ಕುವೈಟ್‌: ಭಾರತೀಯ ಎಂಜಿನಿಯರುಗಳ ಸಮಸ್ಯೆಗೆ ಕೇಂದ್ರ ಮೌನ


Team Udayavani, Mar 25, 2018, 7:30 AM IST

12.jpg

ಮಂಗಳೂರು: ಕುವೈಟ್‌ನಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ಅನಿವಾಸಿ ಭಾರತೀಯ ಎಂಜಿನಿಯರುಗಳು ಅಲ್ಲಿನ ಆಡಳಿತ ವ್ಯವಸ್ಥೆ ರೂಪಿಸಿರುವ ಹೊಸ ಶೈಕ್ಷಣಿಕ ಅರ್ಹತೆಯ ನಿಯಮದಿಂದಾಗಿ ಎದುರಿಸುತ್ತಿರುವ ಸಮಸ್ಯೆಯ ಕುರಿತಾಗಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿ ಒಂದು ವಾರ ಕಳೆದರೂ ಸ್ಪಂದಿಸಿಲ್ಲ; ಆದರೆ ಕೇರಳ ರಾಜ್ಯ ಸರಕಾರ ಸ್ಪಂದಿಸಿದೆ.

ಕುವೈಟ್‌ನಲ್ಲಿ ಕೆಲಸ ಮಾಡುತ್ತಿರುವ ಅನಿವಾಸಿ ಎಂಜಿನಿಯರುಗಳ ವಾಸ್ತವ್ಯದ ಪರವಾನಿಗೆಯನ್ನು ನವೀಕರಿಸಬೇಕಾದರೆ ಅವರು ಕುವೈಟ್‌ ಎಂಜಿನಿಯರ್ ಸೊಸೈಟಿಯಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂಬುದಾಗಿ ಕುವೈಟ್‌ನ ಪಬ್ಲಿಕ್‌ ಅಥಾರಿಟಿ ಫಾರ್‌ ಮ್ಯಾನ್‌ಪವರ್‌ (ಪಿಎಎಂ) ಸಂಸ್ಥೆಯು ಹೊಸ ನಿಯಮವನ್ನು ಜಾರಿಗೊಳಿಸಿ ಮಾ. 11ರಂದು ಸುತ್ತೋಲೆ ಹೊರಡಿಸಿತ್ತು.
ಇದರಿಂದ ಕುವೈಟ್‌ನಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದವರೂ ಸೇರಿದಂತೆ 13,000ಕ್ಕೂ ಅಧಿಕ ಭಾರತೀಯ ಎಂಜಿನಿಯರುಗಳು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಟ್ವೀಟ್‌ಗೆ ಪ್ರತಿಕ್ರಿಯೆ ಇಲ್ಲ
ಈ ವಿಷಯದಲ್ಲಿ ತತ್‌ಕ್ಷಣ ಕೇಂದ್ರ ಸರಕಾರ ಮಧ್ಯಪ್ರವೇಶಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಒತ್ತಾಯಿಸಿ
ಕರ್ನಾಟಕದ ಕರಾವಳಿಯ ಅನಿವಾಸಿ ಎಂಜಿನಿಯರುಗಳ ಪರವಾಗಿ ಮಂಗಳೂರಿನ ಎಂಜಿನಿಯರ್‌ ಮೋಹನ್‌ದಾಸ್‌ ಕಾಮತ್‌ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಮಾ. 16ರಂದು ಟ್ವೀಟ್‌ ಮಾಡಿದ್ದು, ಇದುವರೆಗೂ ಯಾವುದೇ ರೀತಿಯ ಸ್ಪಂದನೆ ವ್ಯಕ್ತವಾಗಿಲ್ಲ. ಈ ಮಧ್ಯೆ ಕೇರಳ ರಾಜ್ಯ ಸರಕಾರವು ನೂತನ ಶೈಕ್ಷಣಿಕ ಅರ್ಹತೆಯ ನಿಯಮಾವಳಿ ಕುರಿತಂತೆ ಸ್ಪಷ್ಟೀಕರಣ ನೀಡುವಂತೆ ಕುವೈಟ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರ ಬರೆದಿದೆ. 

ಹೊಸ ಶೈಕ್ಷಣಿಕ ಅರ್ಹತೆಯ ನಿಯಮದಿಂದಾಗಿ ತನ್ನ ರಾಜ್ಯದ ಹಲವಾರು ಎಂಜಿನಿಯರುಗಳು ಕುವೈಟ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಕೇರಳದ ಶಾಸಕ ಸುರೇಶ್‌ ಕುರುಪ್‌ ಅವರು ಮನವಿಯ ಮೂಲಕ ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಕುವೈಟ್‌ನಲ್ಲಿರುವ ಭಾರತದ ಎಂಬೆಸಿಗೆ ಪತ್ರ ಬರೆದು ಸ್ಪಷ್ಟನೆ ಕೋರಿದೆ.

