ಆನೆಕೆರೆಯ ಹೂಳೆತ್ತುವ ಕಾರ್ಯಕ್ಕೆ ಉದ್ಯಮಿಯಿಂದ ಚಾಲನೆ
Team Udayavani, Mar 20, 2018, 11:40 AM IST
ಸೋಮವಾರಪೇಟೆ: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪಟ್ಟಣದ ಆನೆಕೆರೆಯ ಹೂಳೆತ್ತುವ ಕಾರ್ಯಕ್ಕೆ ಉದ್ಯಮಿ ಹರಪಳ್ಳಿ ರವೀಂದ್ರ ಅವರು ಚಾಲನೆ ನೀಡಿದರು. ಕಳೆದ ಎರಡು ದಶಕಗಳಿಂದ ಹೂಳುತುಂಬಿ ಬತ್ತಿದ್ದ ಆನೆಕೆರೆಗೆ ಕಾಯಕಲ್ಪ ನೀಡುವಂತೆ ಸಾರ್ವಜನಿಕರು ಮನವಿ ಮಾಡುತ್ತಲೇ ಬಂದಿದ್ದರೂ ಸಹ ಸಂಬಂಧಿಸಿದವರು ಈ ಬಗ್ಗೆ ಗಮನ ಹರಿಸಿರಲಿಲ್ಲ. ಇದೀಗ ಉದ್ಯಮಿ ಹರಪಳ್ಳಿ ರವೀಂದ್ರ ಅವರು ತಮ್ಮ ಸ್ವಂತ ಖರ್ಚಿನಿಂದ ಆನೆಕೆರೆಯ ಹೂಳನ್ನು ತೆಗೆಯಲು ಮುಂದಾಗಿದ್ದು, ಇಂದು ವಿಶೇಷ ಪೂಜೆ ಅಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು. ಕಳೆದ ಕೆಲ ದಿನಗಳ ಹಿಂದೆ ಯಡೂರು ಗ್ರಾಮದಲ್ಲಿ ಬತ್ತಿದ್ದ ವಿಶಾಲ ಕೆರೆಯನ್ನು ರೂ. 8.50ಲಕ್ಷ ವೆಚ್ಚದಲ್ಲಿ ಹೂಳುತೆಗೆದಿದ್ದು, ಆನೆಕೆರೆಯ ಕಾಮಗಾರಿಗೆ 7 ಲಕ್ಷ ವೆಚ್ಚವನ್ನು ಅಂದಾಜಿಸಲಾಗಿದೆ.
ಅವರ ಈ ಕಾರ್ಯಕ್ಕೆ ಸೋಮವಾರಪೇಟೆಯ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ನಗರ ಗೌಡ ಒಕ್ಕೂಟದ ಸದಸ್ಯರು ಕೈ ಜೋಡಿಸಿದ್ದಾರೆ. ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ರವೀಂದ್ರ, ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿರುವದರಿಂದ ಕೆರೆಗಳನ್ನು ಉಳಿಸಿಕೊಳ್ಳಲೇಬೇಕಾಗಿದೆ. ಈ ನಿಟ್ಟಿನಲ್ಲಿ ತಾನು ತನ್ನ ಸ್ವಂತ ದುಡಿಮೆಯಿಂದ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಹಣ ವಿನಿಯೋಗಿಸುತ್ತಿದ್ದೇನೆ. ಈಗಾಗಲೇ ಯಡೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯ ಮುಕ್ತಾಯಗೊಂಡಿದ್ದು, ಮುಂದಿನ ದಿನಗಳಲ್ಲಿ ಅಬ್ಬೂರುಕಟ್ಟೆ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತಲಾಗುವದು ಎಂದರು.
ಒಂದು ಹಿಟಾಚಿ ಯಂತ್ರದ ಮೂಲಕ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ನಾಲ್ಕು ಟಿಪ್ಪರ್ಗಳ ಮೂಲಕ ಹೂಳನ್ನು ಹೊರಭಾಗಕ್ಕೆ ಸಾಗಿಸಲಾಗುತ್ತಿದೆ. ಸುಮಾರು 7 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, ಮುಂದಿನ 10 ದಿನಗಳಲ್ಲಿ ಮುಕ್ತಾಯವಾಗಲಿದೆ ಎಂದು ರವೀಂದ್ರ ತಿಳಿಸಿದರು. ಮೋಟಾರು ಯೂನಿಯನ್ ಅಧ್ಯಕ್ಷ ಸಿ.ಸಿ. ನಂದ ಮಾತನಾಡಿ, ಅನೆಕೆರೆಗೆ ಕಾಯಕಲ್ಪ ನೀಡುವದು ಈ ಭಾಗದ ಸಾರ್ವಜನಿಕರ ದಶಕಗಳ ಬೇಡಿಕೆಯಾಗಿತ್ತು. ಅದನ್ನು ರವೀಂದ್ರ ಅವರು ಈಡೇರಿಸಿದ್ದಾರೆ. ಇವರ ಸಮಾಜಮುಖೀ ಕಾರ್ಯಕ್ಕೆ ಮೋಟಾರ್ ಯೂನಿಯನ್ ಸಂಪೂರ್ಣ ಬೆಂಬಲ ನೀಡಲಿದ್ದು, ಆನೆಕೆರೆಯಲ್ಲಿ ಈಗಾಗಲೇ ಸಂಘದಿಂದ ಶುಚಿತ್ವ ಕಾರ್ಯ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಯಾರೂ ಸಹ ಇಲ್ಲಿಗೆ ತ್ಯಾಜ್ಯಗಳನ್ನು ಸುರಿಯಬಾರದು ಎಂದು ಮನವಿ ಮಾಡಿದರು.
ಈ ಸಂದರ್ಭ ನಗರ ಗೌಡ ಒಕ್ಕೂಟದ ಅಧ್ಯಕ್ಷ ಪ್ರಕಾಶ್, ಬನ್ನಳ್ಳಿ ಗೋಪಾಲ್, ಮೋಟಾರ್ ಯೂನಿಯನ್ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಪದಾಧಿಕಾರಿಗಳಾದ ಖಾದರ್, ಪರಮೇಶ್, ಹಾಲಪ್ಪ, ಶೇಷಪ್ಪ, ಚೌಡ್ಲು ವಿಎಸ್ಎಸ್ಎನ್ ನಿರ್ದೇಶಕಿ ಜಾನಕಿ ವೆಂಕಟೇಶ್, ಆಟೋ ಯೂನಿಯನ್ ಅಧ್ಯಕ್ಷ ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್