ದೇಶ ವಿಭಜಿಸುತ್ತಿರುವ ಆರೆಸ್ಸೆಸ್‌: ರಾಹುಲ್‌


Team Udayavani, Mar 21, 2018, 6:00 AM IST

15.jpg

ಪಡುಬಿದ್ರಿ: ಸೇವಾದಳವು ಪರಸ್ಪರ ಪ್ರೀತಿ, ಬ್ರಾತೃತ್ವವನ್ನು ಬೆಳೆಸುತ್ತದೆ. ಆದರೆ ನಮ್ಮ ವಿರೋಧಿ ಸಂಘಟನೆ ಆರೆಸ್ಸೆಸ್‌ ಕ್ರೋಧ, ಮತ್ಸರಗಳ ಮೂಲಕ ದೇಶವನ್ನು ವಿಭಜಿಸುವ, ಕ್ಷೋಭೆಯನ್ನು ಹೆಚ್ಚಿಸುವ ಕಾರ್ಯ ಮಾಡುತ್ತಿದೆ. ಇದುವೇ ನಮ್ಮ ಮತ್ತು ಆರೆಸ್ಸೆಸ್‌ ನಡುವಣ ವ್ಯತ್ಯಾಸ. ಆದರೂ ನಾವು ಆರೆಸ್ಸೆಸ್‌, ಬಿಜೆಪಿ ಮಂದಿಯನ್ನೂ ಪ್ರೀತಿಯಿಂದಲೇ ಕಾಣುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದರು.

ಅವರು ಮಂಗಳವಾರ ತೆಂಕ ಎರ್ಮಾಳಿನಲ್ಲಿ ರಾಜೀವ್‌ ಗಾಂಧಿ ನ್ಯಾಶನಲ್‌ ಅಕಾಡೆಮಿ ಆಫ್‌ ಪೊಲಿಟಿಕಲ್‌ ಸೈನ್ಸ್‌ ಸಂಸ್ಥೆಯನ್ನು ಉದ್ಘಾಟಿಸಿದ ಬಳಿಕ ಕಾಂಗ್ರೆಸ್‌ ಸೇವಾದಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು. ಸೇವಾದಳದ ಮುಖ್ಯ ಉದ್ದೇಶ ಹಿಂದೂಸ್ಥಾನವನ್ನು ಜೋಡಿಸುವುದಾಗಿದೆ. ಈಚೆಗಷ್ಟೇ ನಾನು ದಿಲ್ಲಿಯಲ್ಲಿ  ಮಾಡಿದ ಒಂದು ಭಾಷಣದಲ್ಲಿ  ಕಾಂಗ್ರೆಸ್‌ ಪಕ್ಷವು ಬದಲಾಗಲು ಬಯಸಿರುವುದಾಗಿ ಹೇಳಿದ್ದೆ. ನಾನು ಬಯಸಿರುವ ಈ ಬದಲಾವಣೆಗಳನ್ನು ಸೇವಾದಳವು ವಸ್ತುಶಃ ಮಾಡಿ ತೋರಿಸಬಲ್ಲದು ಎಂದು ರಾಹುಲ್‌ ಹೇಳಿದರು.

ಮಹಿಳೆಯರು, ಯುವಕರ ಧ್ವನಿ
ಕಾಂಗ್ರೆಸ್‌ ಇರುವ ವರೆಗೂ ಈ ದೇಶದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸಗಳೇ ನಮ್ಮೊಳಗೆ ಬೇರು ಬಿಟ್ಟಿರುತ್ತವೆ. ಸೇವಾದಳವು ಈ ದೇಶದ ಬೆಳವಣಿಗೆಗೆ ಸರಿಯಾದ ದಾರಿ ತೋರಬಲ್ಲದು. ಕಾಂಗ್ರೆಸ್‌ ಪಕ್ಷವು ಮಹಿಳೆಯರು, ಯುವಕರ ಧ್ವನಿಯಾಗಿದೆ ಎಂದೂ ರಾಹುಲ್‌ ಪ್ರತಿಪಾದಿಸಿದರು.

ಆರೆಸ್ಸೆಸ್‌ ಮತ್ತು ಬಿಜೆಪಿ ವಿಚಾರಧಾರೆಗಳು ಈ ದೇಶದಲ್ಲಿ ಭಾರತವನ್ನು ಹರಿಹಂಚಾಗಿಸುವ ರೀತಿಯಲ್ಲಿ ಕಾರ್ಯವೆಸಗುತ್ತಿವೆ. ಕಾಂಗ್ರೆಸ್‌ ಪಕ್ಷವು ವೈವಿಧ್ಯತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸುತ್ತದೆ. ನಮಗೆ ಕರ್ನಾಟಕ, ಉತ್ತರಪ್ರದೇಶ, ತಮಿಳುನಾಡು, ಅಸ್ಸಾಂ ರಾಜ್ಯಗಳೆಲ್ಲವೂ ಸೇರಿ ಸಮಗ್ರ ಭಾರತ ವೆನಿಸುತ್ತದೆ. ನಾವು ಅದನ್ನು ಮನ್ನಿಸುತ್ತೇವೆ. ಆದರೆ ಆರೆಸ್ಸೆಸ್‌ ಈ ರಾಜ್ಯಗಳ ಪರಂಪರೆಯಲ್ಲೂ ತನ್ನದೇ ಆದ ವಿಷಭರಿತ ವಿಚಾರಧಾರೆಯನ್ನು ಪ್ರವಹಿಸಲು ಬಯಸುತ್ತದೆ. ದೇಶದ ಎಲ್ಲ ರಾಜ್ಯಗಳ ಅಭಿವೃದ್ಧಿಯ ಆಶಯಗಳೂ ಕಾಂಗ್ರೆಸ್‌ನ ಸದಾಶಯಗಳಾಗಿರುತ್ತವೆ ಎಂದೂ ರಾಹುಲ್‌ ಗಾಂಧಿ ಅವರು ಹೇಳಿದರು.

ನನ್ನ ಕನಸಿನ ನವ ಕಾಂಗ್ರೆಸ್‌ ಸ್ವರೂಪದಲ್ಲಿ ಕಾಂಗ್ರೆಸ್‌ ಸೇವಾದಳಕ್ಕೂ ಪ್ರಮುಖ ಸ್ಥಾನವಿರುತ್ತದೆ. ಸೇವಾದಳ ಸದಸ್ಯರೆಲ್ಲರೂ ಕಾಂಗ್ರೆಸ್‌ನ ಸದಸ್ಯರು ಎಂದು ರಾಹುಲ್‌ ತಿಳಿಸಿದರು.

ಟಾಪ್ ನ್ಯೂಸ್

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

Prajwal Revanna ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಪತ್ರ

Prajwal Revanna ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಪತ್ರ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

bCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

Congress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

Prajwal Revanna ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಪತ್ರ

Prajwal Revanna ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಪತ್ರ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

bCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

Congress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.