ಕಾವೇರಿ ನದಿ ನೀರಿನ ಹಂಚಿಕೆ ವಿಚಾರ ಸದ್ಯಕ್ಕೆ ಇತ್ಯರ್ಥವಿಲ್ಲ?


Team Udayavani, Apr 1, 2018, 12:54 PM IST

kaveri-nadi.jpg

ನವದೆಹಲಿ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಜಾಣನಡೆ ಅನುಸರಿಸಿರುವ ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್‌ನಲ್ಲಿ ಮತ್ತೆ “ಸ್ಕೀಮ್‌’  ವಿಚಾರವನ್ನೇ ಪ್ರಸ್ತಾಪಿಸಿ, ಮೂರು ತಿಂಗಳ ಕಾಲಾವಕಾಶ ಕೇಳಿದೆ. ಒಂದು ವೇಳೆ ಸುಪ್ರೀಂ ಕೋರ್ಟ್‌ ಈ ಅರ್ಜಿಗೆ ಮಾನ್ಯ ಮಾಡಿದರೆ, ಮಳೆಗಾಲದ ಆರಂಭದ ವರೆಗೂ ಕಾವೇರಿ ಹಂಚಿಕೆ ವಿವಾದ ತಲೆದೋರದು. 

ಇದಕ್ಕೆ ಪ್ರತಿಯಾಗಿ ತಮಿಳುನಾಡು ಸರ್ಕಾರ, ಕೇಂದ್ರ ಸರ್ಕಾರದ  ವಿರುದ್ಧವೇ ನ್ಯಾಯಾಂಗ ನಿಂದನೆ ಅರ್ಜಿಸಲ್ಲಿಸಿದೆ. ಸ್ಕೀಮ್‌ ಬಗ್ಗೆ ಸ್ಪಷ್ಟನೆ ಕೊಡು ವಂತೆ ಶನಿವಾರವೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸೋಮವಾರ ಮುಖ್ಯ ನ್ಯಾ. ದೀಪಕ್‌ ಮಿಶ್ರಾ ಅವರ ಪೀಠದ ಮುಂದೆಯೇ ವಿಚಾರಣೆಗೆ ಬರುವ ಸಾಧ್ಯತೆ ಇದೆ. ತೀರ್ಪಿನಲ್ಲಿ ಸ್ಕೀಮ್‌ ರೂಪಿಸುವಂತೆ ನೀಡಿದ ಆರು ವಾರಗಳ ಗಡುವು ಗುರುವಾರಕ್ಕೆ ಮುಕ್ತಾಯವಾ ಗಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಈ ಅರ್ಜಿ ಸಲ್ಲಿಸಿದೆ. 

ಕೇಂದ್ರ ಸರ್ಕಾರ ಕೇಳಿರುವ ಸ್ಪಷ್ಟನೆಯೇನು?: ತಮಿಳು  ನಾಡು ಹಾಗೂ ಕರ್ನಾಟಕ ರಾಜ್ಯಗಳು ಸುಪ್ರೀಂಕೋರ್ಟ್‌ ತೀರ್ಪನ್ನು ವಿಭಿನ್ನವಾಗಿ ವ್ಯಾಖ್ಯಾನ  ಮಾಡುತ್ತಿದ್ದು, ತದ್ವಿರುದ್ಧ ನಿಲುವು ತಳೆದಿವೆ. ರಾಜ್ಯಗಳಿಗೆ ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಆದೇಶವನ್ನು ಪಾಲಿಸುವುದನ್ನು ಮೇಲ್ವಿ  ಚಾರಣೆ  ನಡೆಸಲು ಸ್ಕೀಮ್‌ ರಚಿಸುವಂತೆ ಸುಪ್ರೀಂಕೋರ್ಟ್‌ ಸೂಚಿಸಿದ್ದು,

ಈ ಹಿಂದೆ ಕಾವೇರಿ ಜಲ ವಿವಾದ ನ್ಯಾಯಮಂಡಳಿ ಪ್ರಸ್ತಾಪಿಸಿದ್ದಂಥ ಕಾವೇರಿ ನಿರ್ವಹಣೆ ಮಂಡಳಿಯನ್ನು ರಚಿಸು ವಂತೆ ತಮಿಳುನಾಡು ಆಗ್ರಹಿಸುತ್ತಿದೆ. ಆದರೆ ಕರ್ನಾಟಕ ಸರ್ಕಾರವು ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸಿದ್ದು,  ಸುಪ್ರೀಂಕೋರ್ಟ್‌ ಕೇವಲ ಸ್ಕೀಮ್‌ ಎಂಬುದಾಗಿ ತೀರ್ಪಿನಲ್ಲಿ ಉಲ್ಲೇಖೀಸಿದೆ ಎಂದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ನಡೆಸಿದ ಸಭೆಯಲ್ಲಿ ರಾಜ್ಯಗಳು ಈ ಬಗ್ಗೆ  ಒಮ್ಮತಕ್ಕೆ ಬಂದಿಲ್ಲ.

