ಗೋರೆಗಾಂವ್‌ ಕರ್ನಾಟಕ ಸಂಘದ ವಜ್ರಮಹೋತ್ಸವ ಸಂಭ್ರಮಕ್ಕೆ ಚಾಲನೆ


Team Udayavani, Mar 20, 2018, 4:52 PM IST

1903mum03.jpg

ಮುಂಬಯಿ: ಸಂಘ ಅಂತ ಆಗಬೇಕಾ ದರೆ ಮೊದಲು ಏನು ಎಂದು ತಿಳಿಯಬೇಕು.  ತಿಳಿಯದೆ ಸಂಘ ಆಗುವುದೇ ಇಲ್ಲ.  ಧ್ಯೇಯೋದ್ದೇಶ ಮರೆತು ಮುನ್ನಡೆದಾಗ ಆ ಸಂಘಕ್ಕೆ ಸಂಘದ ಮಾನ್ಯತೆ ಇರುವುದಿಲ್ಲ. ಈ ಗೋರೆಗಾಂವ್‌ ಕರ್ನಾಟಕ ಸಂಘವು ದೂರದೃಷ್ಟಿತ್ವ ಹೊಂದಿ ತಿಳುವಳಿಕೆಯೊಂದಿಗೆ ಮುನ್ನಡೆಯುತ್ತಿದೆ. ಕನ್ನಡ ಬೇಕೇಬೇಕು ಕಡಾªಯವಾಗಬೇಕು ಎನ್ನುವ ಕರ್ನಾಟಕದ ಮಹಾಶಯರು, ರಾಜಕಾರಣಿಗಳೇ ಮಾತನಾಡುವ ಕನ್ನಡದಲ್ಲಿ ಶೇ. 70 ರಷ್ಟು ಇಂಗ್ಲೀಷ್‌ ಶಬ್ದಗಳು ಬಳಸುತ್ತಿರುವುದು ದುರದೃಷ್ಟಕರ. ಕನ್ನಡಿಗರಾಗಿ ಕನ್ನಡದವರು ಆಗ‌ದಿರುವುದೇ ಕನ್ನಡಾಂಭೆಯ ದೊಡª ಸೋಲು. ಮುಂಬಯಿಗರಲ್ಲಿ ಕನ್ನಡದ ಅಪ್ಪಟಪ್ರೇಮವಿದೆ. ಆದರೆ ಮುಂಬಯಿವಾಸಿಗರ ಕನ್ನಡಿಗರ‌ಲ್ಲಿ ಶೇ. 90 ರಷ್ಟು ಕನ್ನಡ ಶಬ್ದಗಳೇ ಬಳಕೆ ಆಗುತ್ತಿರುವುದು ಕಂಡಾಗ ಅಚ್ಚರಿ ಉಂಟಾಗುತ್ತದೆ. ನಿಮ್ಮಲ್ಲಿ ಕನ್ನಡದ ಬಗೆಗಿನ ಜ್ಞಾನ, ಮಾನ್ಯತೆಯನ್ನು ಇಲ್ಲಿ ತಿಳಿದು ಕಲಿಯಬೇಕಾಗಿದೆ. ಚೈತನ್ಯ ಕ್ಷಿಣಿಸಿದಾಗ ಮುಪ್ಪು ಅರಸುವುದು ಸಹಜ. ಆದರೆ ಈ ಸಂಸ್ಥೆಯೂ ಅಷ್ಟೇ. ಅರ್ವತ್ತಕ್ಕೇರಿದರೂ ಇನ್ನೂ ಮುಪ್ಪು ಬಾರದಂತಿದೆ. ಕನ್ನಡದ ಕಳಕಳಿ ಜೀವಂತವಾಗಿಸಿದೆ ಎಂದು ಶ್ರೀ  ಕ್ಷೇತ್ರ ಕಟೀಲು ಇದರ ಅನುವಂಶಿಕ ಅರ್ಚಕ  ವೇದಮೂರ್ತಿ ಹರಿನಾರಾಯಣದಾಸ ಆಸ್ರಣ್ಣ ನುಡಿದರು.

ಮಾ. 18 ರಂದು ಪೂರ್ವಾಹ್ನ ಮಲಾಡ್‌ ಪಶ್ಚಿಮ ಬಜಾಜ್‌ ಸಭಾಗೃಹದಲ್ಲಿ ನಡೆದ ಗೋರೆಗಾಂವ್‌ ಕರ್ನಾಟಕ ಸಂಘದ  ವಜ್ರಮಹೋತ್ಸವಕ್ಕೆ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಇವರು,  ಸಂಸ್ಥೆಯ ಅಮೃತಮಹೋತ್ಸವ ಅಂದರೆ ಇನ್ನೂ ಜೀವಂತವಾಗಿದ್ದೇವೆ ಎಂದರ್ಥ. ಇದಕ್ಕೆ ಈ ಸಂಸ್ಥೆ ಮಾದರಿಯಾಗಿದೆ. ನೀವೂ ಕೂಡಾ ಮಕ್ಕಳಿಗೆ ಯಕ್ಷಗಾನ ಕಲಿಸಿರಿ. ಕಾರಣ ಯಕ್ಷಗಾನದಲ್ಲಿ ಶುದ್ಧ ಕನ್ನಡವಿದೆ. ಪ್ರಸಂಗ ಸಾಹಿತ್ಯದಿಂದ ಶುದ್ಧ ಕನ್ನಡದ ಉಳಿವು ಸಾಧ್ಯ ಮತ್ತು ಇದರಿಂದ ಭಾರತೀಯ ಸಂಸ್ಕೃ ತಿಯೂ  ಜೀವಂತವಾಗುವುದು ಎಂದು ನುಡಿದರು.

