ಅರಿವಿಗೆ ಗುರು ಮೂಲ: ರಂಭಾಪುರಿ ಶ್ರೀ


Team Udayavani, Mar 13, 2018, 11:46 AM IST

gul-1.jpg

ಆಳಂದ: ಜಗದ ಕತ್ತಲೆ ಕಳೆಯಲು ಸೂರ್ಯಬೇಕು. ಬದುಕಿನ ಕತ್ತಲೆ ಕಳೆಯಲು ಗುರುಬೇಕು. ಗುರಿ ಮತ್ತು ಗುರುವಿನ ಮೂಲಕ ಜೀವನ ಉತ್ಕರ್ಷತೆ ಸಾಧ್ಯ. ಅಧ್ಯಾತ್ಮದ ಅರಿವಿಗೆ ಗುರು ಮೂಲ ಕಾರಣವೆಂಬುದನ್ನು ಮರೆಯಬಾರದೆಂದು ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ಮಾದನ ಹಿಪ್ಪರಗಿ ಗುರುಶಾಂತೇಶ್ವರ ಹಿರೇಮಠದ ಗುರುಪಟ್ಟಾಧಿಕಾರ ಮಹೋತ್ಸವ ಧರ್ಮ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ವೀರಶೈವ ಧರ್ಮದಲ್ಲಿ ತತ್ವತ್ರಯಗಳ ಪಾತ್ರ ಬಹಳ ಹಿರಿದು. ಅಷ್ಟಾವರಣ, ಪಂಚಾಚಾರ ಮತ್ತು ಷಟ್‌ಸ್ಥಲಗಳು ಜೀವನ ವಿಕಾಸಕ್ಕೆ ಸೋಪಾನ. ಅಷ್ಟಾವರಣದಲ್ಲಿ ಗುರುವಿಗೆ ಅತ್ಯಂತ ಮಹತ್ವವಿದೆ ಎಂದರು.

ಪರಶಿವನ ಸಾಕಾರ ರೂಪ ಗುರು ಎಂದು ಸಿದ್ಧಾಂತ ಶಿಖಾಮಣಿಯಲ್ಲಿ ಜಗದ್ಗುರು ರೇಣುಕಾಚಾರ್ಯರು ಸ್ಪಷ್ಟವಾಗಿ
ಉಲ್ಲೇಖೀಸಿದ್ದಾರೆ. ಸಂಸ್ಕಾರ ಸದ್ವಿಚಾರ ಮೌಲ್ಯಾಧಾರಿತ ಜೀವನ ವಿಕಾಸಕ್ಕೆ ಮೂಲವಾದ ಜ್ಞಾನವನ್ನು ಬೋಧಿ ಸುವುದೇ ಗುರು ಧರ್ಮವಾಗಿದೆ.

ಹೆತ್ತ ತಂದೆ-ತಾಯಿ ಮತ್ತು ಗುರುವನ್ನು ಮರೆಯಬಾರದೆಂದು ಶಾಸ್ತ್ರ ಹೇಳುತ್ತದೆ. ವೈಚಾರಿಕತೆಯ ಹೆಸರಿನಲ್ಲಿ ಸಭ್ಯತೆ
ಸಂಸ್ಕೃತಿ ನಾಶಗೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಮಠಗಳ ಪಾತ್ರ ಮಹತ್ವ ಪಡೆದಿದೆ. ಅರಿವು-ಆಚಾರ ಕಲಿಸುವ ಕೇಂದ್ರಗಳಾಗಿ ಮಠಗಳು ಕಾರ್ಯ ಮಾಡಬೇಕಾಗಿದೆ. ಅವಗುಣಗಳನ್ನು ದೂರಮಾಡಿ ಲಿಂಗ ಗುಣ ಸಂಪನ್ನರನ್ನಾಗಿ ಮಾಡುವುದೇ ಗುರು ಧರ್ಮವಾಗಿದೆ ಎಂದು ಹೇಳಿದರು.

