ಶಿಕ್ಷಣ ಸಚಿವರಿಗೊಂದು ಬಹಿರಂಗ ಪತ್ರ


Team Udayavani, Mar 17, 2018, 7:30 AM IST

6.jpg

8ನೇ ತರಗತಿಯ ಬೇಸಿಗೆ ರಜೆಯಲ್ಲಿ ನಾನು ಅವನಿಗೆ ಕನ್ನಡ ಪಾಠ ಆರಂಭಿಸಬೇಕೆಂದು ಯೋಚಿಸಿದ್ದೆ. ಆದರೆ ಕನ್ನಡ ಪಠ್ಯ ಪುಸ್ತಕ  ಬಂದದ್ದೇ 9ನೇ ತರಗತಿ ಆರಂಭವಾಗಿ ವಾರಗಳ ನಂತರ. ಇದು ಯಾವತ್ತೂ ಹೀಗೆ. ಕಟ್ಟಕಡೆಗೆ ಬರುವ ಪುಸ್ತಕವೆಂದರೆ ಅದು ಕನ್ನಡ ಪಠ್ಯ ಪುಸ್ತಕ. ಬಂದಾಗ ಅದನ್ನು ಬಿಡಿಸಿ ನೋಡಿದ ನಾನು ಬೆಚ್ಚಿ ಬಿದ್ದಿದ್ದೆ. ನಾನೆಣಿಸಿದ್ದು ಕನ್ನಡವೆಂದರೆ ಸರಳ ಕನ್ನಡವಿರಬಹುದೆಂದು.

ನನ್ನ ಮಗ ಕಲಿಯುತ್ತಿರುವುದು ಸಿ.ಬಿ.ಎಸ್‌.ಇ. (CBSE) ಸಿಲೆಬಸ್ಸಲ್ಲಿ. 8ನೇ ತರಗತಿಯವರೆಗೆ ಅವನಿಗೆ ಇಂಗ್ಲಿಷ್‌ ಪ್ರಥಮ ಭಾಷೆಯಾಗಿದ್ದರೆ, ಹಿಂದಿ ದ್ವಿತೀಯ ಭಾಷೆ ಮತ್ತು ಕನ್ನಡ ತೃತೀಯ ಭಾಷೆಯಾಗಿತ್ತು. ತೃತೀಯ ಭಾಷೆಯೆಂದರೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಹ ಧೋರಣೆ. ಕಾಟಾಚಾರಕ್ಕೆಂಬಂತೆ 10 ಅಂಕಗಳ ಒಂದು ಪ್ರಶ್ನೆ ಪತ್ರಿಕೆ. ಅದರಲ್ಲಿ ಏನು ಉತ್ತರ ಬರೆದರೂ ನಡೆಯುತ್ತದೆ. ಉದಾಹರಣೆಗೆ 
ಪ್ರ: ಹುಲಿಯನ್ನು ಕಂಡ ರಾಮನು ಏನೆಂದು ಹೇಳಿ ಓಡಿದನು? 
ಉತ್ತರ: ಹುಲಿಯನ್ನು ಕಂಡ ರಾಮನು ಅಯ್ಯೋ ಎಂದು ಹೇಳಿ ಓಡಿದನು. ಉತ್ತರದಲ್ಲಿ ಕಲಿಯಬೇಕಿರುವುದು ಕೇವಲ “ಅಯ್ಯೋ’ ಎಂಬ ಶಬ್ದ ಮಾತ್ರ. 

ಆದರೆ 9ನೇ ತರಗತಿಗೆ ಬರುವಾಗ ಇರುವುದು ಎರಡು ಭಾಷೆಗಳು ಮಾತ್ರ. ಇಲ್ಲೂ ಕಡ್ಡಾಯವಾಗಿ ಇಂಗ್ಲಿಷ್‌ ಪ್ರಥಮ ಭಾಷೆಯಾದರೆ, ದ್ವಿತೀಯ ಭಾಷೆಯಾಗಿ ಹಿಂದಿ, ಕನ್ನಡ ಅಥವಾ ಫ್ರೆಂಚ್‌ ನಡುವೆ ಯಾವುದಾದರೊಂದನ್ನು ಆಯ್ಕೆ ಮಾಡಿಕೊಳ್ಳಬಹುದು. ಸಹಜ ವಾಗಿಯೇ ಮಕ್ಕಳು ಆಯ್ದುಕೊಳ್ಳುವುದು ಹಿಂದಿ ಅಥವಾ ಫ್ರೆಂಚ್‌ ಭಾಷೆಯನ್ನು. ಏಕೆಂದರೆ ಇದರಲ್ಲಿ ಅಂಕ ಪಡೆಯುವುದು ಸುಲಭ. ಹಿಂದಿಯನ್ನು ಹೇಗೂ ಎಂಟನೆಯ ತರಗತಿಯವರೆಗೆ ದ್ವಿತೀಯ ಭಾಷೆಯಾಗಿಯೇ ಕಲಿತಿರುತ್ತಾರೆ. ಫ್ರೆಂಚಲ್ಲಾದರೋ ಕಲಿಯಬೇಕಾಗಿ ರುವುದು ಕೇವಲ ಪ್ರಾಥಮಿಕ (Basics) ಮಾತ್ರ. ಆದರೆ ಕನ್ನಡ ಕಟ್ಟಾ ಭಾಷಾಭಿಮಾನಿಯಾದ ನಾನು ಮಗನಿಗೆ ದ್ವಿತೀಯ ಭಾಷೆಯಾಗಿ ಕನ್ನಡ ಭಾಷೆಯನ್ನು ಆಯ್ದುಕೊಳ್ಳುವಂತೆ ಸೂಚಿಸಿದ್ದೆ. ಅದಕ್ಕಾಗಿ ನಾನೀಗ ಪಶ್ಚಾತಾಪ ಪಡುತ್ತಿದ್ದೇನೆ.