ಹರಿನಾರಾಯಣ ಆಸ್ರಣ್ಣ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಅರ್ವತ್ತು ದೀಪಗಳನ್ನು ಪ್ರಜ್ವಲಿಸಿ ವಿಧ್ಯುಕ್ತವಾಗಿ ವಜ್ರಮಹೋತ್ಸವಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪ್ರಸಿದ್ಧ ಸಮಾಜ ಸೇವಕ ನ್ಯಾಯವಾದಿ ಜಗದೀಶ್‌ ಶೆಟ್ಟಿ ಹಾಗೂ ಗೌರವ ಅತಿಥಿಗಳಾಗಿ ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ತುಳು ಕನ್ನಡ ವೆಲ್ಫೆàರ್‌ ಅಸೋಸಿಯೇಶನ್‌ ಕಮೋಟೆ ಅಧ್ಯಕ್ಷ ಬೋಳ ರವಿ ಪೂಜಾರಿ, ಕಳತ್ತೂರು ರಾಘವೇಂದ್ರ ಭಟ್‌ ಅವರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ರಮೇಶ್‌ ಕೆ. ಶೆಟ್ಟಿ ಪಯ್ನಾರು ಸ್ವಾಗತಿಸಿ,  ಶ್ರೀನಿವಾಸ ಜೋಕಟ್ಟೆ ಸಂಪಾದಕತ್ವದ ಸಂಘದ ವಾರ್ಷಿಕ ಸಂಚಿಕೆ ಮುಂಬೆಳಕು ಹಾಗೂ ಸಂಘದ ಸದಸ್ಯರ ಪ್ರಬಂಧ ಸಂಕಲನ ಬಿಡುಗಡೆಗೊಳಿಸಿದರು. ಉಪಾಧ್ಯಕ್ಷ ನಾರಾಯಣ ಆರ್‌. ಮೆಂಡನ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಾ ಎಂ. ಸುವರ್ಣ ಮತ್ತು ಬಳಗ ಪ್ರಾರ್ಥನೆಗೈದರು.  ಸೀಮಾ ಕುಲ್ಕರ್ಣಿ ಮತ್ತು ಸಮೂಹ ಸ್ವಾಗತಗೀತೆಗೈದರು.  ಮಹಿಳಾ ವೃಂದವು ಉದ್ಘಾಟನಾ ಗೀತೆಯನ್ನಾಡಿದರು. ಉಷಾ ಎಸ್‌. ಶೆಟ್ಟಿ, ಪದ್ಮಜಾ ಪಿ. ಮಣ್ಣೂರ, ವಾಣಿ ಶೆಟ್ಟಿ ಪಡುಬಿದ್ರಿ ಅತಿಥಿಗಳನ್ನು ಪರಿಚಯಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಎಸ್‌. ಎಂ. ಶೆಟ್ಟಿ, ಶಕುಂತಳಾ ಆರ್‌. ಪ್ರಭು,  ದೇವಲ್ಕುಂದ ಭಾಸ್ಕರ್‌ ಶೆಟ್ಟಿ, ಮಾಜಿ ಗೌರವ  ಪ್ರಧಾನ   ಕಾರ್ಯದರ್ಶಿ ಜಯಕರ್‌ ಡಿ. ಪೂಜಾರಿ, ವಿದ್ಯಾ ದೇಶ್‌ಪಾಂಡೆ ಅತಿಥಿಗಳನ್ನು ಗೌರವಿಸಿದರು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಮೀನಾ ಬಿ. ಕಾಳಾವರ್‌ ಕಾರ್ಯಕ್ರಮ ನಿರೂಪಿಸಿದರು.  ಗೌರವ ಕೋಶಾಧಿಕಾರಿ ವಿಶಾಲಾಕ್ಷಿ ಉಳುವಾರ ವಂದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ನಗರದ ವಿವಿಧ ಸಂಘ-ಸಂಸ್ಥೆಗಳ ಕಲಾವಿದರು ಮತ್ತು ಗೋರೆಗಾಂವ್‌ ಕರ್ನಾಟಕ ಸಂಘದ ಉಪ ವಿಭಾಗಗಳ ಸದಸ್ಯರಿಂದ ನೃತ್ಯ ವೈವಿಧ್ಯ ಹಾಗೂ  ಸಂಘದ ಮಹಿಳಾ ಸದಸ್ಯೆಯರಿಂದ ದೇವಲ್ಕುಂದ ಭಾಸ್ಕರ್‌ ಶೆಟ್ಟಿ ನಿರ್ದೇಶನದಲ್ಲಿ “ಶಶಿಪ್ರಭ ಪರಿಣಯ’ ಯಕ್ಷಗಾನ ತಾಳಮದ್ದಳೆ ಪ್ರದರ್ಶನಗೊಂಡಿತು.   