ಮಾದನಹಿಪ್ಪರಗಿ ಗುರುಶಾಂತೇಶ್ವರ್‌ ಹಿರೇಮಠವು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶಾಖಾಮಠವಾಗಿದೆ. ಈ ಮಠದ ಹಿಂದಿನ ಪಟ್ಟಾಧ್ಯಕ್ಷರು ಧರ್ಮದ ಬೆಳಕನ್ನು ಬೀರಿದ್ದನ್ನು ಮರೆಯಲಾಗದು. 46 ವರುಷಗಳಿಂದ ಖಾಲಿಯಾಗಿದ್ದ ಈ ಗುರು ಸ್ಥಾನವನ್ನು ನೂತನ ಶಾಂತವೀರ ಶಿವಾಚಾರ್ಯ ಸ್ವಾಮಿಗಳು ಪಟ್ಟಾಭಿಷಿಕ್ತರಾಗಿ ತುಂಬಿದ್ದಾರೆ. ನಾಗಠಾಣ ಹಿರೇಮಠದ ಚನ್ನಮಲ್ಲಿಕಾರ್ಜುನ  ಶಿವಾಚಾರ್ಯರು ನೂತನ ಶ್ರೀಗಳಿಗೆ ಧಾರ್ಮಿಕ ಸಂಸ್ಕಾರವಿತ್ತು ಷಟ್‌ಸ್ಥಲ ಬ್ರಹ್ಮೋಪದೇಶ ಮಾಡಿದರು. ನೂತನ ಶಾಂತವೀರ ಶಿವಾಚಾರ್ಯ ಸ್ವಾಮಿಗಳಿಗೆ ದಂಡಕ ಮಂಡಲು ಸಮೇತ ಪಂಚಮುದ್ರೆಗಳನ್ನಿತ್ತು ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು.

ಪಟ್ಟಾಧಿಕಾರ ಸಮಾರಂಭದಲ್ಲಿ ಚಿಣಮಗೇರಾ, ಮುಖೇಡ ಕಾಸರಳ್ಳಿ, ಆತನೂರು, ಕೊಣ್ಣೂರು, ಮೈಂದರ್ಗಿ, ಹತ್ತಳ್ಳಿ, ಉಡಗೀರ್‌, ದೋರನಳ್ಳಿ, ದುಧನಿ ಶ್ರೀಗಳು ಪಾಲ್ಗೊಂಡಿದ್ದರು. ಗೌಡಗಾಂವ್‌ ಹಿರೇಮಠದ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ನೇತೃತ್ವವನ್ನು ಶಿವಲಿಂಗೇಶ್ವರ ವಿರಕ್ತಮಠದ ಅಭಿನವ ಶಿವಲಿಂಗ ಸ್ವಾಮಿಗಳು ವಹಿಸಿದ್ದರು.

ನೂತನ ಪಟ್ಟಾಧ್ಯಕ್ಷ ಶಾಂತವೀರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು. ಪಟ್ಟಾಧಿ ಕಾರದ ವೈದಿಕ ಕಾರ್ಯಗಳನ್ನು ಸೊಲ್ಲಾಪುರದ ಡಾ| ಶಿವಯೋಗಿ ಶಾಸ್ತ್ರಿಗಳು, ಮಾದನಹಿಪ್ಪರಗಿ ಸೋಮನಾಥ ಶಾಸ್ತ್ರಿಗಳು, ಕಡಗಂಚಿ ಪಶುಪತಿ ವಿಶ್ವನಾಥಮಠ ಅವರು ನೆರವೇರಿಸಿದರು. ಸಮಾರಂಭದ ನಂತರ ನೂತನ ಶ್ರೀಗಳ ಪಲ್ಲಕ್ಕಿ ಮಹೋತ್ಸವ ಜರುಗಿತು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.