ಮಾವು ಕಳ್ಳನಿಂದ ಪೇದೆ ಮೇಲೆ ಹಲೆ
Team Udayavani, Mar 30, 2018, 10:10 AM IST
ದಾವಣಗೆರೆ: ಮಾವು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದ ಪೇದೆಯನ್ನು ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ ಘಟನೆ ದೇವರಾಜ ಅರಸು ಬಡಾವಣೆಯಲ್ಲಿ ನಡೆದಿದೆ. ಬಡಾವಣೆ ಠಾಣೆ ಪೇದೆ ಇಟಗಿ ಸಿದ್ದಪ್ಪ ಹಲ್ಲೆಗೊಳಗಾದವರು. ಬುಧವಾರ ಬೆಳಗಿನ ಜಾವ 2.30ರ ವೇಳೆಗೆ ದೇವರಾಜ ಅರಸು ಬಡಾವಣೆಯ 2ನೇ ತಿರುವಿನಲ್ಲಿನ ವೀರೇಶ್ ಎಂಬುವರ ಮನೆ ಮುಂದಿದ್ದ ಮಾವಿನ ಗಿಡದಲ್ಲಿ ಮಾವಿನ ಕಾಯಿ ಕಳವು ಮಾಡುತ್ತಿರುವ ಕುರಿತು ದೂರು ನೀಡಲಾಗಿತ್ತು. ಸ್ಥಳಕ್ಕೆ ಹೋದ ಪೇದೆಗಳಾದ ಇಟಗಿ ಸಿದ್ದಪ್ಪ, ಇನಾಯತ್ ಮಾವಿನ ಕಾಯಿ ಕಳವು ಮಾಡುತ್ತಿದ್ದ ಜಾಲಿನಗರ ನಿವಾಸಿ ಅಸ್ಗರ್ ಆಲಿ ಪೇದೆ ಸಿದ್ದಪ್ಪನ ಮೇಲೆ ಹಲ್ಲೆ ಮಾಡಿದ್ದಾನೆ.
ಜೊತೆಗೆ ಪ್ರಾಣ ಬೆದರಿಕೆ ಸಹ ಹಾಕಿದ್ದಾನೆ. ಹಲ್ಲೆ ಮಾಡುವ ವೇಳೆ ಜಮಾಯಿಸಿದ ಸಾರ್ವಜನಿಕರು ಆರೋಪಿಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದು ಪೊಲೀಸ್ ಅಧಿಕಾರಿಗಳು ಆತನನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪೊಲೀಸ್ ಮೇಲೆ ಹಲ್ಲೆ
ದಾವಣಗೆರೆ: ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಮುಖ್ಯ ಪೇದೆ ಮತ್ತು ಹೋಂಗಾರ್ಡ್ ಮೇಲೆ ಹಲ್ಲೆ ಮಾಡಿದ್ದು ಮಾತ್ರವಲ್ಲದೆ,
ಘಟನಾ ಸ್ಥಳಕ್ಕೆ ಬಂದ ಎಎಸ್ಐ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಎಸ್.ಎಸ್. ಬಡಾವಣೆಯ ಎ.ಆರ್. ಮಂಜುನಾಥ(28), ನಿಟುವಳ್ಳಿ ಧನುಷ್(28) ಹಲ್ಲೆಮಾಡಿದ ಆರೋಪಿಗಳು. ವಿದ್ಯಾನಗರ ಠಾಣೆಯ ಮುಖ್ಯ ಪೇದೆ ಮಲ್ಲೇಶ್ ಹಾಗೂ ಅವರ ಜೊತೆಗಿದ್ದ ಹೋಂ ಗಾರ್ಡ್ ಯುವರಾಜ್ ಹಲ್ಲೆಗೊಳಗಾದವರು. ರಾತ್ರಿ ಅವರಿಬ್ಬರು ಗಸ್ತಿನಲ್ಲಿದ್ದಾಗ ಕುಂದುವಾಡ ಕೆರೆ ಬಳಿ ಮಧ್ಯ ರಾತ್ರಿ 2 ಗಂಟೆ ವೇಳೆ ಬೈಕ್ ನಲ್ಲಿ ಬಂದ ಯುವಕರನ್ನು ತಡೆದು ವಿಚಾರಿಸಿದಾಗ ಅವರು ಏಕಾಏಕಿ ದಾಳಿ ಮಾಡಿದರು. ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಎಎಸ್ಐ ಎಂ. ವಿಜಯ್ ಜತೆಗೂ ಆ ಯುವಕರು ಅದೇ ಧಾಟಿಯಲ್ಲಿ ಮಾತನಾಡಿದ್ದಾರೆ. ಯವಕರಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ
ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ
Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ
Davanagere; ಪೇಟಿಎಂ ಮೂಲಕ 2000 ರೂ ಲಂಚ ಪಡೆದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ
LIC ಹೌಸಿಂಗ್ ಫೈನಾನ್ಸ್ ವ್ಯವಸ್ಥಾಪಕರ ಕೊಲೆ ಯತ್ನ:ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗ: ಬೊಮ್ಮಾಯಿ ಭವಿಷ್ಯ
AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ
Delhi; ಹೊತ್ತಿ ಉರಿದ ತಾಜ್ ಎಕ್ಸ್ಪ್ರೆಸ್ ರೈಲಿನ ಮೂರು ಬೋಗಿಗಳು
Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ
KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.