ಹೆಂಗಿತ್ತು, ಹೆಂಗಾಯ್ತು ಕಿರಿಕ್‌ ಬೈಕ್‌


Team Udayavani, Mar 20, 2018, 11:25 AM IST

Rakshith-Shetty.jpg

ರಕ್ಷಿತ್‌ ಶೆಟ್ಟಿ ಸ್ಟೈಲಿಶ್‌ ಬೈಕ್‌ವೊಂದರಲ್ಲಿ ಓಡಾಡುತ್ತಿದ್ದೆರ ಖಂಡಿತಾ ನಿಮ್ಮ ಕಣ್ಣು ಆ ಬೈಕ್‌ ಮೇಲೆ ಬಿದ್ದೇ ಬೀಳುತ್ತದೆ. “ಇದ್ಯಾವುದಪ್ಪಾ ಇಂಫೋರ್ಟೆಡ್‌ ಬೈಕ್‌’ ಎಂದು ನೋಡುವ ಸರದಿ ನಿಮ್ಮದಾಗುತ್ತದೆ. ಆ ಮಟ್ಟಿನ ಬೈಕ್‌ವೊಂದು ರಕ್ಷಿತ್‌ ಬಳಿ ಇದೆ. ಎಲ್ಲಾ ಓಕೆ ಯಾವುದು ಈ ಬೈಕ್‌ ಎಂದು ನೀವು ಹತ್ತಿರ ಹೋಗಿ ನೋಡಿದರೆ ಟ್ಯಾಂಕ್‌ ಮೇಲೆ “ಸುಕರ್ಣ’ ಎಂದು ಕಾಣುತ್ತದೆ. ಸುಕರ್ಣ ಯಾವ ಕಂಪೆನಿಯ ಬೈಕ್‌ ಎಂದು ನೀವು ತಲೆಕೆಡಿಸಿಕೊಳ್ಳುವುದು ಗ್ಯಾರಂಟಿ.

ಅಷ್ಟಕ್ಕೂ ರಕ್ಷಿತ್‌ ಬಳಿ ಇರೋದು ರಾಯಲ್‌ ಎನ್‌ಫೀಲ್ಡ್‌ ಬುಲೆಟ್‌ ಬೈಕ್‌. ಅದನ್ನು ಅವರಿಗೆ ಬೇಕಾದಂತೆ ಸ್ಟೈಲಿಶ್‌ ಆಗಿ ರೆಡಿಮಾಡಿಸಿದ್ದಾರೆ. ನೀವು “ಕಿರಿಕ್‌ ಪಾರ್ಟಿ’ ಸಿನಿಮಾ ನೋಡಿದ್ದರೆ ಅದರಲ್ಲಿ ರಕ್ಷಿತ್‌ ಬುಲೆಟ್‌ ಬೈಕ್‌ವೊಂದನ್ನು ಓಡಿಸುತ್ತಾರೆ. ಬುಲೆಟ್‌ನಲ್ಲಿ ಲಾಂಗ್‌ ರೈಡ್‌ ಹೋಗುವ ದೃಶ್ಯವಿದೆ. ಇತ್ತೀಚೆಗೆ ಆ ಬುಲೆಟ್‌ ಅನ್ನು ತಮಗೆ ಬೇಕಾದಂತೆ ಡಿಸೈನ್‌ ಮಾಡಿಸಿ, ಹೊಸ ಲುಕ್‌ ಕೊಟ್ಟಿದ್ದಾರೆ.