ಹೀಗಾಗಿ, ನ್ಯಾಯಮಂಡಳಿ ಈ ಹಿಂದೆ ಸೂಚಿಸಿದ್ದ ಮಂಡಳಿಗಿಂತ ವಿಭಿನ್ನವಾದ ಸ್ಕೀಮ್‌ ಅನ್ನು ನಾವು ರಚಿಸಬಹುದೇ ಎಂದು  ಸುಪ್ರೀಂ ಕೋರ್ಟನ್ನು ಕೇಂದ್ರ ಸರ್ಕಾರ ಪ್ರಶ್ನಿಸಿದೆ. ಒಂದು ವೇಳೆ ಸುಪ್ರೀಂಕೋರ್ಟ್‌ ಉಲ್ಲೇಖೀಸಿದ ಸ್ಕೀಮ್‌ ಕೂಡ ಮಂಡಳಿಯೇ ಆಗಿದ್ದರೆ, ಇನ್ನಷ್ಟು  ಸ್ಪಷ್ಟನೆ ನೀಡುವಂತೆ ಕೋರಿದೆ. ಮಂಡಳಿಯು ಆಡಳಿತಾತ್ಮಕ ಮತ್ತು ತಾಂತ್ರಿಕ ಮಂಡಳಿಯಾಗಿರಬಹುದೇ?

ಯಾಕೆಂದರೆ ಈ ಹಿಂದೆ ನ್ಯಾಯಮಂಡಳಿ  ಸೂಚಿಸಿದ್ದು ಕೇವಲ ತಾಂತ್ರಿಕ ಮಂಡಳಿ ಯಾಗಿತ್ತು. ನ್ಯಾಯಮಂಡಳಿಯ ಪ್ರಕಾರ ಮುಖ್ಯ ಇಂಜಿನಿಯರುಗಳು ಮತ್ತು ಇತರ ತಾಂತ್ರಿಕ ಪರಿಣಿತರು ಮಾತ್ರ ಮಂಡಳಿಯ ಸದಸ್ಯರಾಗಿರುತ್ತಿದ್ದರು. ಅಲ್ಲದೆ ಕೇವಲ ನೀರು ನಿರ್ವಹಣೆಯ ಮೇಲ್ವಿಚಾರಣೆ ಮತ್ತು ನೀರು ಹಂಚಿಕೆ ವಿಧಾನವನ್ನು ಉಭಯ ರಾಜ್ಯಗಳು ಅನುಸರಿಸುತ್ತಿವೆಯೇ ಎಂಬುದನ್ನು ನೋಡುವ ಬದಲಿಗೆ ಇತರ ಕಾರ್ಯ ನಿರ್ವಹಣೆಗಳನ್ನೂ ಮಂಡಳಿಗೆ ನಿಯೋಜಿಸಬಹುದೇ ಎಂದೂ ಕೇಂದ್ರ ಸರ್ಕಾರ ಪ್ರಶ್ನಿಸಿದೆ. 

ಚುನಾವಣೆ ಪ್ರಸ್ತಾಪ: ಹೆಚ್ಚುವರಿ ಸಮಯ ಕೋರಿರುವುದು ಹಾಗೂ ವಿಳಂಬಕ್ಕೆ ಸಮರ್ಥನೆ ಕೊಟ್ಟಿರುವ ಕೇಂದ್ರ ಸರ್ಕಾರ, ಚುನಾವಣಾ ಆಯೋಗವು  ಈಗಾಗಲೇ ಕರ್ನಾಟಕದಲ್ಲಿ ಚುನಾವಣೆ ಘೋಷಣೆ ಮಾಡಲಾಗಿದ್ದು, ಕಾವೇರಿ ನ್ಯಾಯಮಂಡಳಿ ರಚಿಸುವುದರಿಂದ ಗಂಭೀರ ಕಾನೂನು ಸುವ್ಯವಸ್ಥೆ ಸಮಸ್ಯೆ  ಉಂಟಾಗುವ ಸಾಧ್ಯತೆಯಿದೆಎಂದಿದೆ. ಚುನಾವಣೆಯ ಮಧ್ಯೆಮಂಡಳಿ ರಚಿಸಿದರೆ ಜನಾಕ್ರೋಶಕ್ಕೆ ಕಾರಣವಾಗಬಹುದು ಎಂದಿದೆ.  

ನ್ಯಾಯಾಂಗ ನಿಂದನೆ ಅರ್ಜಿ: ನಿಗದಿತ ಅವಧಿಯಲ್ಲಿ ಕೇಂದ್ರ ಸರ್ಕಾರ ಕಾವೇರಿ ಜಲ ನಿರ್ವಹಣೆ ಮಂಡಳಿ ರಚಿಸಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಶನಿವಾರ ಸುಪ್ರೀಂಗೆ  ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕೇಂದ್ರ  ಸರ್ಕಾರ ಮಂಡಳಿ ರಚಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. 3 ವಾರಗಳ ನಂತರ ಕೇವಲ ಒಂದು ಸಭೆ ಕರೆಯಲಾಗಿತ್ತು.

ಆ ಸಭೆಯ ನಂತರ ಯಾವುದೇ ಪ್ರಗತಿ ಕಂಡುಬಂದಿಲ್ಲ. ಸುಪ್ರೀಂಕೋರ್ಟ್‌ ತೀರ್ಪಿಗೆ ಬದ್ಧವಾಗ ದಿರುವುದು ಮೇಲ್ನೋಟಕ್ಕೇ  ಕಾಣಿಸುತ್ತಿದೆ. ಹೀಗಾಗಿ ತಕ್ಷಣವೇ ಕಾವೇರಿ ಜಲ ನಿರ್ವಹಣೆ ಮಂಡಳಿ ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದೆ.

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.