ಅವಿಶ್ವಾಸ ಗೊತ್ತುವಳಿ; ಸಂಸತ್‌ಗದ್ದಲ


Team Udayavani, Mar 20, 2018, 6:00 AM IST

27.jpg

ಹೊಸದಿಲ್ಲಿ: ವಿಪಕ್ಷಗಳ ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಮಂಗಳವಾರಕ್ಕೆ ಮುಂದೂಡಲ್ಪಟ್ಟಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ವಿರುದ್ಧ ಮಂಡಿಸಲಾಗಿರುವ ಅವಿಶ್ವಾಸ ಗೊತ್ತುವಳಿಯನ್ನು ಚರ್ಚೆಗೆ ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಮಂಗಳವಾರ ಚರ್ಚೆಗೆ ಬರುವ ಸಾಧ್ಯತೆ ಇದೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಎನ್‌ಡಿಎ ತೊರೆದಿರುವ ಟಿಡಿಪಿ ಮತ್ತು ವೈ.ಎಸ್‌.ಆರ್‌. ಕಾಂಗ್ರೆಸ್‌ ಪಕ್ಷ ಕಳೆದ ಶುಕ್ರವಾರ ಪ್ರತ್ಯೇಕವಾಗಿ ನೋಟಿಸ್‌ ನೀಡಿದ್ದವು.

ಸೋಮವಾರ ಹನ್ನೊಂದನೇ ದಿನವಾಗಿದ್ದರೂ ಯಾವುದೇ ಕಲಾಪ ನಡೆಸಲು ಸಾಧ್ಯವೇ ಆಗಲಿಲ್ಲ. ಲೋಕ ಸಭೆಯಲ್ಲಿ ಕಲಾಪ ಆರಂಭ ಆಗುತ್ತಿದ್ದಂತೆ ಎಐಎಡಿಎಂಕೆ, ಟಿಆರ್‌ಎಸ್‌ ತಮಿಳುನಾಡು, ತೆಲಂಗಾಣಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಮುಂದಿಟ್ಟು ಕೊಂಡು ಗದ್ದಲವೆಬ್ಬಿಸಲಾರಂಭಿಸಿದವು. ಗದ್ದಲದ ನಡುವೆಯೇ ಮಾತನಾಡಿದ ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್‌ “ಸದನ ಸರಿಯಾಗಿ ಇಲ್ಲದೇ ಇರುವುದರಿಂದ ಅದನ್ನು (ಅವಿಶ್ವಾಸ ಗೊತ್ತುವಳಿ) ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ದಯವಿಟ್ಟು ಕ್ಷಮಿಸಿ’ ಎಂದರು. ಇದರ ನಡುವೆಯೇ ಮಧ್ಯಾಹ್ನ 12 ಗಂಟೆಯ ವರೆಗೆ ಸ್ಪೀಕರ್‌ ಕಲಾಪ ಮುಂದೂಡಿದರು. ಮತ್ತೆ ಸದನ ದಲ್ಲಿ ಅದೇ ಪರಿಸ್ಥಿತಿ ಮುಂದುವರಿದ ಕಾರಣ, ಬೇರೆ ದಾರಿ ಕಾಣದ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.

