ಕಡೇಚೂರ-ಬಾಡಿಯಾಳ ಭೂ ಸಂತ್ರಸ್ತರಿಂದ ಧರಣಿ


Team Udayavani, Mar 29, 2018, 3:55 PM IST

yad-1.jpg

ಸೈದಾಪುರ: ಕಡೇಚೂರ-ಬಾಡಿಯಾಳ ಕೈಗಾರಿಕ ಪ್ರದೇಶದಲ್ಲಿ ಭೂಮಿ ಕಳೆದುಕೊಂಡ ರೈತರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಯಾದಗಿರಿ-ರಾಯಚೂರ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಧರಣಿ ನಡೆಸಿದರು.

ಕಡೇಚೂರ-ಬಾಡಿಯಾಳ ಹಾಗೂ ಶಟ್ಟಿಹಳ್ಳಿ ಗ್ರಾಮದ ರೈತರಿಂದ ಕರ್ನಾಟಕ ಕೈಗಾರಿಕ ಅಭಿವೃದ್ಧಿ ಮಂಡಳಿ ಸುಮಾರು 3,300 ಎಕರೆ ಭೂಮಿ ಪಡೆದುಕೊಂಡಿದೆ. ನಿಗದಿತ ಕೈಗಾರಿಕ ಪ್ರದೇಶದಲ್ಲಿ ಭೂ ಸಂತ್ರಸ್ತರಿಗೆ ನಿವೇಶನ ಹಾಗೂ ಉದ್ಯೋಗ ಕೊಡಲಾಗುವುದು ಎಂದು ಭರವಸೆ ನೀಡಿತ್ತು. ಭೂ ಕಳೆದುಕೊಂಡು ಏಳು ವರ್ಷ ಕಳೆದರೂ ಯಾವುದೇ ಕಾರ್ಖಾನೆಗಳು ಸ್ಥಾಪನೆಯಾಗಿಲ್ಲ. ಇದರಿಂದ ಭೂಮಿ ಕಳಕೊಂಡ ರೈತರು, ಯುವಕರು ಉದ್ಯೋಗವಿಲ್ಲದೆ ಕಂಗಾಲಾಗಿ ಗುಳೆ ಹೋಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಚೆಗೆ ಉದ್ಘಾಟನೆಗೊಂಡ ರೈಲ್ವೆ ಕೋಚ್‌ ಫ್ಯಾಕ್ಟರಿಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದೆ, ಅನ್ಯ ರಾಜ್ಯದವರಿಗೆ ಉದ್ಯೋಗ ನೀಡಿದ್ದಾರೆ. ಸ್ಥಳೀಯರಿಗೆ ಕೆಲಸ ಕೊಡದ ಕೋಚ್‌ ಫ್ಯಾಕ್ಟರಿ ಬಂದ್‌ ಮಾಡಬೇಕು. ಯುವಕರಿಗಾಗಿ ಕೈಗಾರಿಕ ತರಬೇತಿ ಕೇಂದ್ರ ಆರಂಭಿಸಬೇಕು. ಆರೋಗ್ಯ ಹಿತದೃಷ್ಟಿಯಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು. ನೆನಗುದಿಗೆ ಬಿದ್ದಿರುವ 33 ಕೆ.ವಿ ವಿದ್ಯುತ್‌ ಘಟಕ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು.

ಆರಂಭದಲ್ಲಿ ಪ್ರತಿ ಎಕರೆ ಭೂಮಿಗೆ ಕೇವಲ ಆರು ಲಕ್ಷ ಮಾತ್ರ ನೀಡಿದ್ದು, ಅದರ ಬೆಲೆಯನ್ನು ಸುಮಾರು 24 ಲಕ್ಷ ರೂಪಾಯಿಗೆ ಹೆಚ್ಚಿಸಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ಸತ್ಯಾಗ್ರಹ ನಡೆಸಿದರು. ಕಡೇಚೂರು-ಬಾಡಿಯಾಳ ಮತ್ತು ಶಟ್ಟಿಹಳ್ಳಿ ಭೂ ಸಂತ್ರಸ್ಥರ ಧರಣಿ ನಿರತ ಸ್ಥಳಕ್ಕೆ ಜಿಲ್ಲಾಡಳಿತದ ಪರವಾಗಿ ಯಾದಗಿರಿ ತಹಶೀಲ್ದಾರ್‌ ಮಲ್ಲೇಶ ತಂಗಾ ಆಗಮಿಸಿ, ರೈತರ ಅಹವಾಲನ್ನು ಸ್ವೀಕರಿಸಿದರು. ರೈತರ ಸಮಸ್ಯೆಗಳ ಕುರಿತು ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದ ನಂತರ ರೈತರು ಧರಣಿ ವಾಪಾಸ್‌ ಪಡೆದರು.

ಕಡೇಚೂರ ಸಂಸ್ಥಾನ ಮಠದ ಪೀಠಾಧಿಪತಿ ಗುರುಮೂರ್ತಿ ಶಿವಚಾರ್ಯ, ಸಿದ್ದಣ್ಣಗೌಡ ಕಡೇಚೂರ, ಭೀಮಣ್ಣಗೌಡ ಕ್ಯಾತನಾಳ, ಶರಣಗೌಡ ಬಾಡಿಯಾಳ, ಬಸವರಾಜಪ್ಪಗೌಡ ಬೆಳಗುಂದಿ, ಚಂದಪ್ಪ ಕಾವಲಿ, ಗೌಸುದ್ದಿನ್‌ ಚಂದಾಪುರ, ಸೂಗುರಪ್ಪ ಸಾಹುಕಾರ, ವೆಂಕಟರೆಡ್ಡಿ ಪಾಟೀಲ್‌, ವೀರೇಶ ಆವಂಟಿ, ಆಮೀರಲಿ ಕೊಣಂಪಲ್ಲಿ, ತಿಪ್ಪಣ್ಣ ನೀಮಕರ್‌, ಎಂ. ಬೀಮಣ್ಣ, ಖಾಜಿ ಖೈಯಿಮ್‌ ಪಾಷಾ, ಸಿದ್ದರಾಮಪ್ಪ ಪಾಟೀಲ್‌, ಬಿ. ಬಸವರಾಜ, ಶ್ರೀನಿವಾಸ ಪೊರ್ಲಾ, ಚಂದ್ರು ಗಡ್ಡಮಿದಾ ಸೇರಿದಂತೆ ನೂರಾರು ರೈತರು ಇದ್ದರು.

ಧರಣಿ ಸ್ಥಳಕ್ಕೆ ಡಿವೈಎಸ್‌ಪಿ ಪಾಂಡುರಂಗ, ಸಿಪಿಐ ಶಿವಾನಂದ ವಾಲಿಕರ್‌, ಪಿಎಸ್‌ಐ ಎನ್‌. ಜನಗೌಡ ಹಾಗೂ ಪೊಲೀಸ್‌ ಸಿಬ್ಬಂದಿ ಬಿಗಿ ಬಂದೋಬಸ್ತ್ ಕಲ್ಪಿಸಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.