8ನೇ ತರಗತಿಯ ಬೇಸಿಗೆ ರಜೆಯಲ್ಲಿ ನಾನು ಅವನಿಗೆ ಕನ್ನಡ ಪಾಠ ಆರಂಭಿಸಬೇಕೆಂದು ಯೋಚಿಸಿದ್ದೆ. ಆದರೆ ಕನ್ನಡ ಪಠ್ಯ ಪುಸ್ತಕ ಬಂದದ್ದೇ 9ನೇ ತರಗತಿ ಆರಂಭವಾಗಿ ವಾರಗಳ ನಂತರ. ಇದು ಯಾವತ್ತೂ ಹೀಗೆ. ಕಟ್ಟಕಡೆಗೆ ಬರುವ ಪುಸ್ತಕವೆಂದರೆ ಅದು ಕನ್ನಡ ಪಠ್ಯ ಪುಸ್ತಕ. ಬಂದಾಗ ಅದನ್ನು ಬಿಡಿಸಿ ನೋಡಿದ ನಾನು ಬೆಚ್ಚಿ ಬಿದ್ದಿ¨ªೆ. ನಾನೆಣಿಸಿದ್ದು ಕನ್ನಡವೆಂದರೆ ಸರಳ ಕನ್ನಡವಿರಬಹುದೆಂದು. ಆದರೆ ಇದರಲ್ಲಿದ್ದದ್ದು ಊಹಿಸಲೂ ಸಾಧ್ಯವಾಗದಂತಹ ಕ್ಲಿಷ್ಟಕರವಾದ ಗದ್ಯ, ಹಳೆಗನ್ನಡದ ಕೆಲವು ಪದ್ಯಗಳು ಮತ್ತು ಪಾಠಗಳು. 8ನೇ ತರಗತಿ ಯವರೆಗೆ ಕನ್ನಡವನ್ನು ತೃತೀಯ ಭಾಷೆಯಾಗಿ ಕಲಿತ ವಿದ್ಯಾರ್ಥಿ 9ನೇ ತರಗತಿಯಲ್ಲಿದ್ದರೂ ಅವನ ಕನ್ನಡ ಜ್ಞಾನವಿರುವುದು ಕೇವಲ 3ನೇ ತರಗತಿಯಷ್ಟು ಅಥವಾ ಅದಕ್ಕಿಂತಲೂ ಕಡಿಮೆ. ಇಂತಹ ಮಕ್ಕಳಿಗೆ 9ನೇ ತರಗತಿಯ ಕನ್ನಡ ಮಾಧ್ಯಮದ ಪಠ್ಯ ಪುಸ್ತಕದ, ಹಳೆಗನ್ನಡ ಪದ್ಯ ಮತ್ತು ಗದ್ಯಗಳನ್ನು ಒಮ್ಮಿಂದೊಮ್ಮೆಲೇ ತುರುಕುವುದಾದರೂ ಹೇಗೆ ಮತ್ತು ಏಕೆ?ನನ್ನ ಮಗನ ತರಗತಿಯಲ್ಲಿರುವ 40 ವಿದ್ಯಾರ್ಥಿಗಳಲ್ಲಿ ಈ ವರ್ಷ ಕನ್ನಡ ಆಯ್ದುಕೊಂಡವರು ಕೇವಲ 6 ವಿದ್ಯಾರ್ಥಿಗಳು. ಮುಂದಿನ ವರ್ಷ ಈ 6 ಮಕ್ಕಳು ಸಿಗುವುದೂ ಕಷ್ಟ. ಹೀಗೆ ಮುಂದಾಲೋಚನೆ ಇಲ್ಲದೆ ಪಠ್ಯ ಪುಸ್ತಕ ರಚಿಸುವ ನಮ್ಮ ಭಾಷಾ ಗಣ್ಯರು, ಶಿಕ್ಷಣ ತಜ್ಞರು ಇದೇ ರೀತಿ ಮುಂದುವರಿದರೆ ಕನ್ನಡ ಭಾಷೆಯ ಅಭಿವೃದ್ಧಿಯ ಮಾತು ಬಿಡಿ, ಭಾಷೆ ಉಳಿಸಿಕೊಳ್ಳುವುದೂ ಕನಸಿನ ಮಾತೇ.

