ವಾರಾಹಿ ತಟದಲ್ಲಿದ್ದರೂ ಕುಡಿಯುವ ನೀರಿಗೆ ತತ್ವಾರ


Team Udayavani, Mar 28, 2018, 10:53 AM IST

Water-Tank-Ullur-28-3.jpg

ಸಿದ್ದಾಪುರ: ಸುಡುಬಿಸಿಲು, ಅಂತರ್ಜಲ ಬರಿದಾಗಿ ಕುಡಿವ ನೀರಿಗೆ ಹಾಹಾಕಾರ. ಕಳೆದ ವರ್ಷ ನೀರಿನ ತೀವ್ರ ಕೊರತೆ ಎದುರಿಸಿದ್ದ ಸಿದ್ದಾಪುರ ಗ್ರಾ.ಪಂ.ಗೆ ಈ ವರ್ಷವೂ ನೀರಿನ ಅಭಾವದ ಬಿಸಿ ತಟ್ಟಿದೆ. ಸಿದ್ದಾಪುರ ಪಂಚಾಯತ್‌ ಒಂದು ಭಾಗದಲ್ಲಿ ವಾರಾಹಿ ನದಿ, ಇನ್ನೊಂದು ಭಾಗದಲ್ಲಿ ಕುಬ್ಜ ನದಿ ಹರಿಯುತ್ತಿದೆ. ಗ್ರಾಮದಲ್ಲಿ ವಾರಾಹಿ ಕಾಲುವೆ ಹಾದು ಹೋಗಿದೆ. ಆದರೂ ಜನರ ದಾಹ ಇಂಗಿಸುವ ಕೆಲಸ ಆಗಿಲ್ಲ.  

ಶಾಶ್ವತ ಯೋಜನೆಗಳು 
ಸಿದ್ದಾಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಾರ್ಡು ಒಂದು ಮತ್ತು ಆರರಲ್ಲಿ ಶಾಶ್ವತ ಯೋಜನೆ ರೂಪಿಸಲಾಗಿದೆ. ವಾರ್ಡು ಒಂದರ ಹಣೆಮಕ್ಕಿ ಮತ್ತು ವಾರ್ಡು 6ರ ಸೋಣು ಪ್ರದೇಶದಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಸ್ವಂತ ಬಾವಿಗಳಿವೆ. ಅಲ್ಲದೆ ಗ್ರಾ. ಪಂ. ಒಂದು ಬೋರ್‌ವೆಲ್‌ ಕೊರೆದು ಓವರ್‌ ಹೆಡ್‌ ಟ್ಯಾಂಕ್‌ ಮೂಲಕ ನೀರು ನೀಡುತ್ತಿದೆ. ಸೋಣು ಪ್ರದೇಶದಲ್ಲಿ ಸುಮಾರು ಒಂದು ಎಕರೆಗೂ ಮಿಕ್ಕಿದ ವಿಸ್ತೀಣದ ನೈಸರ್ಗಿಕ ಕೆರೆ ಇದೆ. ಅಲ್ಲಲ್ಲಿ ಮದಗಗಳು ಇವೆ. ಇವುಗಳ ಹೂಳು ತೆಗೆದರೆ, ಕುಡಿವ ನೀರಿಗೆ, ಕೃಷಿಗೆ ನೀರು ಪೂರೈಸಬಹುದಾಗಿದೆ. 

ಸಿದ್ದಾಪುರ ಗ್ರಾ. ಪಂ. ವ್ಯಾಪ್ತಿ 
ಸಿದ್ದಾಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ 6 ವಾರ್ಡುಗಳು ಇದ್ದು, 19ಜನ ಸದಸ್ಯರು ಇದ್ದಾರೆ. 2,200 ಕುಟುಂಬಗಳು ಇದ್ದು, 7,401 ಜನರಿದ್ದಾರೆ. ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ 8 ಬೋರ್‌ವೆಲ್‌ಗ‌ಳು, 15 ತೆರೆದ ಬಾವಿಗಳು ಹಾಗೂ ವಾರಾಹಿ ನದಿಗೆ 20 ಅಶ್ವಶಕ್ತಿಯ ಒಂದು ಪಂಪ್‌ಸೆಟ್‌ ಆಳವಡಿಸಲಾಗಿದೆ.

