ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ…


Team Udayavani, Mar 30, 2018, 7:30 AM IST

21.jpg

ನನಗೆ ಪರಿಚಯದ ಹುಡುಗಿಯೊಬ್ಬಳು ಇತ್ತೀಚೆಗೆ ಡೈವೋರ್ಸ್‌ಗೆ ನಿರ್ಧಾರ ತೆಗೆದುಕೊಂಡಳು. ಕಾರಣ ಕೇಳಬೇಕು ಎಂಬ ಕುತೂಹಲ ನನಗಿರಲಿಲ್ಲ. ಬೇಸರದಲ್ಲಿದ್ದಾಳೆ ಎಂದು ಫೋನ್‌ ಮಾಡಿದರೆ ಅವಳೇ ಕಾರಣಗಳನ್ನು ಹೇಳುತ್ತಾ ಸಾಗಿದಳು. ಅವಳು ಹೇಳುವ ದೂರುಗಳು ಇಂತಿವೆ; ಬೆಳಿಗ್ಗೆ ಕೆಲಸಕ್ಕೆ ಹೋದ ಗಂಡ ರಾತ್ರಿ ಮನೆಗೆ ಬರುತ್ತಾನೆ. ಬಂದ ಮೇಲೆ “ನೀನು ಹೇಗಿದ್ದಿಯಾ’ ಎಂದು ಕೇಳುವುದಿಲ್ಲ. ಊಟ ತಿಂದು ಮಲಗುತ್ತಾರೆ. ಇಡೀ ಹೊತ್ತು ಮನೆಯಲ್ಲಿ ಕುಳಿತುಕೊಂಡು ನನಗೂ ಬೋರ್‌ ಆಗಿರುತ್ತದೆ. ಒಂದು ಸ್ವಲ್ಪ ಹೊತ್ತಾದರೂ ಮಾತನಾಡಬೇಕು ಅನಿಸುತ್ತೆ. ಆದರೆ, ಮಾತನಾಡುವುದು ಯಾರ  ಜತೆ? ಅವರು ಅವರ ಫೋನ್‌ನಲ್ಲಿ ಬ್ಯುಸಿಯಾಗಿ ಬಿಡುತ್ತಾರೆ. ಹಾಗಂತ ನನ್ನ ಗಂಡನಿಗೆ ಬೇರೊಂದು ಸಂಬಂಧವಿದೆ ಎಂದು ನಾನು ಹೇಳುತ್ತಿಲ್ಲ. ಮನೆಗೆ ಬಂದಾಗ ಅವರು ವಾಟ್ಸಾಪ್‌, ಫೇಸ್‌ಬುಕ್‌, ಟಿವಿಯಲ್ಲಿ ಮುಳುಗಿರುತ್ತಾರೆ. ನಾನೇದರೂ ಮಾತನಾಡಿ ಎಂದರೆ, ನಮ್ಮಿಬ್ಬರ ಮಧ್ಯೆ ಮಾತೇ ಇರುವುದಿಲ್ಲ. ಇದರ ಬಗ್ಗೆ ಕೇಳಿದರೆ “ಏನು ಮಾತನಾಡುವುದಿಲ್ಲ? ಜತೆಗೇ ಇದ್ದೇವೆಯಲ್ಲಾ’ ಎಂದು ಉಡಾಫೆ ಮಾತನಾಡುತ್ತಾರೆ. ಆಗ ನನಗೆ ಎಲ್ಲಿಲ್ಲದ ಸಿಟ್ಟು ಒತ್ತರಿಸಿಕೊಂಡು ಬರುತ್ತದೆ. ಇದೇ ಕಾರಣಕ್ಕೆ ನಮ್ಮಿಬ್ಬರ ಮಧ್ಯೆ ಆಗಾಗ ದೊಡ್ಡ ಜಗಳವೇ ನಡೆಯುತ್ತದೆ. ಮಾತಿಗಿಂತ ಮೌನವೇ ಜಾಸ್ತಿಯಾಗಿದೆ. ಅವರ ಈ ಗುಣವೇ ನನಗೆ ಹಿಡಿಸಿಲ್ಲ. ಇವತ್ತು ಸರಿ ಹೋಗ್ತಾರೆ, ನಾಳೆ ಸರಿ ಹೋಗ್ತಾರೆ ಎಂದು ನಾನು ಕಾದೆ, ಆದರೆ ಅವರು ಮತ್ತೆದೇ ಹಳೆ ಚಾಳಿ ಶುರುಮಾಡಿಕೊಂಡಿದ್ದಾರೆ. ನನ್ನ ಗೆಳತಿಯರೆಲ್ಲ ಅವರವರ ಗಂಡನ ಜತೆ ಸುಖವಾಗಿ ಇದ್ದಾರೆ. ನನ್ನ ಬದುಕು ಈ ರೀತಿ ಆಗಿದೆ. ಮದುವೆ ಆಗಿಯೇ ತಪ್ಪು ಮಾಡಿದೆ ಅನಿಸುತ್ತೆ. ಇನ್ನು ಹೆಚ್ಚು ದಿನ ಈ ಉಸಿರುಗಟ್ಟಿಸುವ ವಾತಾವರಣದಲ್ಲಿದ್ದರೆ ಕಷ್ಟ ಎಂದು ದೂರ ಆಗುವ ನಿರ್ಧಾರ ತೆಗೆದುಕೊಂಡು ಬಿಟ್ಟೆ. ನನಗೂ ಬದುಕುವ ದಾರಿ ಗೊತ್ತು. ಗಂಡನಿಲ್ಲದೇ ಹೆಣ್ಣು ಬಾಳಬಲ್ಲಳು, ಬೆಂಗಳೂರಿನಲ್ಲಿ ಕಂಪೆನಿಗಳಿಗೇನೂ ಬರವೆ? ಯಾವುದಾದರೊಂದು ಕೆಲಸ ಸಿಕ್ಕಿಯೇ ಸಿಗುತ್ತದೆ.

