ಕುಡಿಯುವ ನೀರಿಗಾಗಿ ರಸ್ತೆ ತಡೆ -ಪ್ರತಿಭಟನೆ
Team Udayavani, Mar 31, 2018, 12:00 PM IST
ಕಲಬುರಗಿ: ಕಳೆದ ಒಂದು ವಾರದಿಂದ ಕುಡಿಯುವ ನೀರು ಸರಬರಾಜಾಗಿಲ್ಲ ಎಂದು ಶುಕ್ರವಾರ ಸೇಡಂ ರಸ್ತೆಯ ಎಂ.ಆರ್.ಮೆಡಿಕಲ್ ಕಾಲೇಜಿನ ಎದುರು ವಾರ್ಡ್ ಸಂಖ್ಯೆ 45ರ ನಿವಾಸಿಗಳು ಮಾಜಿ ಮೇಯರ್ ಚಂದ್ರಿಕಾ ಪರಮೇಶ್ವರ ನೇತೃತ್ವದಲ್ಲಿ ರಸ್ತೆ ತಡೆ, ಪ್ರತಿಭಟನೆ ನಡೆಸಿದರು.
ಖಾಲಿ ಕೊಡಗಳೊಂದಿಗೆ ಬಡಾವಣೆಯ ಮಹಿಳೆಯರು, ಮಕ್ಕಳು ಸೇರಿ ರಸ್ತೆ ತಡೆ ನಡೆಸಿ, ಬೇಸಿಗೆಯಲ್ಲಿ ಸಮರ್ಪಕವಾಗಿ ನೀರು ಪೂರೈಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಜಲಮಂಡಳಿಗೆ ಹಿಡಿ ಶಾಪ ಹಾಕಿದರು.
ಪ್ರತಿಭಟನೆಯಲ್ಲಿ ವಿಜಯಲಕ್ಮೀ, ರಾಘವೇಂದ್ರ, ಮಲ್ಲಿಕಾರ್ಜುನ ವಠಾರ ಹಾಗೂ ಇತರರು ಭಾಗವಹಿಸಿದ್ದರು. ಕುಡಿಯುವ ನೀರಿಗಾಗಿ ರಸ್ತೆ ತಡೆ ನಡೆಸಿದ್ದರಿಂದಾಗಿ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು, ಸಾರ್ವಜನಿಕರು ಕೆಲ ಕಾಲ ಪರದಾಡಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ
Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್!: 7 ಮಂದಿ ಸೆರೆ