್ಪಾ ಹೆಬ್ಟಾಳ್ಕರ್‌, ಯೂಸೂಫ್‌ ರಹೀಮ್‌ ಬಿದ್ರಿ ಭಾಗವಹಿಸಿದ್ದರು.

ಶ್ರೀದೇವಿ ಪಾಟೀಲ, ವಿದ್ಯಾವತಿ ಬಲ್ಲೂರ ಮತ್ತು ಸಾಧನಾ ರಂಜೋಳಕರ್‌ ಕ್ರಮವಾಗಿ ಪ್ರಥಮ (2000 ರೂ.) ದ್ವಿತೀಯ (1000ರೂ.) ಹಾಗೂ ತೃತೀಯ (500ರೂ.) ಬಹುಮಾನ ಪಡೆದರು. ಸಾಹಿತಿ ಸಂಜೀವಕುಮಾರ ಅತಿವಾಳೆ, ಓಂಪ್ರಕಾಶ ದಡ್ಡೆ, ರಮೇಶ ಬಿರಾದಾರ, ಶಿವಶಂಕರ ಟೋಕರೆ ಮೊದಲಾದವರು ಇದ್ದರು. ಕಸ್ತೂರಿ ಪಟಪಳ್ಳಿ ನಿರೂಪಿಸಿದರು. ಡಾ| ಬಸವರಾಜ ಬಲ್ಲೂರ ಸ್ವಾಗತಿಸಿದರು. ಲಂಗೋಟಿ ವಂದಿಸಿದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.