ಆ್ಯಕ್ಷನ್‌ನಿಂದ ಕಾಮಿಡಿಯತ್ತ ಸಂತೋಷದ ಪಯಣ


Team Udayavani, Apr 3, 2018, 11:42 AM IST

SANTHOSH.jpg

ಕನ್ನಡ ಚಿತ್ರರಂಗದ ಕೆಲವು ನಾಯಕರು ಒಂದು ಸಿನಿಮಾ ಮಾಡಿ, ಆ ಚಿತ್ರ ಬಿಡುಗಡೆಯಾದ ನಂತರ ಆ ನಟರು ಏನು ಮಾಡುತ್ತಿರುತ್ತಾರೆಂಬ ಸುಳಿವೇ ಇರೋದಿಲ್ಲ. ಆ ಸಾಲಿಗೆ ಸೇರುವ ನಾಯಕ ನಟರಲ್ಲಿ ಸಂತೋಷ್‌ ಕೂಡಾ ಒಬ್ಬರು. ಯಾವ ಸಂತೋಷ್‌ ಎಂದರೆ ನಿರ್ಮಾಪಕ ಆನೇಕಲ್‌ ಬಾಲರಾಜ್‌ ಅವರ ಮಗ ಎನ್ನುವ ಜೊತೆಗೆ “ಕೆಂಪ’, “ಜನ್ಮ’, “ಗಣಪ’, “ಕರಿಯಾ-2′ ಚಿತ್ರಗಳ ನಾಯಕ ಎನ್ನಬೇಕು.

ಸಂತೋಷ್‌ ಕೂಡಾ ಗಾಂಧಿನಗರದಲ್ಲಿ ಹೆಚ್ಚಾಗಿ ಕಾಣಿಸಿಕೊಂಡವರಲ್ಲ. ತಮ್ಮ ಸಿನಿಮಾ ಬಿಡುಗಡೆಯ ಸಮಯದಲ್ಲಷ್ಟೇ ಕಾಣಿಸಿಕೊಳ್ಳುವ ಸಂತೋಷ್‌ ಈಗ “ಕಾಜಲ್‌’ ಎಂಬ ಸಿನಿಮಾ ಮಾಡುತ್ತಿದ್ದಾರೆ. ಈ ಹಿಂದಿನ ನಾಲ್ಕು ಸಿನಿಮಾಗಳಲ್ಲಿ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಹೀರೋ ಆಗಿ ಕಾಣಿಸಿಕೊಂಡಿದ್ದ ಸಂತೋಷ್‌ ಮೊದಲ ಬಾರಿಗೆ ಆ ಇಮೇಜ್‌ನಿಂದ ಹೊರಬರಲು ಮುಂದಾಗಿದ್ದಾರೆ. ಅದೇ ಕಾರಣದಿಂದ “ಕಾಜಲ್‌’ ಸಿನಿಮಾ ಮಾಡುತ್ತಿದ್ದಾರೆ.

ಇದೊಂದು ಮ್ಯೂಸಿಕಲ್‌ ಕಾಮಿಡಿ ಜರ್ನಿ. ಈ ಹಿಂದಿನ ಸಿನಿಮಾಗಳಲ್ಲಿ ಹೊಡೆದಾಡಿದ್ದ ಸಂತೋಷ್‌ ಇಲ್ಲಿ ನಗಿಸಲು ಹೊರಟಿದ್ದಾರೆ. ಯಾಕಾಗಿ ಈ ಬದಲಾವಣೆ ಎಂದು ಕೇಳಿದರೆ, ಹೊಸದೇನೋ ಮಾಡಬೇಕೆನಿಸಿತು ಎಂಬ ಉತ್ತರ ಸಂತೋಷ್‌ರಿಂದ ಬರುತ್ತದೆ. “ಸತತವಾಗಿ ಆ್ಯಕ್ಷನ್‌ ಸಿನಿಮಾಗಳನ್ನೇ ಮಾಡಿಕೊಂಡು ಬಂದೆ. ಈಗ ಬೇರೇನೋ ಮಾಡಬೇಕೆನಿಸಿತು. ಅದಕ್ಕಾಗಿ ಎದುರು ನೋಡುತ್ತಿದ್ದಾಗ ಸಿಕ್ಕಿದ್ದು “ಕಾಜಲ್‌’. ಕತೆ ತುಂಬಾ ಇಷ್ಟವಾಯಿತು.

