ಯುಗಾದಿ ವಿಶೇಷ: ಬೇಳೆ ಒಬ್ಬಟ್ಟು


Team Udayavani, Mar 17, 2018, 1:09 PM IST

beleholige.jpg

ಯುಗಾದಿ ಹಬ್ಬದಂದು ಪ್ರತಿಯೊಬ್ಬರ ಮನೆಯಲ್ಲೂ ಒಬ್ಬಟ್ಟು ತೊಗರಿಬೇಳೆ ಒಬ್ಬಟ್ಟು ಮಾಡಲು ಸುಲಭ ವಿಧಾನ

ಬೇಗಾಗುವ ಸಾಮಾಗ್ರಿಗಳು:
1. ತೊಗರಿ ಬೇಳೆ – 1/2 ಕೆಜಿ
2. ಚಿರೋಟಿ ರವೆ – ಕಾಲು ಕಪ್
3. ಮೈದಾಹಿಟ್ಟು – 2 ಬಟ್ಟಲು
4. ಬೆಲ್ಲ – 1/2 ಕೆಜಿ 
5. ತೆಂಗಿನಕಾಯಿ ತುರಿ – ಒಂದು ಬಟ್ಟಲು
6. ಏಲಕ್ಕಿ ಪುಡಿ – ಸ್ವಲ್ಪ
7. ತುಪ್ಪ – ಎರಡು ಚಮಚ
8. ಎಣ್ಣೆ – 1 ಕಪ್
9. ಉಪ್ಪು – 1 ಚಿಟಿಕೆ
10. ಅರಿಸಿನ – 1 ಚಿಟಿಕೆ

ಮಾಡುವ ವಿಧಾನ:
* ಒಂದು ಪಾತ್ರೆಯಲ್ಲಿ ಮೈದಾಹಿಟ್ಟು, ಚಿರೋಟಿ ರವೆ, ಅರಿಶಿನ, ಒಂದು ಚಿಟಿಕೆ ಉಪ್ಪು ಮತ್ತು ತುಪ್ಪ ಹಾಕಿ ಅಗತ್ಯಕ್ಕೆ ತಕ್ಕಷ್ಟು ನೀರು ಹಾಕಿ ಚಪಾತಿ ಹಿಟ್ಟಿಗಿಂತ ತುಂಬಾ ಮೃದುವಾಗಿ ಕಲಸಿಕೊಳ್ಳಿ. ನಂತರ ಇದಕ್ಕೆ 1/2 ಕಪ್ ಎಣ್ಣೆ ಹಾಕಿ ಚೆನ್ನಾಗಿ ನಾದಿಕೊಂಡು 2 ನಿಮಿಷ ನೆನೆಯಲು ಬಿಡಿ.
* ಬೆಲ್ಲವನ್ನು ಪುಡಿ ಮಾಡಿಟ್ಟುಕೊಳ್ಳಿ.
* ಒಂದು ಪಾತ್ರೆಯಲ್ಲಿ ತೊಗರಿಬೇಳೆ, ಚಿಟಿಕೆ ಅರಿಶಿನ ಮತ್ತು ಒಂದು ಚಮಚ ಎಣ್ಣೆ ಹಾಗೂ ಅಗತ್ಯಕ್ಕೆ ತಕ್ಕಷ್ಟು ನೀರು ಹಾಕಿ ಬೇಯಿಸಿಕೊಳ್ಳಿ.
* ಬೇಳೆ ನುಣ್ಣಗಾಗುವಂತೆ ಬೇಯಿಸಬೇಡಿ. ಸ್ವಲ್ಪ ಗಟ್ಟಿಯಿರುವಾಗಲೇ ಇದಕ್ಕೆ ಪುಡಿ ಮಾಡಿದ ಬೆಲ್ಲ, ತೆಂಗಿನಕಾಯಿ ತುರಿ, ಮತ್ತು ಏಲಕ್ಕಿ ಪುಡಿ ಹಾಕಿ ಮಿಕ್ಸ್ ಮಾಡಿ ಒಲೆಯಿಂದ ಇಳಿಸಿ.
* ಈ ಮಿಶ್ರಣ ತಣ್ಣಗಾದ ನಂತರ ನೀರು ಸೇರಿಸದಂತೆ ನುಣ್ಣಗೆ ರುಬ್ಬಿಕೊಳ್ಳಬೇಕು.
* ಹೀಗೆ ನುಣ್ಣಗೆ ರುಬ್ಬಿದ ಮಿಶ್ರಣವನ್ನ ಸಣ್ಣ ಸಣ್ಣ ಉಂಡೆಗಳಾಗಿ ಮಾಡಿಕೊಳ್ಳಿ.