ಜನ್ಸಾಲೆ ವಾರ್ಡ್‌ಗೆ ನೀರಿಲ್ಲ 
ವರ್ಷಂಪ್ರತಿ ಜನ್ಸಾಲೆ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ತಲೆದೋರುತ್ತದೆ. ಈ ಬಾರಿಯೂ ಪರಿಸ್ಥಿತಿ ಹಾಗೇ ಇದೆ. ಇಲ್ಲಿ ನೀರಿನ ಸಮಸ್ಯೆ ನೀಗಿಸಲು ಕುಬ್ಜ ನದಿಗೆ ಕಿಂಡಿ ಅಣೆಕಟ್ಟಿನ ಅವಶ್ಯ ಇದೆ. ಅಲ್ಲದೆ ವಾರಾಹಿ ಕಾಲುವೆಯ ನೀರು ಸಿದ್ದಾಪುರ ಗ್ರಾಮದ ಐರಬೈಲು ಬಳಿ ಏತ ನೀರಾವರಿಯ ಮೂಲಕ ಸಿದ್ದಾಪುರ ಕೆಳಪೇಟೆಯ ಕಾಸಿಕೆರೆಗೆ ಹಾಯಿಸಿ, ಅಲ್ಲಿನಿಂದ ನೈಸರ್ಗಿಕ ತೋಡುಗಳ ಮೂಲಕ ನೀರು ಹರಿಸಿದಲ್ಲಿ ಜನ್ಸಾಲೆ ವಾರ್ಡ್‌ ನ ನೀರಿನ ಸಮಸ್ಯೆಗೆ ಪರಿಹಾರ ಕಾಣಬಹುದಾಗಿದೆ.

ಮುಂಜಾಗ್ರತೆ ಕ್ರಮ
ಬೇಸಗೆಯಲ್ಲಿ ಆಗಬಹುದಾದ ಸಮಸ್ಯೆಗಳಿಗೆ ಸ್ಥಳೀಯಾಡಳಿತ ಜಾಗರೂಕತೆ ವಹಿಸಿದೆ. ಪಂಚಾಯ್ತಿನ ವ್ಯಾಪ್ತಿಯಲ್ಲಿ ವಾರಾಹಿ ನದಿ ನೀರನ್ನು ಪಂಪ್‌ ಮೂಲಕ ಓವರ್‌ಹೆಡ್‌ ಟ್ಯಾಂಕ್‌ಗೆ ಶೇಖರಣೆ, ಪ್ರತಿ ವಾರ್ಡುಗಳಲ್ಲಿ ಬೋರ್‌ವೆಲ್‌ ಹಾಗೂ ಓವರ್‌ ಹೆಡ್‌ ಟ್ಯಾಂಕ್‌, ತೆರೆದ ಬಾವಿಗಳನ್ನು ನಿರ್ಮಿಸಿ, ನೀರು ಪೂರೈಕೆ ಮಾಡಲಾಗುತ್ತಿದೆ. ಹಾಗಿದ್ದೂ ಬೇಸಗೆಯನ್ನು ನೀರಿನ ಬರ ತೀವ್ರವಾದರೆ ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೆ ವ್ಯವಸ್ಥೆ ಮಾಡಲಾಗಿದೆ.