ನನಗೂ ಈ ಪಾತ್ರ ಹೊಸದೆನಿಸಿ ಒಪ್ಪಿಕೊಂಡೆ’ ಎನ್ನುವ ಸಂತೋಷ್‌ ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಕೂಡಾ ಮಾಡಿಕೊಳ್ಳುತ್ತಿದ್ದಾರಂತೆ. ಸಂತೋಷ್‌ ಚಿತ್ರರಂಗಕ್ಕೆ ಬಂದು 11 ವರ್ಷವಾಗಿದೆ. ಈ 11 ವರ್ಷದಲ್ಲಿ ಅವರು ನಟಿಸಿದ್ದು ಕೇವಲ ಐದು ಸಿನಿಮಾಗಳಲ್ಲಿ. ಇಷ್ಟೊಂದು ನಿಧಾನಗತಿಯ ಪಯಣ ಯಾಕೆ ಎಂದರೆ ಅದಕ್ಕೆ ನಾನಾ ಕಾರಣಗಳಿವೆ ಎಂಬ ಉತ್ತರ ಸಂತೋಷ್‌ರಿಂದ ಬರುತ್ತದೆ.

“ಕೆಂಪ ಚಿತ್ರದಿಂದಲೇ ನನ್ನ ಪ್ರತಿಯೊಂದು ಚಿತ್ರಗಳು ಕಾರಣಾಂತರಗಳಿಂದ ತಡವಾಗುತ್ತಾ ಹೋದುವು. ಈ ಮಧ್ಯೆ ನಾನು ಕೂಡಾ ಒಂದು ಸಿನಿಮಾ ಬಿಡುಗಡೆಯಾಗಿ ಎರಡೂರು ವರ್ಷ ಗ್ಯಾಪ್‌ ತೆಗೆದುಕೊಂಡೆ. ಬಿಝಿನೆಸ್‌ಗಾಗಿ ಅಲ್ಲಿ ಇಲ್ಲಿ ಓಡಾಡಿಕೊಂಡಿದ್ದೆ. ಆ ಕಾರಣದಿಂದ ತಡವಾಯಿತು. ಮುಂದೆ ಆ ತರಹ ಆಗಲ್ಲ. ವರ್ಷಕ್ಕೆರಡು ಸಿನಿಮಾ ಮಾಡಬೇಕೆಂದಿದ್ದೇನೆ.

ಈಗಾಗಲೇ ಒಂದೆರಡು ಸಿನಿಮಾಗಳ ಮಾತುಕತೆಯಾಗಿದೆ. ಎಂ.ಡಿ.ಶ್ರೀಧರ್‌ ಅವರ ಜೊತೆಗೊಂದು ಸಿನಿಮಾ ಮಾಡುತ್ತೇನೆ’ ಎನ್ನುವುದು ಸಂತೋಷ್‌ ಮಾತು. ಬಹುತೇಕ ತಮ್ಮದೇ ಬ್ಯಾನರ್‌ನಲ್ಲಿ ನಟಿಸುತ್ತಿದ್ದ ಸಂತೋಷ್‌ ಮುಂದಿನ ದಿನಗಳಲ್ಲಿ ಬೇರೆ ಬ್ಯಾನರ್‌ನ ಸಿನಿಮಾಗಳಲ್ಲೂ ನಟಿಸಲಿದ್ದಾರಂತೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.