ಹೋಳಿಗೆ ಮಾಡುವುದು:
* ಕಲಸಿಟ್ಟ ಮೈದಾ ಮಿಶ್ರಣವನ್ನು ತೆಗೆದುಕೊಂಡು ಮತ್ತೊಮ್ಮೆ ಚೆನ್ನಾಗಿ ನಾದಿಕೊಳ್ಳಿ.
* ಒಂದು ಮಣೆ ಮೇಲೆ ಬಾಳೆ ಎಲೆ/ ಪ್ಲಾಸ್ಟಿಕ್ ಕವರ್ ಹಾಕಿ ಅದರ ಮೇಲೆ ಸ್ವಲ್ಪ ಎಣ್ಣೆ ಸವರಿ, ಸ್ವಲ್ಪ ಮೈದಾ ಮಿಶ್ರಣವನ್ನು ತೆಗೆದುಕೊಂಡು ಅದರ ಮೇಲೆ ತಟ್ಟಿಕೊಳ್ಳಿ.

* ಇದರ ಮಧ್ಯೆ ಹೂರಣದ ಉಂಡೆಯನ್ನು ಇಟ್ಟು ಎಲ್ಲಾ ಬದಿಯಿಂದ ಮೇಲ್ಮುಖವಾಗಿ ಮೈದಾ ಹಿಟ್ಟಿನಿಂದ ಹೂರಣವನ್ನು ಮುಚ್ಚಿ.
* ಹೂರಣವನ್ನು ಮುಚ್ಚಿದ ತುದಿಯನ್ನು ಕೆಳಭಾಗಕ್ಕೆ ತಿರುಗಿಸಿ ಕೈಗೆ ಎಣ್ಣೆ ಸವರಿಕೊಂಡು ಲಘುವಾಗಿ ತಟ್ಟಿಕೊಳ್ಳಿ.
* ಒಬ್ಬಟ್ಟು ತಟ್ಟುವಾಗಿ ತೀರಾ ತೆಳ್ಳಗೆ ತಟ್ಟಿದರೆ ಬೇಯಿಸುವಾಗ ಮುರಿದು ಹೋಗುತ್ತದೆ. ಆದ್ದರಿಂದ ತೀರಾ ತೆಳ್ಳಗೂ ಅಲ್ಲದೆ ದಪ್ಪವೂ ಅಲ್ಲದೆ ಮಧ್ಯಮ ಗಾತ್ರದಲ್ಲಿ ತಟ್ಟಿಕೊಳ್ಳಿ.
* ಒಲೆ ಮೇಲೆ ತವಾ ಇಟ್ಟು ಸ್ವಲ್ಪ ಎಣ್ಣೆ ಅಥವಾ ತುಪ್ಪ ಸವರಿ. ತವಾ ಬಿಸಿಯಾದ ನಂತರ ಅದರ ಮೇಲೆ ತಟ್ಟಿಕೊಂಡ ಒಬ್ಬಟ್ಟು ಎಲೆ ಸಹಿತ ಹಾಕಿ ನಿಧಾನವಾಗಿ ಎಲೆಯನ್ನು ತೆಗೆದು ಎರಡೂ ಬದಿ ಹದವಾಗಿ ಬೇಯಿಸಿದ್ರೆ ಬೇಳೆ ಒಬ್ಬಟ್ಟು ರೆಡಿ.

* ಇದನ್ನು ಬಿಸಿ ಇರುವಾಗಲೇ ತುಪ್ಪ ಅಥವಾ ಹಾಲು ಅಥವಾ ಮಾವಿನಹಣ್ಣಿನ ರಸಾಯನದ ಜೊತೆ ಸವಿಯಬಹುದು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.