ಎಲ್ಲಾ ಓಕೆ ಈ ಬೈಕ್‌ಗೆ ಯಾವ ಹೆಸರು ಕೊಡೋದೆಂದು ರಕ್ಷಿತ್‌ ಆಲೋಚಿಸುತ್ತಿದ್ದಾಗ ಅವರಿಗೆ ತೋಚಿದ್ದು ಸುಕರ್ಣ. ಆ ಹೆಸರು ಕೊಡಲು ಕಾರಣ ಕೂಡಾ “ಕಿರಿಕ್‌ ಪಾರ್ಟಿ’ ಚಿತ್ರ. ಆ ಚಿತ್ರದಲ್ಲಿ ರಕ್ಷಿತ್‌ ಹೆಸರು ಕರ್ಣ ಎಂದು. ಆರಂಭದಲ್ಲಿ ತುಂಟ ವಿದ್ಯಾರ್ಥಿಯಾಗಿರುವ ಕರ್ಣ ಮುಂದೆ ಒಳ್ಳೆಯವನಾಗುತ್ತಾನೆ. ಅದೇ ಕಾರಣಕ್ಕೆ ತಮ್ಮ ಬೈಕ್‌ಗೆ “ಸುಕರ್ಣ’ ಎಂದು ಹೆಸರಿಟ್ಟಿದ್ದಾರೆ ರಕ್ಷಿತ್‌. ಜೊತೆಗೆ ಬೈಕ್‌ ಟ್ಯಾಂಕ್‌ ಮೇಲೆ ಸಣ್ಣ ಅಕ್ಷರಗಳಲ್ಲಿ “ಕಿರಿಕ್‌ ಪಾರ್ಟಿ’ ಎಂದು ಬರೆಯಲಾಗಿದೆ.

ಸದ್ಯ ಈ ಬೈಕ್‌ ಅನೇಕರ ಗಮನ  ಸೆಳೆಯುತ್ತಿರೋದಂತೂ ಸುಳ್ಳಲ್ಲ. ರಾಜರಾಜೇಶ್ವರಿ ನಗರದ ತಮ್ಮ ಕಚೇರಿ ಮುಂದೆ ಬೈಕ್‌ ನಿಲ್ಲಿಸಿದ್ದರೆ ಅದನ್ನು ನೋಡುವವರ, ಅದರ ಜೊತೆ ಫೋಟೋ ತೆಗೆಸಿಕೊಳ್ಳುವವರ ಸಂಖ್ಯೆಯೂ ಹೆಚ್ಚುತ್ತಿದೆ. ಅಂದಹಾಗೆ, ರಕ್ಷಿತ್‌ ಅವರ “ಅವನೇ ಶ್ರೀಮನ್ನಾರಾಯಣ’ ಚಿತ್ರೀಕರಣ ಸೋಮವಾರದಿಂದ ಆರಂಭವಾಗಿದ್ದು, ಬಾಗಲಕೋಟೆಯಲ್ಲಿ ನಡೆಯುತ್ತಿದೆ.

ಈ ಚಿತ್ರದಲ್ಲಿ ರಕ್ಷಿತ್‌ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷಿತ್‌ಗೆ ನಾಯಕಿಯಾಗಿ ಸಾನ್ವಿ ಶ್ರೀವಾತ್ಸವ್‌ ಕಾಣಿಸಿಕೊಳ್ಳುತ್ತಿದ್ದು, ಮಿಕ್ಕಂತೆ ಅಚ್ಯುತ್‌ ಕುಮಾರ್‌, ಪ್ರಮೋದ್‌ ಶೆಟ್ಟಿ, ಬಾಲಾಜಿ ಮನೋಹರ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಚಿತ್ರವನ್ನು ಸಚಿನ್‌ ನಿರ್ದೇಶಿಸುತ್ತಿದ್ದು, ರಕ್ಷಿತ್‌ ಶೆಟ್ಟಿ, ಪುಷ್ಕರ್‌ ಮಲ್ಲಿಕಾರ್ಜುನಯ್ಯ ಮತ್ತು ಪ್ರಕಾಶ್‌ ಸೇರಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಕರಮ್‌ ಚಾವ್ಲಾ ಅವರ ಛಾಯಾಗ್ರಹಣ ಮತ್ತು ಚರಣ್‌ರಾಜ್‌ ಅವರ ಸಂಗೀತವಿದೆ.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.