ಸಾರ್‌ ಕನ್ನಡವನ್ನು ಉಳಿಸಬೇಕಾದರೆ ಇರುವ ದಾರಿ ಒಂದೇ. ಅದು ಹೆಚ್ಚೆಚ್ಚು ಮಕ್ಕಳು ಕನ್ನಡ ಆಯ್ಕೆ ಮಾಡುವಂತೆ ಪ್ರೋತ್ಸಾಹಿಸುವುದು. ಅದಕ್ಕಾಗಿ ಸರಳವಾದ ಪಠ್ಯ ಪುಸ್ತಕ ಮತ್ತು ಸರಳವಾದ ಪ್ರಶ್ನೆ ಪತ್ರಿಕೆಗಳನ್ನು ರಚಿಸುವುದು. ಅದನ್ನು ಬಿಟ್ಟು ಮಕ್ಕಳು ಕನಸಿನಲ್ಲೂ ಬೆಚ್ಚಿಬೀಳುವಂತಹ ಪಠ್ಯವನ್ನು ರಚಿಸುವುದು ಯಾರ ಉದ್ಧಾರಕ್ಕಾಗಿ ಮತ್ತು ಯಾವ ಪುರುಷಾರ್ಥಕ್ಕಾಗಿ? ನಮ್ಮ ಶಿಕ್ಷಣ ಇಲಾಖೆ ಭಾಷೆಯ ಹಿತದೃಷ್ಟಿಯಿಂದ ಇನ್ನಾದರೂ ಎಚ್ಚರವಾಗುವುದು ಒಳಿತು. ಇಲ್ಲವಾದರೆ, ಕನ್ನಡವನ್ನು ಸಂಪೂರ್ಣ ಮರೆತುಬಿಡುವುದು ಒಳ್ಳೆಯದು. ಮಕ್ಕಳಿಗಾದರೋ ಕನ್ನಡದ ಹೊರತಾಗಿಯೂ ಬೇರೆ ಆಯ್ಕೆಗಳಿವೆ. ಕನ್ನಡದ ಉಳಿವಿಗಾಗಿ ನನ್ನ ಕೆಲವು ಸಲಹೆಗಳು ಇಂತಿವೆ : 

ಸಿಬಿಎಸ್‌ಇ ಮತ್ತು ಇನ್ನಿತರ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸರಳ ಕನ್ನಡ ಪಠ್ಯಪುಸ್ತಕಗಳು ರಚನೆಯಾಗಬೇಕು
ಪ್ರಶ್ನೆ ಪತ್ರಿಕೆ ಪಠ್ಯಪುಸ್ತಕಕ್ಕೆ ಸಂಬಂಧಿಸಿದ ಗದ್ಯ, ಪದ್ಯಗಳಿಗೆ ಮಾತ್ರ ಸೀಮಿತವಾಗಿರಲಿ. ನೇರ ಮತ್ತು ಸರಳವಾಗಿರಲಿ
ಪ್ರಶ್ನೆ ಪತ್ರಿಕೆಯಲ್ಲಿ ಕೆಲವೊಂದು ಸಾಮಾನ್ಯವಾಗಿ ಚಾಲ್ತಿಯಲ್ಲಿಲ್ಲದ ಪದಗಳ ಇಂಗ್ಲಿಷ್‌ ತರ್ಜುಮೆ ಕೊಟ್ಟಿರಲಿ. ಉದಾಹರಣೆಗೆ: ಸಾಮಾಜಿಕ ಜಾಲತಾಣಗಳ (Social Networks) ಕುರಿತು ಪ್ರಬಂಧ ಬರೆಯಿರಿ ಅಥವಾ ಬರದಿಂದಾಗುವ (Famine) ಅನಾಹುತಗಳ ಕುರಿತು ಪ್ರಬಂಧ ಬರೆಯಿರಿ.

ಮೇಲಿನ ಎರಡೂ ಸಂದರ್ಭಗಳಲ್ಲಿ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳು ಅಥವಾ ಬರ ಪದಗಳ ಅರ್ಥ ಗೊತ್ತಿರುವ ಸಾಧ್ಯತೆ ಕಡಿಮೆ. ಆದರೆ ಅರ್ಥ ತಿಳಿದರೆ ಪ್ರಬಂಧ ಬರೆಯಬಲ್ಲರು. ಕನ್ನಡ ಭಾಷೆಯ ಉಳಿವಿಗಾಗಿ ತಾವು ಈ ನಿಟ್ಟಿನಲ್ಲಿ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಿರಾಗಿ ನಂಬಿದ್ದೇವೆ.

ಅಬ್ದುಲ್‌ ರಹೀಮ್‌ ಟಿ. ಕೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

5-

ಸಮುದಾಯ ಪ್ರಜ್ಞೆ ಬಿತ್ತಲು ಮನೆಯೇ ಪ್ರಶಸ್ತ

1-sadsdsa

Children ಹದಿಹರೆಯ -ತಾಯಿಯ ಕರ್ತವ್ಯ

1-sadsdsad

Emotion-language-life; ಭಾವ-ಭಾಷೆ-ಬದುಕು

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.