ಸುಮಿತ್ರಾ ಬಿ. ಗುಜರನ್‌, ಜೆ. ಕೆ. ಹೆಗ್ಡೆ, ಟಿ. ವಿ. ದಂಗಲ್‌ ಮತ್ತಿತರರು ಕಲಾವಿದರನ್ನು ಗೌರವಿಸಿದರು. ಸುಗುಣಾ ಎಸ್‌. ಬಂಗೇರ ಸಾಂಸ್ಕೃತಿಕ  ಕಾರ್ಯಕ್ರಮ ನಿರ್ವಹಿಸಿದರು. 

ಗೋರೆಗಾಂವ್‌ ಕರ್ನಾಟಕ ಸಂಘ ಅಂದರೆ ಶಿಸ್ತುಬದ್ಧತೆಗೆ ಒಂದು ಹೆಸರಾದ ಸಂಸ್ಥೆ. ಕರ್ನಾಟಕದ ಜನತೆಗೆ ಮತ್ತು ಭಷ್ಯತ್ತಿನ ಪೀಳಿಗೆಗೆ ಇದೊಂದು ಮಾದರಿ ಸಂಸ್ಥೆ. ಈ ಸಂಸ್ಥೆ ನೂರಾRಲ ಬಾಳುತ್ತಾ ಕನ್ನಡಾಂಭೆಯ ಸೇವೆಗೆ ಶಕ್ತಿ ತುಂಬಲಿ.
-ಬೋಳ ರವಿ ಪೂಜಾರಿ, ಅಧ್ಯಕ್ಷರು, ತುಳು ಕನ್ನಡ ವೆಲ್ಫೆàರ್‌ ಅಸೋಸಿಯೇಶನ್‌ ಕಮೋಟೆ 

ಕನ್ನಡದ ಸೇವಾ ತೇರನ್ನೆಳೆಯುವ ಈ ಸಂಸ್ಥೆ ಮುಂಬಯಿಯಲ್ಲಿ ಅತ್ಯಂತ ಕೀಯಾಶೀಲ ಸಂಸ್ಥೆ ಎಂದೆಣಿಸಿದೆ. ಆದುದರಿಂದಲೇ ಅರ್ವತ್ತರ ಸೇವಾ ಮುನ್ನಡೆಯಲ್ಲೂ ಸ್ವಂತಿಕೆಯ ವರ್ಚಸ್ಸನ್ನು ಹೊಂದಿರುವುದು ಸ್ತುತ್ಯರ್ಹ. 
-ಉಮಾಕೃಷ್ಣ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ, 
ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗ

ಮುಂಬಯಿಯಂತಹ ಮಹಾನಗರದಲ್ಲಿ ತುಳು-ಕನ್ನಡಿಗರಿಗೆ ಆಶ್ರಯ ನೀಡಿದ ಮಹಾನ್‌ ಸಂಸ್ಥೆ ಇದಾಗಿದೆ. ಇದೊಂದು ಕನ್ನಡದ ಸಾಂಸ್ಕೃತಿಕ, ಸಾಹಿತ್ಯಕ ವೇದಿಕೆಯಾಗಿ ಹಲವಾರು ವಿದ್ವಾಂಸರನ್ನು ರೂಪಿಸಿದೆ. ನಗರದಲ್ಲಿನ ಎಲ್ಲಾ ಸಂಸ್ಥೆಗಳಿಕ್ಕಿಂತಲೂ ಮಹಿಳಾ ಪ್ರಧಾನವಾಗಿ ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿ ಎಲ್ಲಾ ಸಂಸ್ಥೆಗಳಿಗೂ ಮೇಲ್ಪಂಕ್ತಿಯಾಗಿರುವ ಈ ಸಂಘದ ಕಾರ್ಯ ಪ್ರವೃತ್ತಿ ವಿಶಿಷ್ಟವಾಗಿದೆ. ಇಲ್ಲಿನ ಭಾವನಾತ್ಮಕ ಸೇವಾ ಚಿಂತನೆ ಅನುಕರಣೀಯವಾಗಿದೆ.
 -ನ್ಯಾಯವಾದಿ ಜಗದೀಶ್‌ ಶೆಟ್ಟಿ, ಸಮಾಜ ಸೇವಕ 

ಚಿತ್ರ- ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.