ಕರಾವಳಿಯಲ್ಲಿ ಈಸ್ಟರ್ ಆಚರಣೆ
Team Udayavani, Apr 2, 2018, 7:59 AM IST
ಮಂಗಳೂರು/ಉಡುಪಿ: ಕ್ರೈಸ್ತರು ಎ. 1ರಂದು ಯೇಸು ಕ್ರಿಸ್ತರ ಪುನರುತ್ಥಾನದ ಹಬ್ಬ ಈಸ್ಟರನ್ನು ಚರ್ಚ್ಗಳಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಿದರು. ಚರ್ಚ್ಗಳಲ್ಲಿ ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಈಸ್ಟರ್ ಹಬ್ಬದ ಬಲಿಪೂಜೆಗಳು ನಡೆದವು. ಮಂಗಳೂರಿನ ಬಿಷಪ್ ರೈ| ರೆ| ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ ಅವರು ರೊಜಾರಿಯೋ ಕೆಥೆಡ್ರಲ್ನಲ್ಲಿ ಶನಿವಾರ ರಾತ್ರಿ ಹಬ್ಬದ ಬಲಿ ಪೂಜೆಯ ನೇತೃತ್ವ ವಹಿಸಿದ್ದರು.
ಆಯಾ ಚರ್ಚ್ಗಳಲ್ಲಿ ಸ್ಥಳೀಯ ಧರ್ಮ ಗುರುಗಳ ಮುಖಂಡತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಹೊಸ ಅಗ್ನಿಯ ಆಶೀರ್ವಚನದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹೊಸ ಅಗ್ನಿಯಿಂದ ಈಸ್ಟರ್ ಮೋಂಬತ್ತಿಯನ್ನು ಧರ್ಮಾಧ್ಯಕ್ಷರು/ ಗುರುಗಳು ಬೆಳಗಿಸಿದ ಬಳಿಕ ಭಾಗವಹಿಸಿದ್ದ ಸಮಸ್ತ ಕ್ರೈಸ್ತರು ಆ ಅಗ್ನಿಯ ಮೂಲಕ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆ ಸಲ್ಲಿಸಿದರು. ಬೈಬಲಿನ ಹಳೆಯ ಮತ್ತು ಹೊಸ ಒಡಂ ಬಡಿಕೆಯ ಆಯ್ದ ಭಾಗಗಳ ವಾಚನದ ಬಳಿಕ ಬಿಷಪರು/ ಧರ್ಮ ಗುರುಗಳು ಪ್ರವಚನ ಮತ್ತು ಸಂದೇಶ ನೀಡಿದರು.
ಪವಿತ್ರ ಜಲದ ಆಶೀರ್ವಚನ ಹಾಗೂ ಕ್ರೈಸ್ತ ವಿಶ್ವಾಸದ ಸತ್ಯದ ಮರು ದೃಢೀಕರಣ ಈ ಸಂದರ್ಭದಲ್ಲಿ ನಡೆ ಯಿತು. ಕ್ರೈಸ್ತ ಸಂತರನ್ನು ಸ್ಮರಿಸಿ ಅವರ ಶುಭಾಶೀರ್ವಾದಗಳನ್ನು ಕೋರಲಾಯಿತು. ಸಂಭ್ರಮದ ಬಲಿ ಪೂಜೆಯ ಬಳಿಕ ಭಾಗವಹಿಸಿದ ಕ್ರೈಸ್ತ ಬಾಂಧವರು ಈಸ್ಟರ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ರವಿವಾರ ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಈಸ್ಟರ್ ಹಬ್ಬದ ಊಟವನ್ನು ಸವಿದರು. ಕ್ರೈಸ್ತ ಸಭೆಯು ವಿಭೂತಿ ಬುಧ ವಾರದಿಂದ ಮೊದಲ್ಗೊಂಡು ಈಸ್ಟರ್ ಹಬ್ಬದವರೆಗಿನ 40 ದಿನ ಗಳ ತನಕ ವ್ರತಾಚರಣೆಗೆ ಕರೆ ನೀಡು ತ್ತದೆ. ಈ ಅವಧಿಯ ಕೊನೆಯ 7 ದಿನಗಳನ್ನು ಪವಿತ್ರ ಸಪ್ತಾಹ ವನ್ನಾಗಿ ಆಚರಿಸಲಾಗುತ್ತದೆ. ಗರಿಗಳ ರವಿವಾರದೊಂದಿಗೆ ಪ್ರಾರಂಭಗೊಳ್ಳುವ ಈ ಸಪ್ತಾಹ ಈಸ್ಟರ್ ರವಿವಾರ ದಂದು ಮುಕ್ತಾಯಗೊಳ್ಳುತ್ತದೆ. ಈ ಸಪ್ತಾಹದ ಗುರುವಾರ ಯೇಸುಕ್ರಿಸ್ತರ ಕೊನೆಯ ಭೋಜನದ ದಿನ, ಶುಕ್ರವಾರ ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿ ಸಿದ ದಿನ, ಶನಿವಾರ ಈಸ್ಟರ್ ಹಬ್ಬದ ಜಾಗರಣೆ ಹಾಗೂ ರವಿವಾರ ಈಸ್ಟರ್ ಅಥವಾ ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನಗೊಂಡ ಹಬ್ಬ ವನ್ನು ಆಚರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್