ಯುಗಾದಿಯಂದೇ ಹೊಸವರ್ಷ


Team Udayavani, Mar 17, 2018, 10:38 AM IST

gul-1.jpg

ಸೊಲ್ಲಾಪುರ: ನಾವು ನಮ್ಮ ಮಾತೃ ಭಾಷೆ ಹಾಗೂ ರಾಷ್ಟ್ರ ಭಾಷೆಯನ್ನು ಗೌರವಿಸಬೇಕು. ನಾವು ಸ್ವದೇಶದ ಅಭಿಮಾನಿಗಳಾಗಿದ್ದು ಸ್ವಭಾಷೆ, ಸ್ವದೇಶಿ ಹಾಗೂ ಸ್ವಾಭಿಮಾನದಿಂದ ಬದುಕಬೇಕು. ನಮ್ಮ ದೇಶದ ಸಂಸ್ಕೃತಿ-ಸಂಸ್ಕಾರ ಬಹುಜನ ಹಿತಾಯ, ಬಹುಜನ ಸುಖಾಯದ ಮೇಲೆ ಅವಲಂಬಿಸಿದೆ ಎಂದು ಯೋಗಗುರು ರಾಮದೇವ ಬಾಬಾ ಹೇಳಿದರು.

ಶುಕ್ರವಾರ ಸೊಲ್ಲಾಪುರಕ್ಕೆ ಆಗಮಿಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಾಶ್ಚಿಮಾತ್ಯ ದೇಶದವರು ಮಾರ್ಚ 8ರಂದು ಜಾಗತಿಕ ಮಹಿಳಾ ದಿನ ಆಚರಿಸುತ್ತಾರೆ. ಆದರೆ ನಾವು ಭಾರತೀಯರು ಚೈತ್ರ ಮಾಸದ ಮೊದಲನೆ ದಿನ ಅಂದರೆ ಯುಗಾದಿ ಹಬ್ಬದಂದು ಮಹಿಳಾ ದಿನವನ್ನು ಆಚರಿಸಬೇಕೆಂದು ಕರೆ ನೀಡಿದರು.

ಪಾಶ್ಚಿಮಾತ್ಯ ದೇಶದವರ ಪಾಲಿಗೆ ಜನವರಿ 1ರಂದು ಹೊಸ ವರ್ಷವಾದರೆ, ಯುಗಾದಿ ಹಬ್ಬವು ಭಾರತೀಯರ ಪಾಲಿಗೆ ಹೊಸ ವರ್ಷವಾಗಿದೆ. ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಗೆ ಅನುಗುಣವಾಗಿ ಯುಗಾದಿ ಹಬ್ಬದಂದು ಮಹಿಳಾ ದಿನಾಚಾರಣೆ ಆಚರಿಸಬೇಕು. ಯುಗಾದಿ ಹಬ್ಬದಿಂದ ಹೊಸ ವರ್ಷ ಪ್ರಾರಂಭವಾಗತ್ತದೆ. ಅದೇ ರೀತಿ ವ್ಯಕ್ತಿಯ ಜನನ ತಾಯಿಯಿಂದ ಆಗಿರುವುದರಿಂದ ಆ ದಿನವನ್ನು ಮಹಿಳಾ ದಿನವನ್ನಾಗಿ ಆಚರಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಸಚಿವ ಸುಭಾಷ ದೇಶಮುಖ, ವಿವೇಕಾನಂದ ಪ್ರತಿಷ್ಠಾನ ಅಧ್ಯಕ್ಷ ಸಚಿನ ಕಲ್ಯಾಣಶೆಟ್ಟಿ, ಸುಧಾ ಪಶ್ಚಿಮ ಮಹಾರಾಷ್ಟ್ರ ಪತಂಜಲಿ ಯೋಗಪೀಠದ ಮುಖ್ಯಸ್ಥೆ ಸುಧಾ ಅಳ್ಳಿಮೋರೆ, ಪುಣೆಯ ಉದ್ಯಮಿ ಶಿವರಾಜ ರಾಠಿ, ನಗರ ಸೇವಕ ಮಿಲನ ಕಲ್ಯಾಣಶೆಟ್ಟಿ, ಸಂತೋಷ ಜಿರೋಳೆ, ಚಂದ್ರಕಾಂತ ದಸಲೆ, ವಿಲಾಸ ಕೋರೆ, ರಾಜಕುಮಾರ ಝಿಂಗಾಡೆ, ಅಶೋಕ ಯೆಣಗೂರೆ ಹಾಜರಿದ್ದರು.

ಇದಕ್ಕೂ ಮುನ್ನ ಸೊಲ್ಲಾಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯೋಗಗುರು ರಾಮದೇವ ಬಾಬಾ ಅವರಿಗೆ ಮೇಯರ್‌ ಶೋಭಾ ಬನಶೆಟ್ಟಿ ಅವರು ಹೂಗುತ್ಛ ನೀಡಿ ಸ್ವಾಗತಿಸಿದರು. 

18ರಂದು ಬೃಹತ್‌ಮಹಿಳಾ ಸಮ್ಮೇಳನ ವಿವೇಕಾನಂದ ಪ್ರತಿಷ್ಠಾನ ವತಿಯಿಂದ ಅಕ್ಕಲಕೋಟ ನಗರದ ಫತ್ತೆಸಿಂಹ ಮೈದಾನದಲ್ಲಿ ಮಾ. 17 ರಿಂದ 19ರ ವರೆಗೆ ಬೆಳಗ್ಗೆ 5 ರಿಂದ ಮುಂಜಾನೆ 7:30ರ ವರೆಗೆ ಬೃಹತ್‌ ಯೋಗ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. 

ರಾಮದೇವ ಬಾಬಾರ ಉಪಸ್ಥಿತಿಯಲ್ಲಿ ಮಾ.17 ರಂದು ಸಾಯಂಕಾಲ 4 ಗಂಟೆಗೆ ವಳಸಂಗದಲ್ಲಿ ರೈತರ ಸಮಾವೇಶ, ಮಾ.18 ರಂದು ಚಿತ್ರನಟಿ ಮತ್ತು ಸಂಸದೆ ಹೇಮಾಮಾಲಿನಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಯವರ ಪತ್ನಿ ಅಮೃತಾ ಫಡ್ನವಿಸ್‌ರ ಉಪಸ್ಥಿತಿಯಲ್ಲಿ ಸೊಲ್ಲಾಪುರದಲ್ಲಿ ಬೃಹತ್‌ ಮಹಿಳಾ ಸಮ್ಮೇಳನ ನಡೆಯಲಿದೆ. ಶಾಲೆಗಳು ಈಗ ಬೆಳಗಿನ ಜಾವದಲ್ಲಿರುವುದರಿಂದ ಶಾಲೆಯ ವೇಳೆ ಮುಂಜಾನೆ 7:30ರ ಬದಲಿಗೆ 8:30 ರಿಂದ ಮಧ್ಯಾಹ್ನ 12:30ರ ಕಾರ್ಯಕ್ರಮ ನಡೆಸಲು ಶಿಕ್ಷಕ ಸಂಘಗಳು ಶಿಕ್ಷಣಾ ಧಿಕಾರಿಗಳನ್ನು ಕೋರಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಸಚಿನ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.