ಸಾಮಾನ್ಯವಾಗಿ ನ್ಯಾಶನಲ್‌ ಬೋರ್ಡ್‌ ಆಫ್‌ ಅಕ್ರೆಡಿಟೇಶನ್‌ (ಎನ್‌ಬಿಎ) ನಿಂದ ಮಾನ್ಯತೆ ಪಡೆದಿರುವ ಕೋರ್ಸುಗಳಿಗೆ/ ಸಂಸ್ಥೆಗಳಿಗೆ ಎಲ್ಲ ದೇಶಗಳಲ್ಲಿ ಮನ್ನಣೆ ನೀಡಲಾಗುತ್ತದೆ. ಅಲ್ಲದೆ ಈ ಬಗ್ಗೆ ಸಂಬಂಧಪಟ್ಟ ದೇಶಗಳ ನಡುವೆ ಉದ್ಯೋಗಕ್ಕೆ ಸಂಬಂಧಿಸಿ ಒಡಂಬಡಿಕೆ ಏರ್ಪಟ್ಟಿರುತ್ತದೆ. ಆದ್ದರಿಂದ ಎನ್‌ಬಿಎ ಮಾನ್ಯತೆ ಇರುವ ಸಂಸ್ಥೆಗಳಿಂದ ಎಂಜಿನಿಯರಿಂಗ್‌ ಪದವಿ ಪಡೆದವರು/ ಪಾಸಾದ
ವರು ಉದ್ಯೋಗಕ್ಕಾಗಿ ಮತ್ತೂಂದು ಪರೀಕ್ಷೆ ಬರೆಯುವ ಆವಶ್ಯಕತೆ ಇರುವುದಿಲ್ಲ. ಭಾರತ ಸರಕಾರವು ವೃತ್ತಿಶಿಕ್ಷಣ ಸಂಸ್ಥೆಗಳಿಗೆ/ ಕೋರ್ಸುಗಳಿಗೆ ಎನ್‌ಬಿಎ ಅಕ್ರೆಡಿಟೇಶನ್‌ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದು 2015 ಜನವರಿ ತಿಂಗಳಲ್ಲಿ. ಹಾಗಾಗಿ 2015ಕ್ಕಿಂತ ಮೊದಲು ಎಂಜಿನಿಯರಿಂಗ್‌ ಪದವಿ ಪಡೆದು ಪ್ರಸ್ತುತ ಕುವೈಟ್‌ನಲ್ಲಿ ನೌಕರಿ ಮಾಡುತ್ತಿರುವ ಎಂಜಿನಿಯರುಗಳು ಮಾತ್ರ ತೀವ್ರ ಆತಂಕಕ್ಕೆ ಸಿಲುಕಿದ್ದಾರೆ. ಅಂತಹವರಿಗೆ ಮತ್ತೂಮ್ಮೆ ಪರೀಕ್ಷೆಗೆ ಹಾಜರಾಗಬೇಕೆಂಬ ನಿಯಮದಿಂದ ವಿನಾಯಿತಿ ನೀಡುವಂತೆ ಕೇರಳ ಸರಕಾರವು ಕೇಂದ್ರ ಸರಕಾರದ ಮೇಲೆ ಒತ್ತಡ ತಂದಿದೆ ಎಂದು ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಅವರು ವಿವರಿಸಿದ್ದಾರೆ. ಕೇರಳ ಸರಕಾರದ ಮಾದರಿಯಲ್ಲಿ ಕರ್ನಾಟಕ ಸರಕಾರವೂ ಇದೇ ರೀತಿ ಕೇಂದ್ರ ಸರಕಾರದ ಮೇಲೆ ಒತ್ತಡ ತಂದು, ಈ ವಿಷಯದಲ್ಲಿ ಮಧ್ಯ ಪ್ರವೇಶಿಸಬೇಕೆಂದು ಕುವೈಟ್‌ನಲ್ಲಿರುವ ಮಂಗಳೂರಿನ ಎಂಜಿನಿಯರ್‌ ಮೋಹನ್‌ದಾಸ್‌ ಕಾಮತ್‌ ಮನವಿ ಮಾಡಿದ್ದಾರೆ.  

ಕುವೈಟ್‌ನಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ಭಾರತದ ಎಂಜಿನಿಯರುಗಳ ಸಮಸ್ಯೆಗೆ ಸ್ಪಂದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಟ್ವೀಟ್‌ ಮಾಡಿ ಹಲವು ದಿನಗಳಾದರೂ ಕೇಂದ್ರ ಸರಕಾರ ಮೌನ ವಹಿಸಿರುವ ಬಗ್ಗೆ ಕಾಮತ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.