ಶೈಕ್ಷಣಿಕ ಸಾಲಕ್ಕೆ ಬಡ್ಡಿ ವಿನಾಯಿತಿ ಬಲ


Team Udayavani, Mar 30, 2018, 6:00 AM IST

Prakash-Javdekar-600.jpg

ಹೊಸದಿಲ್ಲಿ: ಶಿಕ್ಷಣಕ್ಕಾಗಿ ಸಾಲ ಪಡೆದುಕೊಂಡಿದ್ದೀರಾ? ಇನ್ನು ಅದರ ಬಡ್ಡಿ ಹಾಗೂ ಕಂತನ್ನು ಕೋರ್ಸ್‌ ಮುಗಿದು ಒಂದು ವರ್ಷದವರೆಗೂ ಪಾವತಿ ಮಾಡಬೇಕಾಗಿಲ್ಲ. ಇಂಥ ವ್ಯವಸ್ಥೆಯನ್ನು ಕೇಂದ್ರ ಸರಕಾರವೇ ಒದಗಿಸಿದೆ. ಅದಕ್ಕಾಗಿಯೇ ಕೇಂದ್ರದ ವತಿಯಿಂದ 6,600 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2017-18ರಿಂದ 2019-20ನೇ ಸಾಲಿನ ವರೆಗೆ ಸುಮಾರು ಹತ್ತು ಲಕ್ಷ ವಿದ್ಯಾರ್ಥಿಗಳಿಗೆ ಯೋಜನೆ ನೆರವಾಗಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಹೇಳಿದ್ದಾರೆ. ಪ್ರತಿ ವರ್ಷ 2,200 ಕೋಟಿ ರೂ. ಮೊತ್ತವನ್ನು ಬಡ್ಡಿ ಪಾವತಿಗಾಗಿಯೇ ಸರಕಾರ ಮೀಸಲಿರಿಸಿದೆ.

ಶೈಕ್ಷಣಿಕ ಸಾಲದಲ್ಲಿ ಇದುವರೆಗೆ, ಸಾಲದ ಕಂತು ಆರಂಭವಾಗಲು ಕೋರ್ಸ್‌ ಮುಗಿದ ಮೇಲೆ ಒಂದು ವರ್ಷದ ಹೆಚ್ಚುವರಿ ಕಾಲಾವಕಾಶ ಇರುತ್ತಿತ್ತಾದರೂ ಬಡ್ಡಿಯ ಮೊತ್ತವನ್ನು ಸಾಲ ಕೊಟ್ಟಂದಿನಿಂದಲೇ ಪರಿಗಣಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಸಾಲದ ಕಂತು ಆರಂಭವಾಗುವ ದಿನದಿಂದ ಬಡ್ಡಿ ಲೆಕ್ಕ ಹಾಕಲಾಗುತ್ತದೆ. ಸರಳವಾಗಿ ಹೇಳುವುದಿದ್ದರೆ ಎರಡು ವರ್ಷಗಳ ಸ್ನಾತಕೋತ್ತರ ಪದವಿ ಆಗಿದ್ದರೆ, ಕೋರ್ಸ್‌ ಮುಗಿದ ಒಂದು ವರ್ಷದವರೆಗೆ ಬಡ್ಡಿ ವಿಧಿಸಲಾಗುವುದಿಲ್ಲ. 2018-19ನೇ ಸಾಲಿನಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದರೆ, 2019-20 ಮತ್ತು ಒಂದು ವರ್ಷದವರೆಗೆ ಅಂದರೆ 2021ರ ವರೆಗೆ ಅದನ್ನು ಪಾವತಿ ಮಾಡಬೇಕಾಗಿಲ್ಲ.

ಆದಾಯ ಮಿತಿ: ವಾರ್ಷಿಕ ಆದಾಯ 4.5 ಲಕ್ಷ ರೂ.ಗಳಿಗಿಂತ ಕಡಿಮೆ ಇರುವ ಕುಟುಂಬದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿದ್ದಾರೆ. ಈ ಯೋಜನೆ ವ್ಯಾಪ್ತಿಯಲ್ಲಿ 7.50 ಲಕ್ಷ ರೂ. ವರೆಗೆ ಶೈಕ್ಷಣಿಕ ಸಾಲ ಪಡೆಯಲು ಅವಕಾಶ ಇದೆ. ಅದಕ್ಕೆ ಸರಕಾರವೇ ಬಡ್ಡಿ ಪಾವತಿಸಲಿದೆ. ಯೋಜನೆಗಾಗಿ 2009ರಿಂದ 2014ರ ವರೆಗೆ ಪ್ರತಿ ವರ್ಷ 800 ಕೋಟಿ ರೂ. ವೆಚ್ಚ ಮಾಡಿದೆ ಎಂದಿದ್ದಾರೆ ಸಚಿವ ಜಾಬ್ಡೇಕರ್‌. 2014ರಿಂದ 2017ರ ಅವಧಿಯಲ್ಲಿ ಈ ಯೋಜನೆಗಾಗಿ  ಪ್ರತಿ ವರ್ಷ 1,800 ಕೋಟಿ ರೂ. ನೀಡಲಾಗಿದೆ ಎಂದಿದ್ದಾರೆ. ಈ ಯೋಜನೆಗೆ ಬಡ್ಡಿ ಪ್ರಮಾಣವೂ ಕಡಿಮೆ ಇರಲಿದೆ.

ಪಠ್ಯಗಳಲ್ಲಿ ಕ್ಯೂಆರ್‌ ಕೋಡ್‌
2019ರಿಂದ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಕ್ಯೂಆರ್‌ ಕೋಡ್‌ಗಳನ್ನು ಅಳವಡಿಸಲಾಗುತ್ತದೆ. ಅದರಿಂದ ವೆಬ್‌ ಆಧಾರಿತ ಲಿಂಕ್‌ಗಳ ಮೂಲಕ ಆಯಾ ವಿಷಯಕ್ಕೆ ಸಂಬಂಧಿಸಿದ ವೀಡಿಯೋ, ಪ್ರಾತ್ಯಕ್ಷಿಕೆಗಳನ್ನು ನೋಡಲು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದರಿಂದ ಆ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯಲಿದೆ.

ಮೂರು ಯೋಜನೆ ವಿಲೀನ: ಸರ್ವಶಿಕ್ಷಾ ಅಭಿಯಾನ್‌, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ್‌ ಮತ್ತು ಟೀಚರ್ಸ್‌ ಎಜುಕೇಶನ್‌ (ಟಿ.ಇ) ಅನ್ನು ವಿಲೀನಗೊಳಿಸಲಾಗುತ್ತದೆ ಎಂದೂ  ಜಾಬ್ಡೇಕರ್‌ ತಿಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಈ ಮೂರು ಯೋಜನೆಗಳನ್ನು ವಿಲೀನಗೊಳಿಸಲು ನಿರ್ಧರಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.