ಶುದ್ಧ ಕುಡಿವ ನೀರಿನ ಘಟಕಕ್ಕಿಲ್ಲ ದುರಸ್ತಿ ಭಾಗ್ಯ!


Team Udayavani, Mar 30, 2018, 10:45 AM IST

bell-2.jpg

ಬಳ್ಳಾರಿ: ಕುಡಿವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ. ಶುದ್ಧ ಕುಡಿವ ನೀರಿನ ಘಟಕಗಳನ್ನು 24 ಗಂಟೆಯೊಳಗೆ ದುರಸ್ತಿಗೊಳಿಸಬೇಕು ಎಂದು ಮೇಲಧಿಕಾರಿಗಳು ಜಿಪಂ, ತಾಪಂ ಕೆಡಿಪಿ, ಸಾಮಾನ್ಯ ಸಭೆಗಳಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡುವುದೇನೋ ನಿಜ. ಆದರೆ, ತಾಲೂಕಿನ ಚರಕುಂಟೆ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಬಳಕೆಯಾಗದೆ ನನೆಗುದಿಗೆ ಬಿದ್ದಿರುವುದನ್ನು ನೋಡಿದರೆ, ಈ ಮಾತುಗಳು ಕೇವಲ ಸಭೆಗಷ್ಟೇ ಸೀಮಿತ ಎನ್ನಿಸುವುದೂ ಅಷ್ಟೇ ವಾಸ್ತವ….

ಹೌದು…! ಕಳೆದ ವಾರ ನಗರದ ಜಿಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಕುಡಿವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ. ದುರಸ್ತಿಗೆ ಬಂದಿರುವ ಶುದ್ಧ ಕುಡಿವ ನೀರಿನ ಘಟಕವನ್ನು 24 ಗಂಟೆಯೊಳಗೆ ರಿಪೇರಿ ಮಾಡಿಸಬೇಕು. ಒಂದು ಲಕ್ಷದೊಳಗಿನ ವೆಚ್ಚವನ್ನು ಮೊದಲು ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಇಲಾಖೆಯಿಂದ ಬಳಸಿ, ಜಿಲ್ಲಾ
ಪಂಚಾಯಿತಿಗೆ ಬಿಲ್‌ ಕಳುಹಿಸಬೇಕು. ಅದಕ್ಕೂ ಹೆಚ್ಚಾಗುವಂತಿದ್ದರೆ, ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ಖಾರವಾಗಿ ಹೇಳಿದ್ದರು.

ಆದರೆ, ತಾಲೂಕಿನ ಚರಕುಂಟೆ ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆಯೇ ಶುದ್ಧ ಕುಡಿವ ನೀರಿನ ಘಟಕ ನಿರ್ಮಿಸಲಾಗಿದೆ. ಇದಕ್ಕಾಗಿ ಅಂದಾಜು 8 ರಿಂದ 10 ಲಕ್ಷ ರೂ. ವೆಚ್ಚ ಮಾಡಿ ಅಗತ್ಯ ಯಂತ್ರಗಳನ್ನೂ ಖರೀದಿಸಿ ಅಳವಡಿಸಲಾಗಿದೆ. ಆರಂಭದಲ್ಲಿ ಒಂದೆರಡು ತಿಂಗಳು ಚಾಲನೆ ಪಡೆದುಕೊಂಡಿದ್ದ ಶುದ್ಧ ಕುಡಿವ ನೀರಿನ ಘಟಕ ಬಳಿಕ ಸ್ಥಗಿತಗೊಂಡಿದೆ. ಸ್ಥಗಿತಕ್ಕೆ ಸಮರ್ಪಕ  ಕಾರಣಗೊತ್ತಿಲ್ಲ ವಾದರೂ, ಗ್ರಾಮಸ್ಥರು ಹೇಳುವಂತೆ ನೀರು ಶುದ್ಧಗೊಳಿಸುವ ಯಂತ್ರದಲ್ಲಿ ಅಂದಾಜು 10 ಕೊಡ ನೀರು ಸಂಗ್ರಹವಾದರೆ ಯಂತ್ರ ಸ್ಥಗಿತವಾಗುತ್ತದೆಯಂತೆ. 

