ಪ.ಗೋ. ಪ್ರಶಸ್ತಿ ಪ್ರದಾನ ಸಮಾರಂಭ 


Team Udayavani, Mar 23, 2018, 11:16 AM IST

23-March-5.jpg

ಮಹಾನಗರ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ.ಗೋ.) ಅವರ ಹೆಸರಿನಲ್ಲಿ ಉತ್ತಮ ಗ್ರಾಮೀಣ ವರದಿಗಾರಿಕೆಗಾಗಿ ನೀಡಲಾಗುವ 2017ನೇ ಸಾಲಿನ ಪ.ಗೋ. ಪ್ರಶಸ್ತಿ ಯನ್ನು ಪತ್ರಕರ್ತ ಪ್ರಶಾಂತ್‌ ಎಸ್‌. ಸುವರ್ಣ ಅವರಿಗೆ ಗುರುವಾರ ಮಂಗಳೂರು ಪತ್ರಿಕಾ ಭವನದಲ್ಲಿ ಪ್ರದಾನ ಮಾಡಲಾಯಿತು.

ಪ್ರಶಾಂತ್‌ ಎಸ್‌. ಸುವರ್ಣ ಅವರ ಎಂಡೋಸಲ್ಫಾನ್‌ ಪೀಡಿತರ ಸಮಸ್ಯೆಗೆ ಸಂಬಂಧಿಸಿದ ‘ಕೇಳಿಸದೇ ಈ ಕರುಳಿನ ಕೂಗು’ ಲೇಖನಕ್ಕೆ 2017ನೇ ಸಾಲಿನ ಪ್ರಶಸ್ತಿ ಬಂದಿದ್ದು, ಪ್ರಶಸ್ತಿಯು 10,000 ರೂ. ನಗದು, ಶಾಲು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ.

ಹಿರಿಯ ಪತ್ರಕರ್ತೆ ಅನಿತಾ ಪಿಂಟೋ ಅವರು ಪ್ರಶಸ್ತಿ ವಿತರಿಸಿ ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು. ಪತ್ರಕರ್ತರಿಂದ ಸಮಾಜ ಮುಖಿಯಾದ, ಪರಸ್ಪರ ಸಂಬಂಧ-ಭಾವನೆಗಳನ್ನು ಬೆಳೆಸುವ ಉತ್ತಮ ವರದಿಗಳು ಬರಬೇಕು. ಮೌಲ್ಯ ಭರಿತವಾದ ವರದಿಗಳು ಸಮಾಜಕ್ಕೆ ಹೊಸ ದಿಕ್ಕು ತೋರಬಲ್ಲವು. ಆದ್ದರಿಂದ ಮೌಲಿಕ ವರದಿಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ವರದಿ ಸಮಾಜದ ಅಭಿವೃದ್ಧಿಗೆ ಪೂರಕ
ಪತ್ರಕರ್ತರು ಸೈನಿಕರು ಇದ್ದ ಹಾಗೆ. ಒಳ್ಳೆಯ ಸುದ್ದಿಗಾಗಿ ಎಲ್ಲ ಕಡೆ ಸುತ್ತಾಡುತ್ತಲೇ ಇರಬೇಕಾಗುತ್ತದೆ. ಪತ್ರಕರ್ತನ ಜಾಣ್ಮೆಯಿಂದ ಒಂದು ವರದಿ ಹೊಸ ಆಯಾಮವನ್ನು ಪಡೆದುಕೊಳ್ಳಬಲ್ಲುದು. ಸಮಾಜದ ಅಭಿವೃದ್ಧಿಗೆ ಪೂರಕವಾದ ವರದಿಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಕಟವಾಗಬೇಕು. ಯುವ ಪತ್ರಕರ್ತರಲ್ಲಿ ಸಹಜವಾಗಿಯೇ ಉತ್ಸಾಹ ಹೆಚ್ಚಿರುತ್ತದೆ. ಅವರನ್ನು ಪ್ರೋತ್ಸಾಹಿಸುವಂತಹ ಕಾರ್ಯ ನಡೆದಾಗ ಇತರರಿಗೂ ಪ್ರೇರಣೆ ಲಭಿಸುತ್ತದೆ. ಪ್ರಶಾಂತ್‌ ಸುವರ್ಣ ಅವರು ಪತ್ರಿಕೋದ್ಯಮದ ತಮ್ಮ ಎಳೆಯ ವಯಸ್ಸಿನಲ್ಲಿ ಪ್ರಶಸ್ತಿಗೆ ಪಾತ್ರರಾಗಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದರು.ಪ್ರಶಸ್ತಿ ಸ್ವೀಕರಿಸಿದ ಪ್ರಶಾಂತ್‌ ಸುವರ್ಣ ಪ್ರತಿಕ್ರಿಯಿಸಿ, ಈ ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ನನ್ನ ವರದಿಗಾರಿಕೆಯಲ್ಲಿ ತೃಪ್ತಿ ನೀಡಿದ ವರದಿಗೆ ಪ.ಗೋ. ಪ್ರಶಸ್ತಿ ದೊರೆತಿರುವುದಕ್ಕೆ ಖುಶಿ ಇದೆ ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರಸ್‌ಕ್ಲಬ್‌ ಅಧ್ಯಕ್ಷ ಡಾ| ರೊನಾಲ್ಡ್‌ ಅನಿಲ್‌ ಫೆರ್ನಾಂಡಿಸ್‌ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಪುಷ್ಟರಾಜ್‌ ಬಿ.ಎನ್‌. ಸ್ವಾಗತಿಸಿ, ಶ್ರೀನಿವಾಸ ಇಂದಾಜೆ ವಂದಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ನಿರೂಪಿಸಿದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.