ಉಡುಪಿ: ಹಿಂದೂ ಜನಜಾಗೃತಿ ಪ್ರತಿಭಟನೆ
Team Udayavani, Mar 23, 2018, 8:10 AM IST
ಉಡುಪಿ: ರೋಹಿಂಗ್ಯ ಮುಸಲ್ಮಾನರಿಗೆ ವಸತಿ ನಿರ್ಮಿಸಿಕೊಳ್ಳಲು ನೀಡಿರುವ ಅನುಮತಿಯನ್ನುಮತ್ತು ಹಜ್ ಯಾತ್ರೆ ನಿಮಿತ್ತ ವಿಮಾನ ಬಾಡಿಗೆಯಲ್ಲಿ ನೀಡಲಾಗಿರುವ ರಿಯಾಯತಿಯನ್ನು ತತ್ಕ್ಷಣ ರದ್ದುಪಡಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಉಡುಪಿ ಸಮನ್ವಯಕರಾದ ವಿಜಯ್ ಕುಮಾರ್ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ಅಜ್ಜರಕಾಡಿನ ಹುತಾತ್ಮ ಸೈನಿಕ ಸ್ಮಾರಕದ ಮುಂದೆ ನಡೆದ ರಾಷ್ಟ್ರೀಯ ಹಿಂದೂ ಆಂದೋಲನೆಯಲ್ಲಿ ಮಾತನಾಡುತ್ತಿದ್ದ ಅವರು, ಕೇಂದ್ರ ಸರಕಾರ ಹಜ್ ಯಾತ್ರೆಗೆ ನೀಡುವ ಅನುದಾನವನ್ನು ನಿಲ್ಲಿಸಿತು. ಆದರೂ ಮತ್ತೆ ರಿಯಾಯತಿ ನೀಡುವುದಾಗಿ ಘೋಷಿಸಿದೆ. ಇದನ್ನು ರದ್ದುಪಡಿಸಬೇಕೆಂದರು.
ರೊಹಿಂಗ್ಯಾ ಮುಸಲ್ಮಾನರಿಗೆ ಬೇರೆ ಬೇರೆ ರಾಜ್ಯಗಳಲ್ಲಿ ವಸತಿ ವ್ಯವಸ್ಥೆ ನಿರ್ಮಿಸಲಾಗುತ್ತಿದೆ. ಇವರು ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಮಾಡಿದರೆ ಇದನ್ನು ತಡೆಯುವವರಾರು ಎಂದು ರಾಮ ಶೆಟ್ಟಿಗಾರ್ ಪ್ರಶ್ನಿಸಿದರು. ಇದನ್ನು ರದ್ದುಪಡಿಸಿ ಇವರನ್ನು ದೇಶದಿಂದ ಹೊರ ಹಾಕಬೇಕು ಎಂದು ಆಗ್ರಹಿಸಿದರು. ಭದ್ರತಾ ದೃಷ್ಟಿಯಿಂದ ಭಾರತದಲ್ಲಿ ಇವರಿಗೆ ಅವಕಾಶ ನೀಡಬಾರದೆಂದು ಇಸ್ಕಾನ್ನ ಗೋವಿಂದದಾಸ್ ಆಗ್ರಹಿಸಿದರು.
ಅಂದೋಲನದಲ್ಲಿ ಮಾತಾ ಅಮೃತಾನಂದಮಯೀ ಬಳಗದ ಆನಂದ ಅಮಿನ್ ಇತರರು ಉಪಸ್ಥಿತರಿದ್ದರು. ವಿಶ್ವನಾಥ್ ನಾಯಕ್ ನಿರೂಪಿಸಿದರು. ಅಂದೋಲನದ ನಂತರ ಮನವಿ ಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