ಕಾಂಗ್ರೆಸ್‌ ಕಿತ್ತೂಗೆಯಲು ಬಿಜೆಪಿಗೆ ಮಾತ್ರ ಸಾಮರ್ಥ್ಯ


Team Udayavani, Mar 31, 2018, 6:00 AM IST

IMG-20180330-WA0100.jpg

ಮೈಸೂರು: ಭ್ರಷ್ಟಾಚಾರ ಮತ್ತು ಹಿಂಸಾಚಾರದ ಪ್ರತಿರೂಪವಾದ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆಯಲು ಜೆಡಿಎಸ್‌ಗೆ ಸಾಮರ್ಥ್ಯವಿಲ್ಲ. ಹೀಗಾಗಿ ಬಿಜೆಪಿ ಗೆಲ್ಲಿಸಿ, ಕರ್ನಾಟಕದ ವಿಕಾಸಕ್ಕೆ ಸಹಕರಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮನವಿ ಮಾಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ  ನಗರದ ಮೂರು ವಿಧಾನಸಭಾ ಕ್ಷೇತ್ರಗಳ ಬೂತ್‌ ಪ್ರಮುಖರ ನವಶಕ್ತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ದ ಬಗ್ಗೆ ಬರೆಯುವುದಾದರೆ ಕರ್ನಾಟಕದಲ್ಲಷ್ಟೇ ಅಲ್ಲ, ಕೇರಳದ ಗಡಿವರೆಗೂ ಬರೆಯಬಹುದು ಎಂದು ದೂರಿದ ಅವರು, ಕರ್ನಾಟಕದ ವಿಕಾಸಕ್ಕೆ ಕೆಲಸ ಮಾಡುವ ಬಿಜೆಪಿ ಸರ್ಕಾರ ಬೇಕಾ? ಕಾಂಗ್ರೆಸ್‌ ನೇತೃತ್ವದ ಕಮೀಷನ್‌ ಸರ್ಕಾರ ಬೇಕಾ ನೀವೇ ತೀರ್ಮಾನಿಸಿ ಎಂದರು.

ಜೆಡಿಎಸ್‌ಗೆ ಬೆರಳೆಣಿಕೆ ಶಾಸಕರನ್ನು ಗೆಲ್ಲಿಸಿಕೊಳ್ಳಬಹುದು. ಇಲ್ಲಾ ಒಂದೆರಡು ಕಾಂಗ್ರೆಸ್‌ ಶಾಸಕರನ್ನು ಸೋಲಿಸಬಹುದು. ಆದರೆ, ಅವರಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಸೋಲಿಸಲು ಆಗಲ್ಲ ಎಂದು ಹೇಳಿದರು.

ಚಿತ್ರದುರ್ಗದಲ್ಲಿ ಬಾಯ್ತಪ್ಪಿನಿಂದ ಆಡಿದ ಮಾತಿಗೆ ಸಿದ್ದರಾಮಯ್ಯ ಅವರಿಂದ ರಾಹುಲ್‌ ಗಾಂಧಿವರೆಗೆ ಸಾಮಾಜಿಕ ಜಾಲತಾಣದಲ್ಲಿ ಜಾಡಿಸಿದರು. ಆದರೆ, ನಾನು ಬಾಯ್ತಪ್ಪಿ ಮಾತನಾಡಬಹುದು. ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್‌ ಗೆಲ್ಲಿಸುವ ತಪ್ಪು ನಿರ್ಣಯ ಮಾಡಲಾರರು ಎಂಬ ವಿಶ್ವಾಸವಿದೆ ಎಂದರು.

ಸಿದ್ದರಾಮಯ್ಯ ರಾಜ್ಯದ ಅಸ್ಮಿತೆಯನ್ನೇ ಬದಲಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಮುನ್ನುಡಿ ಬರೆದ ಸರ್‌ ಎಂ.ವಿಶ್ವೇಶ್ವರಯ್ಯ, ನಾಡಗೀತೆ ರಚಿಸಿದ ಮಹಾ ಕವಿ ಕುವೆಂಪು ಅವರ ಜಯಂತಿ ಆಚರಿಸುವುದು ಬೇಕಿಲ್ಲ. ಟಿಪ್ಪು ಜಯಂತಿ ಮಾಡುತ್ತಾರೆ ಎಂದು ಟೀಕಿಸಿದರು.

ರಾಜ್ಯಸಭೆಗೆ ಪ್ರಮೋದಾದೇವಿ?
ಈ ಮಧ್ಯೆ, ರಾಜವಂಶಸ್ಥರನ್ನು ಭೇಟಿ ಮಾಡಿದ ಅಮಿತ್‌ ಶಾ ಅವರು, ಈ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ರಾಜವಂಶಸ್ಥರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಮುಂದೆ ಕರ್ನಾಟಕದಿಂದಲೇ ರಾಜವಂಶ ಸ್ಥರನ್ನು ರಾಜ್ಯ ಸಭೆಗೆ ಕಳುಹಿಸುವ ಬಗ್ಗೆಯೂ ಪ್ರಸ್ತಾಪ ಮಾಡಿ ದ್ದಾರೆ ಎನ್ನಲಾಗಿದೆ. ಮೈಸೂರು ಭಾಗದಲ್ಲಿ ರಾಜವಂಶಸ್ಥರ ಮೇಲೆ ಜನ ಇರಿಸಿರುವ ಪೂಜ್ಯ ಭಾವನೆಯನ್ನು ಮತವಾಗಿ ಪರಿ ವರ್ತಿಸಿಕೊಳ್ಳಲು ಬಿಜೆಪಿ, ಯದುವೀರ್‌ ಅವರನ್ನೇ ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದೆ.
ಆದರೆ,ಅವರು ನಿರಾಸಕ್ತಿ ತೋರುತ್ತಿ ರುವುದರಿಂದ ಪ್ರಮೋದಾದೇವಿ ಒಡೆಯರ್‌ ಅವರನ್ನೇ ಪಕ್ಷಕ್ಕೆ ಸೆಳೆಯುವ ಪ್ರಯತ್ನ ನಡೆದಿವೆ ಎನ್ನಲಾಗಿದೆ.

ಪಾತಾಳದಲ್ಲಿದ್ದರೂ ಹಂತಕರ ಬಿಡೆವು
ರಾಜ್ಯದಲ್ಲಿನ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆಗೆ ಕಾರಣವಾಗಿರುವ ಹಂತಕರು ಪಾತಾಳದಲ್ಲಿ ಅಡಗಿ ದ್ದರೂ ಅವರನ್ನು ಬಿಡೆವು ಎಂದು ಅಮಿತ್‌ ಶಾ ಎಚ್ಚರಿಕೆ ನೀಡಿ ದ್ದಾರೆ. ಕ್ಯಾತಮಾರನಹಳ್ಳಿ ರಾಜು ಕುಟುಂಬದವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 24 ಮಂದಿ ಹತ್ಯೆಯಾಗಿದ್ದು, ಮುಂದೆ ಬಿಜೆಪಿ ಅಧಿಕಾರಕ್ಕೆ ಬಂದರೆ ಹಂತಕರನ್ನು ಜೈಲಿಗೆ ತಳ್ಳಿ ಶಿಕ್ಷೆ ಕೊಡಿಸಲಾಗುವುದು ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.