ಅವಳು ಮಾತನಾಡುತ್ತಲೇ ಇದ್ದಳು. ಅವಳು ಹೇಳುತ್ತಿದ್ದ ಕಾರಣ ಯಾವುದೂ ನನಗೆ ಪ್ರಿಯವೆನಿಸಿರಲಿಲ್ಲ. ಅವಳ ಬದುಕು ಅವಳದು ಎಂದು ಸುಮ್ಮನಾದೆ. ಬೆಂಗಳೂರಿನಲ್ಲಿ ಕೆಲಸ ಸಿಗಬಹುದು! ಆದರೆ, ಮತ್ತದೇ ಬದುಕು ಕಟ್ಟಿಕೊಳ್ಳುವುದು ಅಷ್ಟು ಸುಲಭದ ಮಾತಾ?
ತಂತ್ರಜ್ಞಾನ, ಜಾಗತೀಕರಣ ನಮ್ಮನ್ನು ವಿಚಾರಶೂನ್ಯರನ್ನಾಗಿ ಮಾಡಿದೆಯಾ? ಈ ಸಂಬಂಧಗಳು ಇಷ್ಟು ಸಡಿಲವಾಗುವುದಕ್ಕೆ ಮುಖ್ಯ ಕಾರಣವಾದರೂ ಏನು? ನಮ್ಮಲ್ಲಿನ ಸಂಸ್ಕಾರದ ಕೊರತೆಯಾ? ತಾಳ್ಮೆ ಇಲ್ಲದಿರುವಿಕೆಯ ಅಥವಾ ಅಹಂಕಾರನಾ? ತಣ್ಣೀರನ್ನಾದರೂ ತಣಿಸಿ ಕುಡಿಯಬೇಕು ಎಂದು ಹಿರಿಯರು ಹೇಳುತ್ತಾರೆ. ಆದರೆ, ಇದಕ್ಕೆಲ್ಲ ನಮ್ಮ ಬಳಿ ಸಮಯವೆಲ್ಲಿದೆ? ಎಲ್ಲವೂ ಫಾಸ್ಟ್‌ ಆಗಿ ಆಗಬೇಕು ಎಂಬ ಹಪಾಹಪಿಗೆ ಬಿದ್ದಿದ್ದೇವೆ. ನಮ್ಮ ಬದುಕನ್ನು ಇನ್ಯಾರದೋ ಬದುಕಿಗೆ ಹೋಲಿಸಿಕೊಂಡು ಬಾಳುತ್ತೇವೆ. ಅರೆ! ಅವರೆಷ್ಟು ಚೆನ್ನಾಗಿದ್ದಾರೆ. ಮೊನ್ನೆಯಷ್ಟೆ ಲಂಡನ್‌ ಟ್ರಿಪ್‌ಗೆ ಹೋಗಿ ಬಂದಿದ್ದಾರೆ. ಅವಳ ಗಂಡ ಅವಳ ಹುಟ್ಟುಹಬ್ಬಕ್ಕೆ ನೆಕ್ಲೇಸ್‌ ಕೊಡಿಸಿದ್ದಾರೆ. ನೀವು ಇದ್ದೀರಿ ಮದುವೆಯಾಗಿ ಇಷ್ಟು ವರ್ಷ ಆದರೂ ಏನೂ ಕೊಡಿಸಿಲ್ಲ. ನನಗೂ ಸಾಕಾಗಿ ಹೋಗಿದೆ ಎಂದು ಚುಚ್ಚು ಮಾತುಗಳ ಮಳೆಗರೆಯುತ್ತೇವೆ. ಇನ್ಯಾರದ್ದೋ ಜೀವನದೊಂದಿಗೆ ನಮ್ಮ ಜೀವನವನ್ನು ಹೋಲಿಸಿಕೊಂಡಾಗಲೇ ಸಂಸಾರದಲ್ಲೊಂದು ಅಸಮಾಧಾನ ಮೆಲ್ಲಗೆ ಹೊಗೆಯಾಡುವುದಕ್ಕೆ ಶುರುವಾಗುತ್ತದೆ. ಹೊಗೆ ಬೆಂಕಿಯ ಜ್ವಾಲೆಯಾಗಿ ಮನಸ್ಸಿನ ನೆಮ್ಮದಿಯನ್ನು ಅಪೋಶನ ತೆಗೆದುಕೊಳ್ಳುತ್ತದೆ. ಆದರೂ ನಮ್ಮೊಳಗಿನ ಹೋಲಿಕೆ ಮಾಡುವ ಗುಣ ಮಾತ್ರ ಕಡಿಮೆಯಾಗಿಲ್ಲ. ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ಮನಸ್ಸು ತುಡಿಯುತ್ತಲೇ ಇರುತ್ತದೆ.

