ಜೆಡಿಎಸ್ ಭದ್ರ ಕೋಟೆಗೆ ಮಂಜೇಗೌಡ ಎಂಟ್ರಿ; ಬೆಂಬಲಿಗರಿಗೆ ಬಾಡೂಟ!
Team Udayavani, Mar 24, 2018, 9:20 AM IST
ಹೊಳೆನರಸೀಪುರ: ಜೆಡಿಎಸ್ನ ಭದ್ರ ಕೋಟೆ ಎನಿಸಿಕೊಂಡಿರುವ ಎಚ್.ಡಿ.ರೇವಣ್ಣ ಅವರು ಪ್ರತಿನಿಧಿಸುತ್ತಿರುವ ಹಾಸನ ದ ಹೊಳೆನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಭ್ಯಾವ್ಯ ಅಭ್ಯರ್ಥಿ ಮಂಜೇಗೌಡ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಗೂರು ಮಂಜೇಗೌಡ ಅವರು ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದು ಶುಕ್ರವಾರ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮತದಾರರಿರಗೆ ಭರ್ಜರಿ ಬಾಡೂಟ ಉಣಬಡಿಸಿದ್ದಾರೆ.
ಭರ್ಜರಿ ಮಾಂಸದೂಟವನ್ನು ನೀಡುವ ಮೂಲಕ ಸಾವಿರಾರು ಕಾರ್ಯಕರ್ತರು ಮತ್ತು ಮತದಾರರಿಗೆ ಹತ್ತಿರವಾಗುವ ಯತ್ನ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೂಚನೆ ಮತ್ತು ಟಿಕೆಟ್ ಖಾತ್ರಿಯ ಮೇರೆಗೆ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಕ್ಷೇತ್ರಕ್ಕೆ ಮಂಜೇಗೌಡ ಪ್ರವೇಶಗೈದಿದ್ದಾರೆ. ಕ್ಷೇತ್ರಾದ್ಯಂತ ಹಲವು ಕಾಂಗ್ರೆಸ್ ಕಾರ್ಯಕರ್ತರೊಡಣೆ ಸರಣಿ ಸಭೆಗಳನ್ನು ನಡೆಸುತ್ತಿದ್ದು ಕಾರ್ಯತಂತ್ರವನ್ನೂ ರೂಪಿಸುತ್ತಿದ್ದಾರೆ.
ಮಂಜೇಗೌಡ ಸ್ಪರ್ಧೆಯಿಂದ ಕ್ಷೇತ್ರ ಹೈವೋಲ್ಟೆಜ್ ಕದನಕ್ಕೆ ಸಾಕ್ಷಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ರೇವಣ್ಣ ಅವರಿಗೆ ಸೆಡ್ಡು ಹೊಡೆಯಲು ರಣತಂತ್ರ ರೂಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಮಂಜೇಗೌಡ ಅವರಿಗೆ ದೂರವಾಣಿ ಕರೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರಿ ಕೆಲಸಕ್ಕೆ ತಕ್ಷಣ ರಾಜೀನಾಮೆ ನೀಡಿ ಹೊಳೆನರಸೀಪುರ ಕ್ಷೇತ್ರದಲ್ಲಿ ಎಚ್.ಡಿ.ರೇವಣ್ಣ ಎದುರು ಚುನಾವಣೆಗೆ ನಿಲ್ಲುವಂತೆ ಸೂಚಿಸಿದ್ದರು. ಗೌಡ್ರ ಮಕ್ಕಳು ಗೆದ್ದಿದ್ದು ಸಾಕು, ಈ ಬಾರಿ ಮಂಜೇಗೌಡರನ್ನು ಗೆಲ್ಲಿಸಬೇಕು. ಎಲ್ಲರೂ ಅವರ ಪರ ಕೆಲಸ ಮಾಡಬೇಕು. ತಕ್ಷಣ ನೀನು ರಾಜೀನಾಮೆ ನೀಡಿ ಕ್ಷೇತ್ರಕ್ಕೆ ತೆರಳಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಆ ಆಡಿಯೋ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