ಇನ್ನೂ ಬಂದಿಲ್ಲ ಅಡಿಕೆ-ತೆಂಗು ಬೆಳೆ ನಷ್ಟ ಪರಿಹಾರ


Team Udayavani, Mar 27, 2018, 5:57 PM IST

cta.jpg

ಚಿತ್ರದುರ್ಗ: ಸತತ ಬರ, ಅಂತರ್ಜಲ ಕುಸಿತ, ಪ್ರಕೃತಿ ವಿಕೋಪದಿಂದ ಕೋಟ್ಯಂತರ ರೂ. ಮೌಲ್ಯದ ಅಡಿಕೆ ಮತ್ತು ತೆಂಗಿನ ಮರಗಳು ಒಣಗಿ  ಹೋಗಿವೆ. ಬೆಳೆ ಹಾನಿ ಪರಿಹಾರ ನೀಡುವಂತೆ ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂಟು ತಿಂಗಳು ಕಳೆದರೂ ಪರಿಹಾರ ಮಾತ್ರ ಬಿಡುಗಡೆಯಾಗಿಲ್ಲ.

ಜಿಲ್ಲೆಯ 57, 110 ಹೆಕ್ಟೇರ್‌ ಪ್ರದೇಶದಲ್ಲಿ ವಾಣಿಜ್ಯ ಬೆಳೆಯಾಗಿ ತೆಂಗು ಬೆಳೆ ಬೆಳೆಯಲಾಗುತ್ತಿದ್ದು ರಾಜ್ಯದಲ್ಲಿ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. 20 ಸಾವಿರಕ್ಕೂ ಹೆಚ್ಚಿನ ಹೆಕ್ಟೇರ್‌ ಪ್ರದೇಶದಲ್ಲಿನ ತೆಂಗು ಮತ್ತು ಅಡಿಕೆ ಮರಗಳು ಒಣಗಿ ಹೋಗಿವೆ. 10,103.30 ಹೆಕ್ಟೇರ್‌ ಪ್ರದೇಶದ 3,26,617 ಸಂಖ್ಯೆಯ ತೆಂಗಿನ ಮರಗಳಿಗೆ 288.89 ಕೋಟಿ ರೂ. ಹಾಗೂ 10042.20 ಹೆಕ್ಟೇರ್‌ ಪ್ರದೇಶದಲ್ಲಿನ 30,74, 975 ಅಡಿಕೆ ಮರಗಳಿಗೆ 626.98 ಕೋಟಿ ರೂ. ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿತ್ತು.

ಒಟ್ಟು 20145.50 ಹೆಕ್ಟೇರ್‌ ಪ್ರದೇಶದಲ್ಲಿನ 34,01,592 ಅಡಿಕೆ ಮತ್ತು ತೆಂಗಿನ ಮರಗಳ ಹಾನಿಯಿಂದಾಗಿ 915.88 ಕೋಟಿ ರೂ.ಗಳ ಬೆಳೆ ಹಾನಿಯಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌) ಮಾನದಂಡದ ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾ ಧಿಕಾರಿಗಳು ಕಳೆದ ವರ್ಷ ಜುಲೈ 4 ರಂದು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಜಿಲ್ಲೆಯ ರೈತರು ಹರಸಾಹಸ ಮಾಡಿ ಟ್ಯಾಂಕರ್‌ ಮೂಲಕ ನೀರುಣಿಸಿ ಅಡಿಕೆ ಮತ್ತು ತೆಂಗಿನ ತೋಟ ಉಳಿಸಿಕೊಳ್ಳಲು ಮಾಡಿದ ಭಗೀರಥ ಪ್ರಯತ್ನವೂ ಫಲ ನೀಡಲಿಲ್ಲ. ಅಡಿಕೆ ಮತ್ತು ತೆಂಗಿನ ಮರಗಳು ಒಣಗಿಹೋಗಿ ಕೋಟ್ಯಂತರ ರೂ. ಆರ್ಥಿಕ ನಷ್ಟ ಅನುಭವಿಸಬೇಕಾಗಿದೆ. ಸಾವಿರಾರು ಕೊಳವೆಬಾವಿಗಳನ್ನು ಕೊರೆಸಿದರೂ ಯಾವುದರಲ್ಲೂ ನೀರು ಸಿಗಲಿಲ್ಲ. ಕೊನೆಗೆ ಟ್ಯಾಂಕರ್‌ ಮೂಲಕ ನೀರು ಹಾಕಲಾಯಿತು. ಕೊಳವೆಬಾವಿ, ಟ್ಯಾಂಕರ್‌ ಮತ್ತು ನೀರಿಗಾಗಿ ರೈತರು ಲಕ್ಷಾಂತರ ರೂ. ಸಾಲ ಮಾಡಿಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. 

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ, ಮಂಗಳವಾರ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಾತ್ರ ಅಡಿಕೆ, ತೆಂಗು ಬೆಳೆಗಾರರೊಂದಿಗೆ ಸಂವಾದ ನಡೆಸಿದ ಶಾ, ಜಿಲ್ಲೆಯ ಬೆಳೆಗಾರರೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮ ನಿಗದಿಯಾಗಿಲ್ಲ. ಇದು ಜಿಲ್ಲೆಯ ಕೃಷಿಕರಲ್ಲಿ ಸೋಜಿಗ ಮೂಡಿಸಿದೆ.  

ಒಣಗಿದ ಪ್ರತಿ ತೆಂಗಿನ ಮರಕ್ಕೆ 20 ಸಾವಿರ ರೂ., ಅಡಿಕೆ ಮರಕ್ಕೆ 10 ಸಾವಿರ ರೂ. ಪರಿಹಾರ ನೀಡಲು ಆಗ್ರಹಿಸಿ ಅಮಿತ್‌ ಶಾ ಅವರಿಗೆ ಮನವಿ ಸಲ್ಲಿಸಲಾಗುತ್ತದೆ. ಅಲ್ಲದೆ 2017ನೇ ಸಾಲಿನಲ್ಲಿ ಬೆಳೆ ವಿಮೆ ವಿತರಣೆ ಆಗಿಲ್ಲ. ಈ ಬಗ್ಗೆಯೂ ಅವರ ಗಮನಕ್ಕೆ ತರಲಾಗುವುದು. 
ಕೆ.ಪಿ. ಭೂತಯ್ಯ, ರೈತ ಸಂಘದ ರಾಜ್ಯ ಉಪಾಧ್ಯಕ್ಷ.

ಒಣಗಿ ನಿಂತ ತೆಂಗು ಮತ್ತು ಅಡಿಕೆ ತೋಟಗಳಿಗೆ ಪರಿಹಾರ ನೀಡಿ ಎಂದು ಅಮಿತ್‌ ಶಾ ಅವರಲ್ಲಿ ಒತ್ತಾಯ ಮಾಡುವುದಿಲ್ಲ. ಆದರೆ ಜಿಲ್ಲೆಯ ರೈತರ ಸ್ಥಿತಿಗತಿ, ಅಡಿಕೆ, ತೆಂಗು ಹಾನಿ ಕುರಿತು ಅವರಿಗೆ ಮನವರಿಕೆ ಮಾಡುತ್ತೇವೆ.
ಕೆ.ಎಸ್‌. ನವೀನ್‌, ಬಿಜೆಪಿ ಜಿಲ್ಲಾಧ್ಯಕ್ಷ

„ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.