ಅತ್ಯಾಧುನಿಕ ಮಾದರಿಯ ಸಿಸಿ ಟಿವಿ ಕೆಮರಾಗಳ ಸ್ಥಾಪನೆ


Team Udayavani, Mar 15, 2018, 10:05 AM IST

CCTV-Camera-2-600.jpg

ಕಾಸರಗೋಡು: ರಾಜ್ಯದ ಪ್ರಧಾನ ನಗರಗಳಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳು ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಸ್ತೆಗಳಲ್ಲಿ ಹಾಗೂ ಪ್ರಮುಖ ಕೇಂದ್ರಗಳಲ್ಲಿ ದೈನಂದಿನ 24 ಗಂಟೆಗಳ ಕಾಲವೂ ಕಾರ್ಯಾಚರಿಸುವ ಅತ್ಯಾಧುನಿಕ ಮಾದರಿಯ ಸಿಸಿ ಟಿವಿ ಕ್ಯಾಮರಾಗಳನ್ನು  ಸ್ಥಾಪಿಸುವ ಮಹತ್ವದ ಯೋಜನೆಗೆ ಕೇರಳ ಗೃಹ ಇಲಾಖೆಯು ರೂಪು ನೀಡಿದೆ. ಇದಕ್ಕಾಗಿ 19.60 ಕೋಟಿ ರೂಪಾಯಿಗಳನ್ನು  ಸರಕಾರವು ಬಿಡುಗಡೆ ಮಾಡಿದೆ. ಅತಿ ಹೆಚ್ಚು  ಜನನಿಬಿಡತೆ ಹೊಂದಿರುವ 439 ರಸ್ತೆ  ಬದಿಯ ಹಲವು ಪ್ರದೇಶಗಳಲ್ಲಾಗಿ 1,004 ಸಿಸಿ ಟಿವಿ ಕ್ಯಾಮರಾಗಳನ್ನು  ಉದ್ದಿಮೆದಾರರ ಸಹಾಯದೊಂದಿಗೆ ಬ್ಯಾಂಕ್‌ಗಳು, ಎಟಿಎಂ, ಪೆಟ್ರೋಲ್‌ ಬಂಕ್‌, ಪ್ರಮುಖ ಬಸ್‌ ಮತ್ತು ರೈಲು ನಿಲ್ದಾಣಗಳು, ಚಿನ್ನದಂಗಡಿಗಳಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ.

ಇದಲ್ಲದೆ ಇಂತಹ ಕ್ಯಾಮರಾಗಳನ್ನು ಇನ್ನಷ್ಟು ಹೆಚ್ಚು ಕೇಂದ್ರಗಳಲ್ಲಿ  ಸ್ಥಾಪಿಸಲು ಕೂಡ ತೀರ್ಮಾನಿಸಲಾಗಿದೆ. ಆ ಮೂಲಕ ಅಪರಾಧ ಕೃತ್ಯಗಳನ್ನು ನಡೆಸುತ್ತಿರುವವರು ಮತ್ತು ರಸ್ತೆ ಅಪಘಾತಗಳಿಗೆ ಕಾರಣವಾಗುವ ವಾಹನಗಳ ಚಾಲಕರನ್ನು  ಸೆರೆಹಿಡಿದು ಅವರಿಗೆ ಕಾನೂನು ಪರ ಶಿಕ್ಷೆ ವಿಧಿಸಲು ಗೃಹ ಖಾತೆ ಮುಂದಾಗಿದೆ. ಕೇರಳದಲ್ಲಿ ಇತ್ತೀಚೆಗೆ ಕೊಲೆ, ದರೋಡೆ, ರಾಜಕೀಯ ಕೊಲೆ, ಹಿಂಸಾಚಾರ, ಮತೀಯ ಗಲಭೆ, ಕಳವು ಮತ್ತು  ಅವಘಡಗಳ ಸಂಖ್ಯೆ ಮಿತಿಮೀರುತ್ತಿದ್ದು, ಅದನ್ನು  ಸಂಪೂರ್ಣವಾಗಿ ತಡೆಗಟ್ಟುವುದೇ ಅತ್ಯಾಧುನಿಕ ಕ್ಯಾಮರಾಗಳನ್ನು  ಸ್ಥಾಪಿಸುವುದರ ಪ್ರಧಾನ ಉದ್ದೇಶವಾಗಿದೆ.

ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಇಂಟರ್‌ ಗ್ರೇಟೆಡ್‌ ಡಿಜಿಟಲ್‌ ಎನ್‌ಪೋರ್ಸ್‌ಮೆಂಟ್‌ ಸಿಸ್ಟಂ ಜಾರಿಗೊಳಿಸುವ ನಿರ್ಧಾರವನ್ನು ಕೂಡ ಗೃಹ ಇಲಾಖೆ ಕೈಗೊಂಡಿದ್ದು, ಇದರಿಂದ ಸಾರಿಗೆ ಕಾನೂನು ಉಲ್ಲಂಘನೆಯನ್ನು  ಸಮರ್ಪಕವಾಗಿ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಇಲಾಖೆಯ ಅಧಿಕಾರಿ ವಲಯ ತಿಳಿಸಿದೆ.

ವಿಶೇಷ ಕಂಟ್ರೋಲ್‌ ರೂಮ್‌
ರಾಜ್ಯದಲ್ಲಿ ಗೂಂಡಾಗಳನ್ನು ಹತ್ತಿಕ್ಕಲು ಆಧುನಿಕ ಶೈಲಿಯ ವಿಶೇಷ ಕಂಟ್ರೋಲ್‌ ರೂಮ್‌ಗಳನ್ನು ಸ್ಥಾಪಿಸಲು ಗೃಹ ಖಾತೆ ತೀರ್ಮಾನಿಸಿದೆ. ಕೇರಳದ ಹಲವೆಡೆಗಳಲ್ಲಿ ಅನೇಕ ರೀತಿಯ ಗೂಂಡಾಕೃತ್ಯಗಳು ನಡೆಯುತ್ತಿವೆ. ಮಾದಕದ್ರವ್ಯ ಸಾಗಾಟ, ಭೂ ಮಾಫಿಯಾ, ಹವಾಲಾ ಹಣ, ಕಾಳಧನ, ಲೈಂಗಿಕ ದಂಧೆ, ಮಾನವ ಕಳ್ಳಸಾಗಾಟ, ಅಕ್ರಮ ಹಫ್ತಾ  ವಸೂಲಿ, ಮಕ್ಕಳ ಸಾಗಾಟ, ಅವಯವ ಅಪಹರಣ, ಅಪಾರ ಬಡ್ಡಿ ದರದಲ್ಲಿ ಸಾಲ ನೀಡಿ ಮರುಪಾವತಿಸದವರ ಶೋಷಣೆ ಇತ್ಯಾದಿ ನಡೆಯುತ್ತಿರುತ್ತವೆ. ಮಾತ್ರವಲ್ಲದೆ ಕೆಲವು ರಾಜಕೀಯ ಪಕ್ಷಗಳು, ಸಂಘಟನೆಗಳು ಮತ್ತು  ವ್ಯಕ್ತಿಗಳು ಗೂಂಡಾಗಳಿಗೆ ಬೆಂಬಲ ನೀಡುತ್ತಿದ್ದಾರೆ. ಇಂತಹ ಗೂಂಡಾ ತಂಡಗಳನ್ನು ಸಂಪೂರ್ಣವಾಗಿ ಹತ್ತಿಕ್ಕುವ ಗುರಿಯೊಂದಿಗೆ ವಿಶೇಷ ಕಂಟ್ರೋಲ್‌ ರೂಮ್‌ಗಳನ್ನು ಸ್ಥಾಪಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.