ಬೇಡಿಕೆ ಅನುಗುಣ ನೀರು ಪೂರೈಕೆ
ಎಪ್ರಿಲ್‌- ಮೇ ತಿಂಗಳಲ್ಲಿ ನೀರಿನ ಸಮಸ್ಯೆ ಕಾಡುತ್ತದೆ. ಬೇಡಿಕೆ ಅನುಗುಣವಾಗಿ ನೀರು ಪೂರೈಕೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆರೆ, ಮದಗಗಳ ಹೂಳು ಎತ್ತಬೇಕಾಗಿದೆ. ವಾರಾಹಿ ಕಾಲುವೆ ನೀರು ಬಳಕೆಯಾಗುವಂತೆ ಯೋಜನೆ ರೂಪಿಸಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನವಾದಲ್ಲಿ ಶಾಶ್ವತ ಕುಡಿಯುವ ನೀರಿನ ಸಮಸ್ಯೆ ನೀಗುತ್ತದೆ.
– ಸತೀಶ್‌ ನಾಯ್ಕ, ಪಿಡಿಒ ಗ್ರಾ.ಪಂ. ಸಿದ್ದಾಪುರ

ಶಾಶ್ವತ ಯೋಜನೆ ರೂಪಿಸಲು ಚಿಂತನೆ
ಕುಡಿಯುವ ನೀರಿನ ಶಾಶ್ವತ ಯೋಜನೆ ರೂಪಿಸುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ಐರಬೈಲು ಬಳಿ ವಾರಾಹಿ ಕಾಲುವೆಯ ಪಕ್ಕ ಬಾವಿ ನಿರ್ಮಿಸಿ ಅಲ್ಲಿನಿಂದ ಪೈಪ್‌ಲೈನ್‌ ಮೂಲಕ ನೀರು ತರುವ ಯೋಜನೆ ಇದೆ. ಮೇಲ್‌ಜಡ್ಡುನಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸಿದಲ್ಲಿ ಅಲ್ಲಿಂದ ಸಿದ್ದಾಪುರ ಜನ್ಸಾಲೆ ಗ್ರಾಮಗಳಿಗೆ ನೀರು ಪೂರೈಕೆ ಮಾಡಬಹುದಾಗಿದೆ. 
– ಡಿ. ಭರತ್‌ ಕಾಮತ್‌, ಉಪಾಧ್ಯಕ್ಷರು, ಗ್ರಾಮ ಪಂಚಾಯತ್‌ ಸಿದ್ದಾಪುರ

ಏತ ನೀರಾವರಿ ಯೋಜನೆ ರೂಪಿಸಿ 
ವಾರಾಹಿ ಕಾಲುವೆಯ ನೀರು ಏತ ನೀರಾವರಿಯ ಮೂಲಕ ಸಿದ್ದಾಪುರ ಕೆಳಾಪೇಟೆಯ ಕಾಸಿಕೆರೆಗೆ ಹಾಯಿಸಿ, ಅಲ್ಲಿನಿಂದ ನೈಸರ್ಗಿಕ ತೋಡುಗಳ ಮೂಲಕ ನೀರು ಹರಿಸಿದಲ್ಲಿ ಅನುಕೂಲವಾಗುತ್ತದೆ. ಈ ಒಂದು ಯೋಜನೆಯಿಂದ ಸಿದ್ದಾಪುರ ಗ್ರಾಮ ಪಂಚಾಯತ್‌ ಅಲ್ಲದೆ ಪಕ್ಕದ ಅಂಪಾರು, ಆಜ್ರಿ ಗ್ರಾ. ಪಂ.ಗಳಿಗೂ ಉಪಯೋಗವಾಗುತ್ತವೆ.  
– ಎಸ್‌. ರಾಜೀವ ಶೆಟ್ಟಿ ಶಾನ್ಕಟ್ಟು, ಕಾರ್ಯದರ್ಶಿ, ಬಾಳ್ಕಟ್ಟು ನದಿ ನೀರು ಬಳಕೆದಾರರ ವೇದಿಕೆ

— ಸತೀಶ ಆಚಾರ್‌ ಉಳ್ಳೂರು

ಟಾಪ್ ನ್ಯೂಸ್

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.