ರಾಜ್ಯಸಭೆಯಲ್ಲೂ ಗದ್ದಲ: ರಾಜ್ಯಸಭೆ ಯಲ್ಲಿ ಕಲಾಪ ಆರಂಭವಾಗುತ್ತಿ ದ್ದಂತೆಯೇ ವಿಪಕ್ಷಗಳು ಸಭಾಪತಿ ಎಂ. ವೆಂಕಯ್ಯ ನಾಯ್ಡು ಪೀಠದ ಮುಂಭಾಗಕ್ಕೆ ಬಂದು ಕೋಲಾಹಲ ಎಬ್ಬಿಸಿದವು. ಆಂಧ್ರಪ್ರದೇಶದಿಂದ ಟಿಡಿಪಿ, ವೈ.ಎಸ್‌.ಆರ್‌. ಕಾಂಗ್ರೆಸ್‌ ಪಾರ್ಟಿ ವಿಶೇಷ ಸ್ಥಾನಮಾನ ಮತ್ತು ತಮಿಳುನಾಡಿನಿಂದ ಎಐಎಡಿಎಂಕೆ ಕಾವೇರಿ ಜಲ ನಿರ್ವಹಣ ಮಂಡಳಿ ಸ್ಥಾಪಿಸಬೇಕೆಂದು ಒತ್ತಾಯಿಸಿ ಘೋಷಣೆ ಕೂಗಲಾರಂಭಿಸಿದರು. ಮೊದಲ ಹತ್ತು ನಿಮಿಷಗಳ ಕಾಲ ಸಭಾಪತಿ ವೆಂಕಯ್ಯ ನಾಯ್ಡು ಶಾಂತರಾಗಿ ಕಲಾಪಕ್ಕೆ ಅನುವು ಮಾಡಿ ಕೊಡ ಬೇಕು ಎಂದು ಒತ್ತಾಯಿಸಿದರೂ ಪ್ರಯೋಜನವಾಗದ್ದರಿಂದ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.

ಶಿವಸೇನೆ ಗೈರು: ಮೋದಿ ಸರಕಾರ ವನ್ನು ಟೀಕಿಸುವ ಶಿವಸೇನೆ ಮತದಾನ ನಡೆಯುವ ಅಗತ್ಯ ಬಂದರೆ ಗೈರು ಹಾಜರಾಗಲು ನಿರ್ಧರಿಸಿದೆ. ಅಕಾಲಿ ದಳ ಮತ್ತು ಜೆಡಿಯು ಸರಕಾರದ ಪರ ನಿಲ್ಲಲು ಮುಂದಾಗಿವೆ. ಟಿಡಿಪಿ, ವೈ.ಎಸ್‌.ಆರ್‌. ಕಾಂಗ್ರೆಸ್‌ ಪಕ್ಷಗಳು ಮಂಡಿಸಿರುವ ಗೊತ್ತುವಳಿಗೆ ಎಸ್‌ಪಿ, ಟಿಎಂಸಿ, ಆರ್‌ಜೆಡಿ ಮತ್ತು ಕಾಂಗ್ರೆಸ್‌ ಈಗಾಗಲೇ ಬೆಂಬಲ ವ್ಯಕ್ತಪಡಿಸಿವೆ.

ಕೆಸಿಆರ್‌- ದೀದಿ ಭೇಟಿ
2019ನೇ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಹೊರತಾದ ರಾಜಕೀಯ ರಂಗ ರಚನೆ ಮಾಡುವ ನಿಟ್ಟಿನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಮತ್ತು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೋಲ್ಕತಾದಲ್ಲಿ ಭೇಟಿಯಾಗಿದ್ದಾರೆ. ಒಂದು ಗಂಟೆ ಮಾತುಕತೆ ನಡೆಸಿದ ಬಳಿಕ ಇಬ್ಬರು ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿದರು. “ದೇಶಕ್ಕೆ ಒಳ್ಳೆಯದು ಬೇಕು. ಬಿಜೆಪಿ ಸೋತು ಕಾಂಗ್ರೆಸ್‌ ಗೆದ್ದರೆ ಏನಾದರೂ ಪವಾಡ ನಡೆದೀತೇ? ಇತರ ಸಮಾನ ಮನಸ್ಕ ಪಕ್ಷಗಳ ಜತೆ ಮಾತುಕತೆ ನಡೆಸುತ್ತಿದ್ದೇವೆ’ ಎಂದು ಚಂದ್ರಶೇಖರ ರಾವ್‌ ಹೇಳಿದ್ದಾರೆ. “ಮಾತುಕತೆ ಉತ್ತಮ ಬೆಳವಣಿಗೆ’ ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮೈತ್ರಿಕೂಟಕ್ಕೆ ಸೇರಲು ಟಿಆರ್‌ಎಸ್‌ ನಾಯಕ ಚಂದ್ರಶೇಖರ ರಾವ್‌ ಎಸ್‌ಪಿ, ಡಿಎಂಕೆ, ಶಿವಸೇನೆ ಜತೆಗೆ ಸಂಪರ್ಕ ಮಾಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.