ಅರಂತೋಡಿನ ಸಂತೆ ಮಾರುಕಟ್ಟೆ ಪ್ರಾಂಗಣ  ಈಗ ವಾಹನ ಶೆಡ್‌


Team Udayavani, Mar 17, 2018, 11:55 AM IST

17-March-6.jpg

ಅರಂತೋಡು: ಅರಂತೋಡು ಸಂತೆ ಮಾರುಕಟ್ಟೆ ಪ್ರಾಂಗಣ ಈಗ ವಾಹನ ಶೆಡ್‌ ಆಗಿ ಪರಿವರ್ತನೆಗೊಂಡಿದೆ. 7 ವರ್ಷಗಳ ಹಿಂದೆ ಸುಳ್ಯ ಎಪಿಎಂಸಿ ವತಿಯಿಂದ ಸಂತೆ ಮಾರುಕಟ್ಟೆ ಪ್ರಾಂಗಣವನ್ನು ಅರಂತೋಡಿನ ಗ್ರಾಮಕರಣಿಕರ ಕಚೇರಿ ಬಳಿ ನಿರ್ಮಿಸಿ ಬಳಿಕ ಅದನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಲಾಗಿತ್ತು. ಅನಂತರದ 2-3 ವರ್ಷಗಳ ಕಾಲ ವಾರದ ಸಂತೆಯು ಇಲ್ಲಿ ಸರಾಗವಾಗಿ ನಡೆಯುತ್ತಿತ್ತು. ಆದರೆ ಇಂದು ಈ ಸಂತೆ ಮಾರುಕಟ್ಟೆಯ ಪ್ರಾಂಗಣ ಸುಸಜ್ಜಿತವಾಗಿದ್ದರೂ ವಾರದ ಸಂತೆ ನಡೆಯುತ್ತಿಲ್ಲ. ಒಂದೆರಡು ತರಕಾರಿ ವ್ಯಾಪರಸ್ಥರು ಅಪರೂಪಕ್ಕೊಮ್ಮೆ ಬಂದು ರಸ್ತೆ ಬದಿಯಲ್ಲೇ ವ್ಯಾಪಾರ ಮಾಡಿ ಹೋಗುತ್ತಾರೆ. ಬರೀ ಇಷ್ಟಕ್ಕೇ ಇದು ಬಳಕೆಯಾಗುತ್ತಿದೆ.

ಸುಸಜ್ಜಿತ ಕಟ್ಟಡ
ಅರಂತೋಡಿನಲ್ಲಿ ಎಪಿಎಂಸಿ ವತಿಯಿಂದ ನಿರ್ಮಾಣವಾದ ಸಂತೆ ಮಾರುಕಟ್ಟೆ ಪ್ರಾಂಗಣ ಸುಸಜ್ಜಿತವಾಗಿದೆ. ಪ್ರತಿವಾರ ಸಂತೆ ವಹಿವಾಟು ನಡೆಯದ ಕಾರಣ ಇತರ ವಾಣಿಜ್ಯ ವ್ಯವಹಾರ ನಡೆಸಲು ಸ್ಥಳೀಯ ಗ್ರಾ. ಪಂ. ಈ ಬಗ್ಗೆ ಕಾರ್ಯ ಪ್ರವೃತ್ತವಾಗಬೇಕು. ಪ್ರತಿವಾರ ಸಂತೆ ಮಾರುಕಟ್ಟೆ ನಡೆಯುವುದರಿಂದ ಸ್ಥಳೀಯ ಗ್ರಾ.ಪಂ.ಗಳಿಗೂ ಆದಾಯ ಬರುತ್ತದೆ. ವಾಣಿಜ್ಯ ವ್ಯವಹಾರ ನಡೆಸುವವರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಇದು ಬಹಳ ಉಪಯುಕ್ತವಾದ ಅವಕಾಶ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಮೀಪದಲ್ಲೂ ಸಂತೆ ಇಲ್ಲ
ಸಮೀಪದ ಭಜನ ಮಂದಿರದ ಬಳಿ ಸುಮಾರು 15 ವರ್ಷಗಳ ಹಿಂದೆ ಸ್ಥಳೀಯ ಗ್ರಾ.ಪಂ. ವತಿಯಿಂದ ನಿರ್ಮಾಣವಾದ ಸಂತೆ ಮಾರುಕಟ್ಟೆಯಲ್ಲೂ ಇದೇ ಪರಿಸ್ಥಿತಿ ಇದೆ. ಈ ಸಂತೆ ಮಾರುಕಟ್ಟೆ ಪ್ರಾಂಗಣ ಈಗ ಸಂಪುರ್ಣ ನಾದುರಸ್ತಿಯಲ್ಲಿದ್ದು, ಅಭಿವೃದ್ಧಿಯನ್ನು ಎದುರುನೋಡುತ್ತಿದೆ.

ಬಳಕೆಯಾಗಲಿ
ಸಂತೆ ಮಾರುಕಟ್ಟೆಯ ವಿನ್ಯಾಸ ಹಾಗೂ ಅನುಕೂಲಗಳು ಒಳ್ಳೆಯ ಸ್ಥಿತಿಯಲ್ಲಿವೆ. ಆದರೆ ವ್ಯಾಪಾರಸ್ಥರು ಇದನ್ನು ಸದ್ಭಳಕೆ ಮಾಡುತ್ತಿಲ್ಲ. ಸಂತೆ ಮಾರುಕಟ್ಟೆಯನ್ನು ಗ್ರಾಮ ಪಂಚಾಯತ್‌ ಇತರ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುವಂತೆ ಕ್ರಮಕೈಗೊಳ್ಳಲಿ.
– ಹರೀಶ್‌, ಸ್ಥಳೀಯರು

‌ಚರ್ಚಿಸಿ ನಿರ್ಣಯ
ಇದೀಗ ಅನೇಕ ವರ್ಷಗಳಿಂದ ಸಂತೆ ಮಾರುಕಟ್ಟೆ ಪ್ರಾಂಗಣ ಈಗ ವಾಹನ್‌ ಪಾರ್ಕಿಂಗ್‌ ಶೆಡ್ಡ್ ಆಗಿ ಪರಿವರ್ತನೆಗೊಂಡಿದೆ. ಯಾರು ಕೂಡ ಇಲ್ಲಿ ವ್ಯಾಪಾರ ವ್ಯವಹಾರ ನಡೆಸುವುದಿಲ್ಲ. ಜನರಿಂದ ಬೇಡಿಕೆ ಬರುತ್ತಿಲ್ಲ. ವ್ಯಾಪಾರಸ್ಥರು ಇದನ್ನು ಉಪಯೋಗಿಸಿಕೊಳ್ಳಬಹುದು. ಮುಂದಿನ ಗ್ರಾಮ ಸಭೆಯಲ್ಲಿ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು.
– ಜಯಪ್ರಕಾಶ್‌ ಪಿ.ಡಿ.ಒ.
ಗ್ರಾಮ ಪಂಚಾಯತ್‌ ಅರಂತೋಡು.

 ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.