ಊಟದ ಬಿಲ್‌ 70 ರೂಪಾಯಿ ಕೊಡ್ಬೇಕು ಅಂದಿದ್ದರು!


Team Udayavani, Apr 3, 2018, 7:30 AM IST

sa-17.jpg

ಎಸ್ಸೆಸ್ಸೆಲ್ಸಿ ಉತ್ತೀರ್ಣನಾದ ಬಳಿಕ ಒಂದು ವರ್ಷ ಪಿಯುಸಿ ಸಲುವಾಗಿ ಕಾಲೇಜಿಗೆ ಮಣ್ಣು ಹೊತ್ತ ನನಗೆ ಮನೆಯಲ್ಲಿನ ಇರಿಸುಮುರಿಸಿನ ವಾತಾವರಣದಿಂದ ಬೇಸರವಾಗಿ ಒಂದು ದಿನ ಇದ್ದಕ್ಕಿದ್ದಂತೆ ಮನೆ ಬಿಟ್ಟು ದಾವಣಗೆರೆಗೆ ಉದ್ಯೋಗ ಅರಸಿ ಹೊರಟೆ. ಆಗ ನನಗಿನ್ನೂ 18 ವರ್ಷ. ತುಟಿಯ ಮೇಲೆ ಚಿಗುರು ಮೀಸೆ ಬಂದಿದ್ದ ಕಾಲ.

ದಾವಣಗೆರೆಯ ಜಿಲ್ಲಾ ಪತ್ರಿಕಾಲಯವೊಂದರಲ್ಲಿ ಕೆಲಸ ಕೇಳ್ಳೋಣವೆಂದು ಅಲ್ಲಿನ ಉಪ ಸಂಪಾದಕ ಹಳೇಬೀಡು ಕೃಷ್ಣಮೂರ್ತಿಯವರನ್ನು ಭೇಟಿಯಾದೆ. ಅವರು ತಮ್ಮ ಕಚೇರಿಯಲ್ಲಿ ಸದ್ಯಕ್ಕೆ ಯಾವುದೇ ಕೆಲಸ ಖಾಲಿಯಿಲ್ಲವೆಂದು ಕೈಯಾಡಿಸಿದಾಗ ಮುಖದಲ್ಲಿ ಮೂಡಿದ್ದು ಹತಾಶೆಯ ಭಾವ. ನನ್ನ ಪೆಚ್ಚುಮೋರೆಯನ್ನು ನೋಡಿಯೋ ಏನೋ ಅವರು “ನನ್ನ ಸ್ನೇಹಿತರೊಬ್ಬರ ಆಟೊಮೊಬೈಲ್‌ ಅಂಗಡಿಯಲ್ಲಿ ಕೆಲಸವಿದೆ. ಸೇರುತ್ತೀಯಾ?’ ಎಂದು ಕೇಳಿದರು. ಹಿಂದೆಮುಂದೆ ಯೋಚಿಸದೆ “ಹೂಂ’ ಎಂದು ಉಲಿದೆ.

ಅವರಿಂದ ವಿಳಾಸ ಪಡೆದು, ಪಿ.ಬಿ. ರಸ್ತೆಯ ವಿಜಯ ಟ್ರೇಡರ್ ಎಂಬ ಆಟೊಮೊಬೈಲ್‌ ಅಂಗಡಿಯನ್ನು ಹುಡುಕಿ ಅದರ ಮಾಲೀಕ ಆರ್‌.ಎಸ್‌. ನಾಗಭೂಷಣ್‌ ಅವರನ್ನು ಕಂಡು ವಿಷಯ ತಿಳಿಸಿದೆ. ಅವರು ಮರುಮಾತಿಲ್ಲದೆ “ಇಂದಿನಿಂದಲೇ ಸೇಲ್ಸ್‌ಬಾಯ್‌ ಕೆಲಸಕ್ಕೆ ಸೇರು’ ಎಂದು ಹೇಳಿದರು. ಬ್ಯಾಂಕ್‌ಗೆ ಹೋಗಿ ಚೆಕ್‌ ಕಟ್ಟಿ ಬರುವ, ಲಾರಿ ಕಚೇರಿಯಿಂದ ಸರಕು ಹೇರಿಸಿಕೊಂಡು ಬರುವ, ಎದುರಿನಲ್ಲೇ ಇದ್ದ ಹೋಟೆಲ್‌ನಿಂದ ದಿನಕ್ಕೆ ಎರಡು ಬಾರಿ ಕಾಫಿ ತಂದುಕೊಡುವ, ಗಿರಾಕಿ ಬಂದು ಕೇಳಿದ ವಸ್ತುವನ್ನು ಒಳಗಿನಿಂದ ತಂದುಕೊಟ್ಟು ಬಿಲ್‌ ಹಾಕಿಕೊಡುವ ಕೆಲಸಗಳು ನನ್ನ ಪಾಲಿಗೆ ಬಂದವು.

