ದಂತ ವೈದ್ಯಕೀಯ ಕ್ಷೇತ್ರದಲ್ಲಿ ವಿಪುಲ ಅವಕಾಶ: ಪ್ರೊ| ಕ್ರಿಸ್‌ ಲೂಕಾ


Team Udayavani, Mar 24, 2018, 9:40 AM IST

Dental-23-3.jpg

ಮಂಗಳೂರು: ಆರೋಗ್ಯ ಸೇವಾ ಕ್ಷೇತ್ರದಲ್ಲಿ ದಂತ ವೈದ್ಯಕೀಯ ವಿಭಾಗವು ಮಹತ್ತರ ಸ್ಥಾನವನ್ನು ಹೊಂದಿದ್ದು, ಇಲ್ಲಿರುವ ವಿಪುಲ ಅವಕಾಶಗಳನ್ನು ಸಮರ್ಪಕವಾಗಿ ದಂತ ವೈದ್ಯರು ಬಳಸಿಕೊಳ್ಳಬೇಕು ಎಂದು ಇಂಗ್ಲೆಂಡ್‌ನ‌ ಯುನಿವರ್ಸಿಟಿ ಆಫ್‌ ಪೋರ್ಟ್ಸ್ಮೌತ್‌ ಡೆಂಟಲ್‌ ಆಕಾಡೆಮಿಯ ನಿರ್ದೇಶಕ ಪ್ರೊ| ಕ್ರಿಸ್‌ ಲೂಕಾ ಅವರು ಹೇಳಿದರು.

ನಗರದ ಡಾ| ಟಿ.ಎಂ.ಎ. ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಶುಕ್ರವಾರ ಜರಗಿದ ಮಂಗಳೂರಿನ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ (ಎಂಕೋಡ್ಸ್‌) ವಾರ್ಷಿಕ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲೂ ಉನ್ನತ ಸಾಧನೆಗಳಿಗೆ ಅವಕಾಶಗಳಿವೆ. ಅದೇ ರೀತಿ ದಂತ ವೈದ್ಯಕೀಯ ಕ್ಷೇತ್ರದಲ್ಲೂ ಕೂಡ ಇವೆ. ಪ್ರತಿ ರೋಗಿಗೂ ನೀಡುವ ಚಿಕಿತ್ಸೆ ಹೊಸ ಹೊಸ ವಿಚಾರಗಳನ್ನು ತಿಳಿಸಿಕೊಡುತ್ತದೆ ಎಂದರು. ಜ್ಞಾನಕ್ಕೆ ಮಿತಿ ಎಂಬುದಿಲ್ಲ. ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಆವಿಷ್ಕಾರಗಳು, ಸಂಶೋಧನೆಗಳು ತ್ವರಿತಗತಿಯಲ್ಲಿ ಆಗುತ್ತಿವೆ. ಆದುದರಿಂದ ಜ್ಞಾನದ ಉನ್ನತೀಕರಣ ಅತೀ ಅಗತ್ಯ. ಈ ನಿಟ್ಟಿನಲ್ಲೂ ದಂತ ವೈದ್ಯಕೀಯ ಪದವೀಧರರು ಗಮನ ಹರಿಸಬೇಕು ಎಂದವರು ಹೇಳಿದರು.

ಮಾಹೆ ಸಹ ಉಪಕುಲಪತಿ (ಮಂಗಳೂರು ಕ್ಯಾಂಪಸ್‌) ಡಾ| ವಿ. ಸುರೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಹಉಪಕುಲಪತಿ ಡಾ| ಪೂರ್ಣಿಮಾ ಬಾಳಿಗ ಅವರು ಕಾಲೇಜಿನ ಮ್ಯಾಗಸಿನ್‌ ಬಿಡುಗಡೆಗೊಳಿಸಿದರು. ಮಂಗಳೂರಿನ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ಡೀನ್‌ ಡಾ| ದಿಲೀಪ್‌ ನಾೖಕ್‌ ಕಾಲೇಜಿನ ಸಾಧನೆಗಳನ್ನು ವಿವರಿಸಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಅಸೋಸಿಯೇಟೆಡ್‌ ಡೀನ್‌ ಡಾ| ಆಶಿತಾ ಉಪ್ಪೂರು ಸ್ವಾಗತಿಸಿದರು. ಅಸೋಸಿಯೇಟೆಡ್‌ ಡೀನ್‌ ಡಾ| ಪ್ರೇಮಲತಾ ಶೆಟ್ಟಿ, ವಿದ್ಯಾರ್ಥಿ ನಾಯಕ ಆಯನ್‌ ಉಪಸ್ಥಿತರಿದ್ದರು. ಡಾ| ಆರತಿ ರಾವ್‌ ಮುಖ್ಯಅತಿಥಿಯನ್ನು ಪರಿಚಯಿಸಿದರು. ಡಾ| ನಂದಿತಾ ಹಾಗೂ ಡಾ| ಕಾರ್ತಿಕ್‌ ಶೆಟ್ಟಿ ನಿರೂಪಿಸಿದರು.

ವಿಶ್ವ ಮನ್ನಣೆ
ಮಣಿಪಾಲ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿವೆ. ಮಣಿಪಾಲ ದಂತ ವೈದ್ಯಕೀಯ ಕಾಲೇಜುಗಳು ಪ್ರತಿಷ್ಠಿತ ದಂತ ವೈದ್ಯಕೀಯ ಸಂಸ್ಥೆಗಳಾಗಿ ಮನ್ನಣೆಗೆ ಪಾತ್ರವಾಗಿವೆ. ಅತ್ಯಾಧುನಿಕ ಸೌಲಭ್ಯಗಳು, ಉತ್ತಮ ಬೋಧಕ ವರ್ಗ ಇಲ್ಲಿದೆ ಎಂದು ಪ್ರೊ| ಕ್ರಿಸ್‌ ಲೂಕಾ ಶ್ಲಾಘಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.