ಇದನ್ನು ರಿಪೇರಿ ಮಾಡಿಸಲಾಗದ ಸಂಬಂಧಪಟ್ಟ ಗ್ರಾಪಂ ಅಧಿಕಾರಿಗಳು, ಘಟಕಕ್ಕೆ ಬೀಗ ಜಡಿದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಭೆಯಲ್ಲಿ ಮೇಲಧಿಕಾರಿಗಳ ಮಾತುಗಳಿಗೆ ತಲೆಯಾಡಿಸುವ ಅಧಿಕಾರಿಗಳು, ಸಭೆಯ ನಂತರ ಗಾಳಿಗೆ ತೂರುತ್ತಾರೆ ಎಂಬುದಕ್ಕೆ ಚರಕುಂಟೆ ಗ್ರಾಮದ ಶುದ್ಧ ಕುಡಿವ ನೀರಿನ ಘಟಕವೇ ತಾಜಾ ಉದಾಹರಣೆಯಾಗಿದೆ.

1500ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮಕ್ಕೆ ಬೋರ್‌ವೆಲ್‌ಗ‌ಳೇ ಜಲಮೂಲಗಳು. ಈ ಮೊದಲು ಗ್ರಾಮದ ಹೊರ ವಲಯದಲ್ಲಿನ ಅಂತರ್ಜಲ ನೀರನ್ನೇ ಶುದ್ಧೀಕರಿಸಿ ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿದ್ದು, ಇದೀಗ ಬತ್ತಿದ ಹಿನ್ನೆಲೆಯಲ್ಲಿ ಅನತಿ ದೂರದಲ್ಲಿರುವ ಎಚ್‌ ಎಲ್‌ಸಿ ಕಾಲುವೆ ಬಳಿ ಬೋರ್‌ವೆಲ್‌ ಕೊರೆಸಿ, ಅಲ್ಲಿಂದ ಕುಡಿಯಲು ಸರಬರಾಜು ಮಾಡಲಾಗುತ್ತಿದೆ. ಈ ಪೈಪ್‌ ಲೈನ್‌ಗೂ ಗ್ರಾಮದ ಅಲ್ಲಲ್ಲಿ ರಂದ್ರಗಳು ಬಿದ್ದಿರುವುದರಿಂದ ಚರಂಡಿ ನೀರು ಸೇರಿ ಕುಡಿವ ನೀರು ಕಲುಷಿತವಾಗುತ್ತಿದ್ದು, ಈ ನೀರನ್ನೇ ಸೇವಿಸುತ್ತಿರುವ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ.

ಗ್ರಾಮದಲ್ಲಿನ ಕುಡಿವ ನೀರಿನ ಸಮಸ್ಯೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಶುದ್ಧ ಕುಡಿವ ನೀರಿನ ಘಟಕವನ್ನು ದುರಸ್ತಿಗೊಳಿಸುವಂತೆಯೂ ಕೋರಿದ್ದರೂ, ಎಚ್ಚೆತ್ತುಕೊಳ್ಳುತ್ತಿಲ್ಲ. ಘಟಕ ಚಾಲನೆಯಲ್ಲಿದಿದ್ದರೆ, ಗ್ರಾಮಸ್ಥರು ಇಂದು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರಲಿಲ್ಲ ಎಂಬುದು ಗ್ರಾಮಸ್ಥರ ಅಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ
ಎಚ್ಚೆತ್ತುಕೊಳ್ಳಬೇಕಾಗಿದೆ.

ತಾಲೂಕಿನ ಚರಕುಂಟೆ ಗ್ರಾಮದಲ್ಲಿ ಶುದ್ಧ ಕುಡಿವ ನೀರಿನ ಘಟಕದಲ್ಲಿ ಸಣ್ಣ ರಿಪೇರಿ ಇದ್ದು, ಇದೀಗ ಸರಿಪಡಿಸಲಾಗಿದೆ. ಇಂದು ಸಹ ಇಂಜಿನೀಯರ್‌ರನ್ನು ಗ್ರಾಮಕ್ಕೆ ಕಳುಹಿಸಿಕೊಟ್ಟಿದ್ದು, ಪರಿಶೀಲಿಸಿದ್ದಾರೆ. ಶೀಘ್ರದಲ್ಲೇ ಗ್ರಾಮಸ್ಥರಿಗೆ ಘಟಕದಿಂದ ಶುದ್ಧ ಕುಡಿವ ನೀರನ್ನು
ಒದಗಿಸಲಾಗುತ್ತದೆ. 
 ಜಾನಕಿರಾಮ್‌, ಇಒ, ತಾಪಂ, ಬಳ್ಳಾರಿ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.