ಕೆಲಸವೇನೋ ಮೊದಲ ದಿನವೇ ಸಿಕ್ಕಿತು. ನಂತರ ನಮ್ಮ ದೊಡ್ಡಮ್ಮನ ಮನೆಗೆ ಹೋಗಿ “ಕೆಲಸ ಸಿಕ್ಕಿದೆ. ಇವತ್ತಿನಿಂದಲೇ ಹೋಗುತ್ತಿದ್ದೇನೆ. ನಿಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶವಿದೆಯೇ?’ ಎಂದು ಕೇಳಿದೆ. ನಮ್ಮ ದೊಡ್ಡಪ್ಪ ಸಹೃದಯಿಯಾದರೂ ಮುಲಾಜಿಲ್ಲದೆ ನೇರವಾಗಿ ಮಾತಾಡುವ ಆಸಾಮಿ. “ತಿಂಗಳಿಗೆ 70 ರೂ. ಊಟದ ಬಾಬ್ತು ಕೊಡೋದಾದರೆ ನನ್ನ ಅಭ್ಯಂತರವೇನೂ ಇಲ್ಲ’ ಎಂದರು! ನನಗೆ ಇನ್ನೂ ಕೆಲಸಕ್ಕೆ ಸೇರಿದ ದಿನ. ಸಂಬಳ ಎಷ್ಟು ಎಂದು ಅವರು ಹೇಳೇ ಇಲ್ಲ, ಹೀಗಿರುವಾಗ ದೊಡ್ಡಪ್ಪ ಮೆಸ್‌ನವರು ಹೇಳುವಂತೆ ದುಡ್ಡು ಫಿಕ್ಸ್‌ ಮಾಡಿಬಿಟ್ಟರಲ್ಲ? ನನಗೆ ತುಂಬಾ ಕಡಿಮೆ ಸಂಬಳ ಸಿಕ್ಕಿದರೆ ಏನು ಮಾಡೋದು ಎಂಬ ಚಿಂತೆ ಕಾಡಿತು. ಹಾಗೇ ಒಂದು ತಿಂಗಳು ಕಳೆಯಿತು. ನಾಗಭೂಷಣ್‌ ಅವರು ಮೂರನೇ ತಾರೀಖು ಬಂದ ಕೂಡಲೇ, ನೂರಾ ಮೂವತ್ತು ರೂ.ಗಳನ್ನು ನನ್ನ ಮೊದಲ ಸಂಬಳವೆಂದು ನೀಡಿದಾಗ ಮೊದಲ ಗಳಿಕೆಯ ಹಣವನ್ನು ಕಂಡು ಕಣ್ಣಾಲಿಗಳು ತುಂಬಿಬಂದವು. 

ಈಗ ಎಷ್ಟೇ ಸಂಬಳ ತೆಗೆದುಕೊಳ್ಳುತ್ತಿದ್ದರೂ, ಮೊದಲ ಸಂಬಳ ನೀಡಿದ ಅನನ್ಯ ಖುಷಿಗೆ ಅದು ಸಮನಾಗಲು ಸಾಧ್ಯವೇ ಇಲ್ಲ.

ಎಚ್‌.ಕೆ. ರಾಘವೇಂದ್ರ, ಕೋಲಾರ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.