ಮೊಬೈಲ್‌ ಹಾವಳಿಯಿಂದ ದಾರಿ ತಪ್ಪುತ್ತಿದೆ ಜನತೆ


Team Udayavani, Mar 31, 2018, 11:51 AM IST

gul-2.jpg

ಚಿತ್ತಾಪುರ: ಮನುಷ್ಯನಾದವನಿಗೆ ಆಸೆಗಳು ಇರುವುದು ಸಹಜ. ಆದರೆ ಅತಿ ಆಸೆ ಇರುವುದು ದುರಂತ. ವೈಜ್ಞಾನಿಕ ಜಗತ್ತಿನಲ್ಲಿ ಪ್ರತಿಯೊಬ್ಬರು ಮೊಬೈಲ್‌ಗೆ ಮಾರು ಹೋಗಿ ಹಳ್ಳಿ ಆಟಗಳಾದ ಕುಂಟೆ ಬಿಲ್ಲೆ, ಚಿಣ್ಣಿ ದಾಂಡು, ಕಬ್ಬಡ್ಡಿ ಅಂತಹ ಅನೇಕ ಆಟಗಳನ್ನು ಬಿಟ್ಟು ಮೊಬೈಲ್‌ನಲ್ಲಿರುವ ಆಟಗಳನ್ನು ಆಡಿ ದಾರಿ ತಪ್ಪುತ್ತಿದ್ದಾರೆ ಎಂದು ನಾಲವಾರದ ಕೋರಿ ಸಿದ್ಧೇಶ್ವರ ಸಂಸ್ಥಾನ ಮಠದ ಶ್ರೀ ಸಿದ್ಧ ತೋಟೇಂದ್ರ ಶಿವಾಚಾರ್ಯರು ಕಳವಳ ವ್ಯಕ್ತಪಡಿಸಿದರು. 

ತಾಲೂಕಿನ ಅಳ್ಳೋಳ್ಳಿ ಗ್ರಾಮದಲ್ಲಿ ಸಾವಿರ ದೇವರ ಮಠದ ಸಂಗಮನಾಥ ದೇವರ ನೇತೃತ್ವದಲ್ಲಿ ನಡೆದ ದ್ವಿತೀಯ ಜಾತ್ರಾ ಮಹೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಕೆಲವರು ಮೊಬೈಲ್‌ಗಳಿಗೆ ಮಾರು ಹೋಗಿ ಜೀವನದಲ್ಲಿ ಮಾನಸಿಕ ನೆಮ್ಮದಿ, ಶಾಂತಿ ಕಳೆದುಕೊಂಡು ಏಕಾಂಗಿಯಾಗಿ ಅಲೆದಾಡುತ್ತಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಸಮಾಜದಲ್ಲಿ ಮಠಗಳಿಂದ ಅನ್ನ, ಅರಿವು, ದಾಸೋಹ ದೊರೆಯುತ್ತಿದೆ. ಮಠ ಮಂದಿರಗಳಿಂದ ಶಾಂತಿ, ನೆಮ್ಮದಿ ಸಿಗುತ್ತದೆ. ಧಾರ್ಮಿಕ, ಆಧ್ಯಾತ್ಮಿಕ ಜೀವನ ಪದ್ಧತಿ ರೂಡಿಸಿಕೊಳ್ಳಬೇಕು. ಜಾತ್ರೆ ಉತ್ಸವಗಳಿಂದ ಜನರಲ್ಲಿ ಜೀವನ ಸ್ಫೂರ್ತಿ ವೃದ್ಧಿಯಾಗುತ್ತದೆ ಎಂದರು. ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಮಾತನಾಡಿ, ಸ್ವಾಮೀಜಿಗಳಿಗೆ ಆಸೆ ಇರಬಾರದು. ಉತ್ತಮ ಮೌಲ್ಯವುಳ್ಳ ಆದರ್ಶ ಇರಬೇಕು. ಕೇವಲ ಮಾತನಾಡುವುದೇ ಸಾಧನೆಯಾಗದೇ ಸಾಧನೆ ಮಾಡಿ ಅದರ ಬಗ್ಗೆ ಮಾತನಾಡಬೇಕು ಎಂದು ಹೇಳಿದರು.

ಮಾಜಿ ಶಾಸಕಿ ಅರುಣಾ ಪಾಟೀಲ, ಪಾಳಾದ ಗುರುಮೂರ್ತಿ ಮಾತನಾಡಿದರು. ಸಾವಿರ ದೇವರ ಮಠದ ಸಂಗಮನಾಥ
ದೇವರು ನೇತೃತ್ವ ವಹಿಸಿದ್ದರು.  ಆನಂದ ಗುರೂಜಿ ಉಪಸ್ಥಿತಿಯಲ್ಲಿ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ದಿಗ್ಗಾಂವ ಕಂಚಗಾರ ಹಳ್ಳದ ಪೀಠಾಧಿ ಪತಿ ಮಲ್ಲಯ್ಯ ಮುತ್ಯಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ, ಜಿಪಂ ಸದಸ್ಯ ಶಿವರುದ್ರ ಭೀಣಿ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಚಂದ್ರಶೇಖರ ಆವಂಟಿ, ಶಾಂತಣ್ಣ ಚಾಳಿಕಾರ, ಶಿವಶರಣಪ್ಪ ಹೂಗಾರ, ಸಂಗಣ್ಣಗೌಡ ಪಾಟೀಲ, ರವಿ ಪಡ್ಲ, ಅಕ್ಕಮಹಾದೇವಿ, ಗೀರೀಶ ಭಜಂತ್ರಿ, ವೆಂಕಟೇಶ
ಕುಲಕರ್ಣಿ, ಭೀಮಶಾ ಜೀರೊಳ್ಳಿ, ಬಸವರಾಜ ಪಂಚಾಳ, ಸಾಬಣ್ಣ ಸೋಮನ್‌ ಇದ್ದರು. 

ರಥೋತ್ಸವ ಸಂಭ್ರಮ: ಸಾವಿರ ದೇವರ ಮಠದ ಸಂಗಮನಾಥ ದೇವರ ನೇತೃತ್ವದಲ್ಲಿ ದ್ವಿತೀಯ ವರ್ಷದ ರಥೋತ್ಸವ ಸಂಭ್ರಮದಿಂದ ಜರುಗಿತು. ಅಳ್ಳೋಳ್ಳಿ, ದಂಡಗುಂಡ, ಸಂಕನೂರ, ಸಾತನೂರ, ಹೊಸ್ಸುರ್‌, ಭಂಕಲಗಾ, ಅಲ್ಲೂರ್‌, ಭೀಮನಳ್ಳಿ ಹಾಗೂ ಸುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.