ಹೊಂದಾಣಿಕೆಯ ಸಮಸ್ಯೆ
ನಮ್ಮಲ್ಲಿ ಈಗ ಮುಖ್ಯವಾಗಿ ಕಾಡುತ್ತಿರುವ ಸಮಸ್ಯೆ ಎಂದರೆ ಹೊಂದಾಣಿಕೆ. “ನಾನ್ಯಾಕೆ ನೀ ಹೇಳಿದ್ದು ಕೇಳಬೇಕು’ ಎಂಬ ಭಾವ. ಇದೇ ಸಂಸಾರದ ಒಡಕಿಗೆ ಕಾರಣವಾಗುತ್ತದೆ. ಒಬ್ಬರ ಮಾತನ್ನು ಇನ್ನೊಬ್ಬರು ಗೌರವಿಸುವ ಗುಣ ಬೆಳೆಸಿಕೊಂಡರೆ ಬದುಕು ಸುಂದರಮಯವಾಗುತ್ತದೆ. ಕೈಯಲ್ಲಿರುವ ಎಲ್ಲ ಬೆರಳುಗಳು ಹೇಗೆ ಸಮನಾಗಿರುವುದಿಲ್ಲವೋ ಹಾಗೇ ಗಂಡ-ಹೆಂಡಿರ ಮಧ್ಯೆ ಎಲ್ಲ ಭಾವನೆಗಳು ಸಮನಾಗಿರುವುದಿಲ್ಲ. ಒಬ್ಬರು ಇನ್ನೊಬ್ಬರ ಭಾವನೆಯನ್ನು ಗೌರವಿಸುವ, ಪ್ರೀತಿಸುವ ಗುಣ ಬೆಳೆಸಿಕೊಳ್ಳಬೇಕಿದೆ.  

