ತೃತೀಯ ರಂಗಕ್ಕಾಗಿ ಮಮತಾ ಮಾತು
Team Udayavani, Mar 28, 2018, 6:00 AM IST
ಹೊಸದಿಲ್ಲಿ: NDAಯಿಂದ ಟಿಡಿಪಿ ಹೊರಬರುತ್ತಿದ್ದಂತೆಯೇ ತೃತೀಯ ರಂಗ ಸ್ಥಾಪನೆ ಪ್ರಕ್ರಿಯೆ ಮತ್ತೂಮ್ಮೆ ಮಹತ್ವ ಪಡೆದಿದೆ. ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರೇ ತೃತೀಯ ರಂಗ ಕಟ್ಟುವ ಕೆಲಸಕ್ಕೆ ಕೈಹಾಕಿದ್ದು, ಮಂಗಳವಾರ ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಸಂಜಯ್ ರಾವತ್ರನ್ನು ಭೇಟಿ ಮಾಡಿದ್ದಾರೆ.
ಭೇಟಿ ಅನಂತರದಲ್ಲಿ ಮಾತನಾಡಿದ ಮಮತಾ, ಚುನಾವಣೆಗಳಲ್ಲಿ ಬಿಜೆಪಿ ವಿಜಯವನ್ನು ಹತ್ತಿಕ್ಕಲು ವಿಪಕ್ಷಗಳು ಒಂದಾಗಬೇಕಿದೆ ಎಂದು ಆಗ್ರಹಿಸಿದ್ದಾರೆ. ಎಲ್ಲ ವಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು. ಬಿಜೆಪಿ ವಿರುದ್ಧ ಹೋರಾಡಲು ರಾಜ್ಯಗಳಲ್ಲಿ ಅತ್ಯಂತ ಬಲಿಷ್ಠ ವಿಪಕ್ಷವನ್ನು ನಾವು ಬೆಂಬಲಿಸಬೇಕು ಎಂದಿದ್ದಾರೆ.
ಬಿಜೆಪಿ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ದೇಶದೆಲ್ಲೆಡೆ ಬಿಜೆಪಿ ವಿರೋಧಿ ಅಲೆಯಿದೆ. ನಾನು ಎಲ್ಲ ರಾಜ್ಯಗಳಿಗೂ ಪ್ರವಾಸ ಮಾಡಿದ್ದೇನೆ. ಜನರ ಭಾವನೆ ನನಗೆ ತಿಳಿದಿದೆ. ನೋಟು ಅಪಮೌಲ್ಯ, ಜಿಎಸ್ಟಿ, ಬ್ಯಾಂಕ್ ಹಗರಣಗಳು ತಳಮಟ್ಟದ ಜನರನ್ನೂ ಬಾಧಿಸಿವೆ ಎಂದವರು ಹೇಳಿದ್ದಾರೆ. ಬಿಜೆಪಿಯ ಬಂಡಾಯ ಮುಖಂಡರಾದ ಶತ್ರುಘ್ನ ಸಿನ್ಹಾ, ಯಶವಂತ ಸಿನ್ಹಾ ಹಾಗೂ ಅರುಣ್ ಶೌರಿಯವರನ್ನೂ ಬುಧವಾರ ಭೇಟಿ ಮಾಡುವುದಾಗಿ ಮಮತಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