19 ಸ್ಥಾನಗಳಲ್ಲಿ ಸ್ಪರ್ಧೆಗೆ ಸಿಪಿಎಂ ನಿರ್ಧಾರ: ಯೆಚೂರಿ
Team Udayavani, Mar 31, 2018, 7:00 AM IST
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಪ್ರಬಲ ಅಭ್ಯರ್ಥಿಗೆ ಬೆಂಬಲ
ನೀಡಲು ಸಿಪಿಎಂ ನಿರ್ಧರಿಸಿದೆ. ಜತೆಗೆ ಮೇ 12ರಂದು ನಡೆಯುವ ಚುನಾವಣೆಯಲ್ಲಿ 18-19 ಸ್ಥಾನಗಳಿಗೆ ಸ್ಪರ್ಧಿಸಲು
ನಿರ್ಧರಿಸಿರುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.
ನವದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಕೇಂದ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತು ಇತರ ಕೋಮುಶಕ್ತಿಗಳನ್ನು ಚುನಾವಣೆಯಲ್ಲಿ ಸೋಲಿಸಲು ಮುಕ್ತ ಕರೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಎಡರಂಗವಾಗಿಯೇ ಕರ್ನಾಟಕದಲ್ಲಿ ಸ್ಪರ್ಧೆಗೆ ಇಳಿಯಲಿದೆ ಎಂದು ಯೆಚೂರಿ ಹೇಳಿದ್ದಾರೆ.