ಪ್ರೀತಿ ಹಾಗೂ ಸರಸದ ಮಾತಿಗಿಂತ ಅಹಂಕಾರ ಹಾಗೂ ಚುಚ್ಚು ಮಾತುಗಳೇ ಸಂಸಾರದದಲ್ಲಿ ಹೆಚ್ಚಾದರೆ ನಮ್ಮ ಕೀಳು ಮಾತಿನಿಂದ ನಾವೇ ಬೆಲೆ ತೆರಬೇಕಾಗುತ್ತದೆ. ಕೆಲಸ ಮಾಡಿ ಬಂದಿರುವ ಗಂಡನಿಗೆ ನೂರೊಂದು ಒತ್ತಡವಿದ್ದಿರಬಹುದು. ಹೆಣ್ಣು  ಸ್ವಲ್ಪ ಅರಿತು ಬಾಳಿದರೆ ಜೀವನ ಹೊಸದೊಂದು ತಿರುವು ತೆಗೆದುಕೊಳ್ಳುತ್ತದೆ. ಹಾಗೇ ಹೆಣ್ಣು ಮನೆಯಲ್ಲಿದ್ದಾಳೆ ಎಂದ ಮಾತ್ರಕ್ಕೆ ಅವಳದ್ದು ತಾತ್ಸಾರದ ಬದುಕಲ್ಲ. ಹೊತ್ತು ಹೊತ್ತಿಗೆ ತುತ್ತುಬೇಯಿಸಿ ಹಾಕಿ ಗಂಡ, ಮಕ್ಕಳನ್ನು ನೋಡಿಕೊಳ್ಳುವ ಕೆಲಸ ಸುಲಭವೆಂದವರು ಯಾರು?

“ನಿನ್ನನ್ನು ಕಟ್ಟಿಕೊಂಡು ನಾನೇನು ಸುಖ ಪಟ್ಟೆ, ನನಗೆ ಬೇಕಾದಷ್ಟು ಸಂಬಂಧ ಬಂದಿತ್ತು. ನಿನ್ನ ಕಟ್ಟಿಕೊಂಡು ಹೀಗಾದೆ’ ಎಂದು ಗಂಡ ಅಥವಾ ಹೆಂಡತಿ ಹೇಳುತ್ತಿದ್ದರೆ ಆ ಸಂಸಾರದಲ್ಲಿ ಬಿರುಗಾಳಿಯೇ ಏಳುತ್ತದೆ. ಇನ್ನು ನಮ್ಮ ಜಗಳವನ್ನು ಮಕ್ಕಳು ನೋಡುತ್ತಿದ್ದರೆ ಅದು ಅವರ ಮುಗ್ಧ ಮನಸ್ಸಿನ ಮೇಲೂ ಪ್ರಭಾವ ಬೀರುತ್ತದೆ. “ನಾನು ನಿಮ್ಮಷ್ಟೇ ದುಡಿಯುತ್ತೇನೆ’ ಎಂಬ ಅಹಂಕಾರ ಹೆಣ್ಣಿಗೂ ಬೇಡ. ಇಬ್ಬರು ದುಡಿಯುವುದು ಸಂಸಾರಕ್ಕಾಗಿ ಹಾಗೂ ಅವರಿಬ್ಬರ ಮುಂದಿನ ಭವಿಷ್ಯಕ್ಕಾಗಿ ಎಂಬ ಸಣ್ಣದೊಂದು ಅರಿವಿದ್ದರೆ ಅಹಂಕಾರ ತಲೆ ಎತ್ತುವುದಿಲ್ಲ. ಸಂಸಾರದಲ್ಲಿ ಹೆಣ್ಣು ಕನಿಷ್ಠವೂ ಅಲ್ಲ, ಗಂಡು ಗರಿಷ್ಠನೂ ಅಲ್ಲ. ಇಬ್ಬರೂ ಸಂಸಾರದ ಕಣ್ಣು.

ಇನ್ನು ಗಂಡನಾಗಲಿ, ಹೆಂಡತಿಯಾಗಲಿ  ಐದು ನಿಮಿಷ ಕುಳಿತು ಆ ದಿನದ ಆಗುಹೋಗುಗಳ ಕುರಿತು ಮಾತನಾಡುವಷ್ಟು ಸಮಯವನ್ನು ಹೊಂದಿಸಿಕೊಳ್ಳಬೇಕು. ಆಗ ಇಬ್ಬರ ಮನಸ್ಸಿಗೂ ಖುಷಿಯಾಗುತ್ತದೆ. ಒಬ್ಬರು ಇನ್ನೊಬ್ಬರ ಮಾತನ್ನು ಕೇಳಿಸಿಕೊಳ್ಳುವಷ್ಟು ತಾಳ್ಮೆ ಇರಬೇಕು. 

