ರಮಣ-ರಮಣಿ ಜೊತೆಗೆ ವೆಸ್ಲೆ ಚಿತ್ರ


Team Udayavani, Mar 16, 2018, 8:15 AM IST

a-23.jpg

ಒಂದು ಕಾಲಕ್ಕೆ ಒಂದೇ ಚಿತ್ರಕ್ಕೆ ಹಲವು ಜವಾಬ್ದಾರಿಗಳನ್ನು ಹೊರುತ್ತಿದ್ದ ವೆಸ್ಲೆ ಬ್ರೌನ್‌, ಸದ್ದಿಲ್ಲದೆ ಒಂದು ಹೊಸ ಚಿತ್ರವನ್ನು
ಪ್ರಾರಂಭಿಸಿದ್ದಾರೆ. ವಿಶೇಷವೆಂದರೆ, ಅವರ ಹೊಸ ಚಿತ್ರ “ರಮಣ-ರಮಣಿ’ಗೆ ಅವರು ಹೆಚ್ಚು ಜವಾಬ್ದಾರಿ ಬೇಡ ಅಂತ 
ತೀರ್ಮಾನಿಸಿಬಿಟ್ಟಿದ್ದಾರೆ. ಕಥೆ, ಚಿತ್ರಕಥೆ, ಛಾಯಾಗ್ರಹಣ ಮತ್ತು ನಿರ್ದೇಶನ ಮಾತ್ರ ತಮ್ಮ ಬಳಿ ಇಟ್ಟುಕೊಂಡು, ಮಿಕ್ಕಿದ್ದೆಲ್ಲವನ್ನೂ ಬೇರೆಯವರಿಗೆ ಹಂಚಿದ್ದಾರೆ. ಅಂದಹಾಗೆ, “ರಮಣ-ರಮಣಿ’ ಬಗ್ಗೆ ಮಾತನಾಡುವುದಕ್ಕೆ ಅವರು ತಮ್ಮ ತಂಡದ ಜೊತೆಗೆ
ಇತ್ತೀಚೆಗೆ ಬಂದಿದ್ದರು. ಈ ಚಿತ್ರದಲ್ಲಿ ಎಮೋಷನ್‌ಗೆ ಸಾಕಷ್ಟು ಒತ್ತು ನೀಡಿದ್ದಾರಂತೆ. “ಕಳೆದ ಒಂದೂವರೆ ವರ್ಷಗಳ ಕಾಲು ಕೂತು ಕಥೆ ಮಾಡಿದ್ದೇನೆ. ಚಿತ್ರದಲ್ಲಿ ಎಮೋಷನ್‌ಗಳಿಗೆ ಸಾಕಷ್ಟು ಒತ್ತು ಕೊಟ್ಟಿದ್ದೇನೆ. ಚಿತ್ರ ನೋಡಿದವರಿಗೆ ನಿಜವಾದ ಬದುಕು ಅರ್ಥವಾಗುತ್ತದೆ. ಈಗಾಗಲೇ ಶಿವಮೊಗ್ಗ ಮುಂತಾದ ಕಡೆ 20 ಪರ್ಸೆಂಟ್‌ ಚಿತ್ರೀಕರಣ ಮುಗಿದಿದೆ’ ಎಂದು ಹೇಳುತ್ತಾರೆ
ಅವರು.

ಇನ್ನು ಈ ಚಿತ್ರವನ್ನು ಜಯರಾಜ್‌ ಎನ್ನುವವರು ನಿರ್ಮಿಸುತ್ತಿದ್ದಾರೆ. ಸಾಕಷ್ಟು ಸಿನಿಮಾಗಳನ್ನು ನೋಡಿರುವ ಅವರಿಗೆ ಒಂದು ಚಿತ್ರ ನಿರ್ಮಿಸಬೇಕು ಎಂಬ ಆಸೆ ಇತ್ತಂತೆ. ಅದು ಈ ಚಿತ್ರದ ಮೂಲಕ ಈಡೇರಿದೆ. ನಿರ್ಮಾಪಕರ ಸಿನಿಮಾ ಪ್ರೀತಿ
ಎಷ್ಟಿದೆ ಎಂದು ವಿವರಿಸಿದ ವೆಸ್ಲೆ, “ಒಮ್ಮೆ ನಾವು ಮಾಲ್‌ವೊಂದರಲ್ಲಿ “ಊರ್ವಿ’ ಸಿನಿಮಾ ನೋಡೋಕೆ ಹೋಗಿದ್ದೆವು. ಆದರೆ, ಜನ ಕಡಿಮೆ ಇದ್ದುದರಿಂದ ಪ್ರದರ್ಶನ ಕ್ಯಾನ್ಸೆಲ್‌ ಮಾಡುವುದಕ್ಕೆ ಚಿತ್ರಮಂದಿರದವರು ಯೋಚಿಸಿದ್ದರು. ಆದರೆ, ಚಿತ್ರ
ನೋಡಲೇಬೇಕೆಂದು ನಿರ್ಮಾಪಕರು, ಅಷ್ಟೂ ಟಿಕೆಟುಗಳನ್ನು ಕೊಂಡು ಚಿತ್ರ ತೋರಿಸಿದರು. ಇದು ಅವರ ಸಿನಿಮಾ ಪ್ರೀತಿ. ಆ ಪ್ರೀತಿ ಇರುವುದರಿಂದಲೇ, ಚಿತ್ರಕ್ಕೆ ಯಾವ ಸಮಸ್ಯೆಯೂ ಆಗಿಲ್ಲ’ ಎಂದು ವೆಸ್ಲೆ ಹೇಳಿದರು. ಈ ಚಿತ್ರದ ನಿರ್ಮಾಣದಲ್ಲಿ ದಯಾನಂದ ಮಠಪತಿ, ಎಚ್‌. ರವಿಕುಮಾರ್‌ ಮತ್ತು ಮುನಿರಾಜ್‌ ಸಹ ತೊಡಗಿಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಅಭಿರಾಮ್‌ ಮತ್ತು ರಜತ್‌ ಲಕ್ಷ್ಮೀ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಅಭಿರಾಮ್‌ ಈ ಹಿಂದೆ ವೆಸ್ಲೆ ಅವರ “ಮೊದಲ ಮಿಂಚು’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದರು. ಈಗ ಮತ್ತೆ ವೆಸ್ಲೆ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಖುಷಿಯಾಗಿದೆ ಎನ್ನುತ್ತಾರೆ ಅಭಿರಾಮ್‌. ಮಾಡಲಿಂಗ್‌ ಕ್ಷೇತ್ರದಲ್ಲಿದ್ದ ರಜತ್‌ ಲಕ್ಷ್ಮೀ ಈ ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕಿಯಾಗಿ ಚಿತ್ರರಂಗಕ್ಕೆ ಬಂದಿದ್ದಾರೆ. ಇನ್ನು ಅಭಿಲಾಶ್‌ ಮತ್ತು ಜೋಯೆಲ್‌ ಸಂಗೀತ ಸಂಯೋಜಿಸಿದರೆ, ಸುರೇಶ್‌ ಅರಸ್‌ ಅವರು ಸಂಕಲನ ಮಾಡಿದ್ದಾರೆ.

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.