ಚಿತ್ರಕಲೆ: ಕರಾವಳಿ ಸಂಸ್ಕೃತಿಯ ಅನಾವರಣ


Team Udayavani, Mar 30, 2018, 10:19 AM IST

30-March-3.jpg

ಮಹಾನಗರ: ಅಲ್ಲಿ ಕಲಾ ಪ್ರಪಂಚವೇ ತೆರೆದಿತ್ತು. ಒಂದೆಡೆ ಕರಾವಳಿ ಸಂಸ್ಕೃತಿಯ ನಾಗಾರಾಧನೆ, ಯಕ್ಷಗಾನ, ಬಾಹುಬಲಿ, ಭೂತಾರಾಧನೆ, ಕೋಳಿ ಅಂಕ, ಶ್ರೀಕೃಷ್ಣನ ಚಿತ್ರಕಲೆ ಮೂಡಿಬಂದರೆ ಮತ್ತೂಂದೆಡೆ, ನಮ್ಮ ಸುತ್ತಮುತ್ತಲಿನ ಪ್ರಕೃತಿಯ ಚಿತ್ತಾರ ಚಿತ್ರಕಲೆಯ ಮೂಲಕ ಮೂಡಿಬಂದಿತ್ತು. ಇಂತಹದ್ದೊಂದು ವಿಶಿಷ್ಟ ಕಾರ್ಯಕ್ರಮಕ್ಕೆ ಸಾಕ್ಷಿಯಾದದ್ದು ನಗರದ ಪ್ರಸಾದ್‌ ಆರ್ಟ್‌ ಗ್ಯಾಲರಿಯಲ್ಲಿ ಆಯೋಜಿಸಿದ ಹೊಂಬೆಳಕು ಚಿತ್ರಕಲಾ ಪ್ರದರ್ಶನ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರಾವಳಿ ಚಿತ್ರಕಲಾ ಚಾವಡಿಯು ಜಂಟಿಯಾಗಿ ಗುರುವಾರದಿಂದ ನಾಲ್ಕು ದಿನಗಳ ಕಾಲ ಚಿತ್ರಕಲಾ ಪ್ರದರ್ಶನ ಏರ್ಪಡಿಸಿತ್ತು. ಕಾರ್ಯಕ್ರಮಕ್ಕೆ ಮಂಗಳೂರಿನ ಶ್ರೀ ರಾಮಕೃಷ್ಣ ಮಠದ ಏಕಗಮ್ಯಾನಂದ ಮಹಾರಾಜ್‌ ಅವರು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ಮಾತಿನ ಮೂಲಕ ಹೇಳಲಾಗದ ವಿಷಯವನ್ನು ಕೂಡ ಕಲಾವಿದ ತನ್ನ ಚಿತ್ರದ ಮೂಲಕ ತಿಳಿಯಪಡಿಸುತ್ತಾನೆ. ಕಲಾವಿದನು ಯಾವ ತಪಸ್ವಿಗೂ ಕಡಿಮೆ ಇಲ್ಲ. ರವಿ ಕಾಣದ್ದನ್ನು ಕವಿ ಕಾಣುತ್ತಾನೆ. ಕವಿ ಕಾಣದ್ದನ್ನು ಕಲಾವಿದ ಕಾಣುತ್ತಾನೆ ಎಂದು ವಿವರಿಸಿದರು.

ಕಲೆ ಪ್ರಕೃತಿಗೆ ಹತ್ತಿರ
ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯ ರಾಜೇಂದ್ರ ಕೇದಿಗೆ ಮಾತನಾಡಿ, ಕಲೆ, ಸಂಗೀತ, ಸಾಹಿತ್ಯ ಪ್ರಕೃತಿಗೆ ಹತ್ತಿರವಾದುದು ಎಂದು ಹೇಳಿದರು. ಚಿತ್ರ ಕಲಾವಿದ ದಿನೇಶ್‌ ಹೊಳ್ಳ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಪ್ರಕೃತಿ, ಇಲ್ಲಿನ ಸಂಸ್ಕೃತಿಗೆ ಹೊಡೆತ ಬೀಳುತ್ತಿದೆ. ಪ್ರಕೃತಿ ನಾಶವಾಗುತ್ತಿರುವ ಈ ಸಮಯದಲ್ಲಿ ನಾವೆಲ್ಲಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತೋರಿಸುವ ಅಗತ್ಯವಿದೆ ಎಂದರು.

ಬಿ. ಗಣೇಶ ಸೋಮಯಾಜಿ, ವಿಷ್ಣು ಶೇವಗೂರು, ಪೆರ್ಮುದೆ ಮೋಹನ್‌ ಕುಮಾರ್‌, ಶರತ್‌ ಹೊಳ್ಳ, ಕಮಾಲ್‌, ಪಾಂಡುರಂಗ ರಾವ್‌, ಅನಂತ ಪದ್ಮನಾಭ ರಾವ್‌, ದಿನೇಶ್‌ ಹೊಳ್ಳ, ಸಪ್ನಾ ನೊರೊನ್ಹಾ, ನವೀನ್‌ ಚಂದ್ರ ಬಂಗೇರ, ಜಾನ್‌ ಚಂದ್ರನ್‌, ಸತೀಶ್‌ ರಾವ್‌, ಸುಧೀರ್‌ ಕುಮಾರ್‌ ಕಾವೂರು, ಪೂರ್ಣೇಶ್‌, ತಾರಾನಾಥ ಕೈರಂಗಳ, ಬಾಲಕೃಷ್ಣ ಶೆಟ್ಟಿ, ಪುನೀಕ್‌ ಶೆಟ್ಟಿ, ಜಯಶ್ರೀ ಶರ್ಮ, ರಚನಾ ಸೂರಜ್‌, ನವೀನ್‌ ಕೋಡಿಕಲ್‌, ಈರಣ್ಣ, ಎ. ಮುರಳಿ ಅವರು ಚಿತ್ರಕಲಾ ಪ್ರದರ್ಶನವಿತ್ತು. ಕರಾವಳಿ ಚಿತ್ರಕಲಾ ಚಾವಡಿ ಅಧ್ಯಕ್ಷ ಕೋಟಿ ಪ್ರಸಾದ್‌ ಆಳ್ವ, ಪ್ರೊ| ಅನಂತ ಪದ್ಮನಾಭ ರಾವ್‌, ಗಣೇಶ್‌ ಸೋಮಯಾಜಿ ಮೊದಲಾದವರು ಉಪಸ್ಥಿತರಿದ್ದರು.

ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿ
ಏಕಗಮ್ಯಾನಂದ ಮಹಾರಾಜ್‌ ಅವರು ಮಾತನಾಡಿ, ಯಾವುದೇ ಧಾರ್ಮಿಕ ಕೇಂದ್ರವು ಆಧ್ಯಾತ್ಮಿಕತೆಗೆ ಸೀಮಿತವಾಗದೆ ಕಲೆ, ಶಿಕ್ಷಣ ಸೇರಿದಂತೆ ಸಾಮಾಜಿಕ ಚಟುವಟಿಕೆ ಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ರಾಮಕೃಷ್ಣ ಪರಮಹಂಸರು ಕೂಡ ಕಲಾವಿದರಾಗಿದ್ದರುಎಂದು ಹೇಳಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.