ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಭೇಟಿ: ಸಿದ್ಧತೆ ಪರಿಶೀಲನೆ
Team Udayavani, Mar 16, 2018, 2:32 PM IST
ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾ. 20ರಂದು ಮಂಗಳೂರಿಗೆ ಆಗಮಿಸಿ ನೆಹರೂ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರ ಪೂರ್ವಭಾವಿಯಾಗಿ ಪಕ್ಷದ ಮೈಸೂರು ವಿಭಾಗದ ಉಸ್ತುವಾರಿ ವಿಷ್ಣುನಾಥನ್, ಸಚಿವ ಯು.ಟಿ. ಖಾದರ್, ವಿಧಾನಪರಿಷತ್ ಮುಖ್ಯಸಚೇತಕ
ಐವನ್ ಡಿ’ಸೋಜಾ, ಮೇಯರ್ ಭಾಸ್ಕರ್ ಕೆ., ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೆಹರೂ ಮೈದಾನಕ್ಕೆ ಗುರುವಾರ ಆಗಮಿಸಿ ಸಿದ್ಧತೆಗಳನ್ನು ಪರಿಶೀಲಿಸಿದರು.