ಹೆಂಡತಿಯ ತಪ್ಪನ್ನು ಗಂಡ ತನ್ನ ಮನೆಯವರ ಬಳಿ ಮಾತನಾಡುವುದು ಇನ್ನು ಗಂಡನ ತಪ್ಪನ್ನು ಹೆಂಡತಿ ತನ್ನ ತಾಯಿಯ ಬಳಿ ಹೇಳುವುದನ್ನು ಮಾಡಬಾರದು. ನಮ್ಮ ಬದುಕು ನಮ್ಮದು. ಇನ್ಯಾರೋ ಅಭಿಪ್ರಾಯ ನಮ್ಮೊಳಗಿನ ಅಂತರವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಗಂಡನ ಬಗ್ಗೆ ಅಥವಾ ಹೆಂಡತಿಯ ಬಗ್ಗೆಯಾಗಲಿ ಇನ್ನೊಬ್ಬರ ಬಳಿ ಚಾಡಿ ಹೇಳಬಾರದು. ಇದರಿಂದ ನಾವೇ ನಗೆಪಾಟಲಿಗೆ ಈಡಾಗಬೇಕಾಗುತ್ತದೆ. ನಮ್ಮ ಗಂಡ ಅಥವಾ ಹೆಂಡತಿಯ ಬಗ್ಗೆ ನಾವೇ ಇನ್ನೊಬ್ಬರಿಗೆ ಮಾತನಾಡುವುದಕ್ಕೆ ಅವಕಾಶ ಮಾಡಿಕೊಟ್ಟ ಹಾಗೇ ಆಗುತ್ತದೆ. 

ವ್ಯಾಟ್ಸಾಪ್‌, ಮೊಬೈಲ್ ಡೀಪಿಯಲ್ಲಿ ಫೋಟೊ ಹಾಕಿ “ಮಿಸ್‌ ಯೂ’, “ಲವ್‌ ಯೂ’ ಅನ್ನುವುದಕ್ಕಿಂತ ನೇರಾನೇರವಾಗಿ ಹೇಳುವುದರಿಂದ ಸಂಬಂಧದ ಗಾಢತೆ, ಬಾಂಧವ್ಯ ಮತ್ತಷ್ಟು ಹೆಚ್ಚುತ್ತದೆ. ನಮ್ಮ ಸಂಬಂಧ ತೋರಿಕೆಯಾದರೆ ಅದು ಬೇಗ ಬೆಲೆ ಕಳೆದುಕೊಳ್ಳುತ್ತದೆ. ಇಬ್ಬರೂ ಕೆಲಸ ಮಾಡುತ್ತಿದ್ದರೆ, ಮನೆಕೆಲಸದಲ್ಲಿ ಒಬ್ಬರು ಇನ್ನೊಬ್ಬರಿಗೆ ಸಹಾಯ ಮಾಡುವ ಮನೋಭಾವ ಇಟ್ಟುಕೊಳ್ಳಬೇಕು. ಆಯಾಸವೆಂಬುದು ಹೆಣ್ಣಿಗೆ ಕಡಿಮೆ, ಗಂಡಿಗೆ ಜಾಸ್ತಿ ಎಂದು ಇಲ್ಲ. 

ಒಂದು ಹೆಣ್ಣಿಗೊಂದು ಗಂಡು, ಹೇಗೋ ಸೇರಿ ಹೊಂದಿಕೊಂಡು, ಕಾಣದೊಂದು ಕನಸು ಕಂಡು, ಮಾತಿಗೊಲಿಯದಮೃತ ಉಂಡು ದುಃಖ ಹಗುರವೆನುತಿರೆ ಪ್ರೇಮವೆನಲು ಹಾಸ್ಯವೆ ಎಂಬ ಕವಿತೆಯಂತೆ ಬದುಕು ಸುಂದರಮಯವಾಗಿರಲಿ.

ಪವಿತ್ರಾ ರಾಘವೇಂದ್ರ ಶೆಟ್ಟಿ 

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.