ಪುಣೆ ಶ್ರೀ ಗುರುದೇವ ಸೇವಾ ಬಳಗ ಶ್ರೀ ಹನುಮ ಜಯಂತಿ ಆಚರಣೆ


Team Udayavani, Apr 3, 2018, 4:01 PM IST

0204mum07b.jpg

ಪುಣೆ: ಶ್ರೀ  ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ  ಹನುಮ ಜಯಂತಿ ಆಚರಣೆಯು ಪುಣೆ ಶ್ರೀ  ಗುರುದೇವ ಸೇವಾ ಬಳಗದ ಸಲಹೆಗಾರ, ಮಾಜಿ ಅಧ್ಯಕ್ಷ ನಾರಾಯಣ ಕೆ.  ಶೆಟ್ಟಿ  ನೇತೃತ್ವದಲ್ಲಿ  ಹಡಪ್ಸರ್‌ ಭೋಸ್ಲೆ ನಗರದ ಅಮರ್‌ ಕಾಟೇಜ್‌,  ಸಾಯಿ ನಿಲಯ 123 ಇಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ  ಜರಗಿತು.

ಧಾರ್ಮಿಕ ಕಾರ್ಯಕ್ರಮವಾಗಿ ಸಂಜೆ ವೇ|ಮೂ|   ಹರೀಶ್‌  ಐತಾಳ್‌ ಇವರ ನೇತೃತ್ವದಲ್ಲಿ ಶ್ರೀ ರಾಮಾಂಜನೇಯ ಕಲೊ³àಕ್ತ ಪೂಜೆ ಜರಗಿತು. ಪ್ರಖ್ಯಾತ್‌ ಶೆಟ್ಟಿ ಮತ್ತು ಸ್ನೇಹಲ್‌ ಪ್ರಖ್ಯಾತ್‌ ಶೆಟ್ಟಿ ದಂಪತಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.  ಬಳಗದ ಭಜನ ಪ್ರಮುಖರಾದ ದಾಮೋದರ ಬಂಗೇರ ಇವರ ಮಾರ್ಗದರ್ಶನದಲ್ಲಿ ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯೆಯರು ಹಾಗೂ ಶ್ರೀ  ಗುರುದೇವ ಸೇವಾ ಬಳಗದ ಸದಸ್ಯರಿಂದ  ಭಜನ ಕಾರ್ಯಕ್ರಮ  ನಡೆಯಿತು.

ಅನಂತರ ಸೇರಿದ ಎಲ್ಲ  ಭಕ್ತರ ಸಮ್ಮುಖದಲ್ಲಿ  ಹನುಮಾನ್‌ ಚಾಲಿಸ್‌ ಹಾಗೂ ರಾಮಸ್ತೋತ್ರ ಪಠಿಸಲಾಯಿತು.  ಮಹಾಪೂಜೆ, ಮಂಗಳಾರತಿ,  ಪ್ರಸಾದ  ವಿತರಣೆ ಜರಗಿತು. ಸುಧಾ ನಾರಾಯಣ  ಶೆಟ್ಟಿ ದಂಪತಿ, ಬಳಗದ ಅಧ್ಯಕ್ಷ ಸದಾನಂದ ಶೆಟ್ಟಿ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಪ್ರೇಮಾ ಎಸ್‌. ಶೆಟ್ಟಿ ಮತ್ತು ಸದಸ್ಯರು  ಶ್ರೀ ಹನುಮಾನ್‌ ದೇವರ ಅಲಂಕೃತ ಮಂಟಪಕ್ಕೆ  ಮಹಾಮಂಗಳಾರತಿಗೈದರು.

ಪುಣೆ ಶ್ರೀ ಗುರುದೇವ ಸೇವಾ ಬಳಗದ  ಅಧ್ಯಕ್ಷ ಸದಾನಂದ ಕೆ. ಶೆಟ್ಟಿ ಇವರು ಹನುಮ ಜಯಂತಿಯ ವಿಶೇಷತೆ, ಹನುಮ ಸೇವೆ ಹಾಗೂ ಗುರುದೇವಾ ಸೇವಾ ಬಳಗದ ಸೇವಾ ಕಾರ್ಯಗಳ  ಬಗ್ಗೆ ಸಭೆಗೆ   ತಿಳಿಸಿದರು. ತ್ಯಾಗ ಮತ್ತು ಸೇವೆಗೆ ನಾವು  ಹನುಮಾನ್‌ ದೇವರನ್ನು ಮೊದಲಾಗಿ ಸ್ಮರಿಸುತ್ತೇವೆ. ಧೈರ್ಯ, ಸಾಹಸದಿಂದ ಯಾವುದೇ ಕಾರ್ಯಸಾಧನೆ ಸಾಧ್ಯ. ಜೀವನದಲ್ಲಿ ನಮ್ಮಲ್ಲಿ ಕೂಡ ನಾವು ನಮ್ಮಿಂದಾಗುವ  ಸೇವಾ  ಕಾರ್ಯಗಳನ್ನು ಮಾಡುವಂತಹ ಪರಂಪರೆಯನ್ನು ರೂಢಿಸಿಕೊಳ್ಳಬೇಕು. ಒಡಿಯೂರು ಶ್ರೀಗಳು ಇಂದು ಸಮಾಜಮುಖೀ  ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಗ್ರಾಮ ಗ್ರಾಮಗಳಲ್ಲಿ ಅಭಿವೃದ್ಧಿಯ  ಸಂಕಲ್ಪವನ್ನು ತೊಟ್ಟು ಸೇವಾ ಕಾರ್ಯಗಳನ್ನು  ಮಾಡುತ್ತಿ¨ªಾರೆ.  ಅವರ ಸೇವಾ ಕಾರ್ಯಗಳಲ್ಲಿ ನಾವೆಲ್ಲರೂ ಭಾಗಿಯಾಗಬೇಕು. ಸಮಾಜ ಸೇವೆಯಿಂದ ಆತ್ಮತೃಪ್ತಿ ದೊರಕುತ್ತದೆ. ನಾವು   ಶುದ್ಧ ಮನಸ್ಸಿನಿಂದ ಭಕ್ತಿ ಭಾವದಿಂದ ಮಾಡುವ ಪ್ರತಿಯೊಂದು ಧಾರ್ಮಿಕ ಕಾರ್ಯಗಳು   ಭಗವಂತನಿಗೆ ಪ್ರಿಯವಾಗುತ್ತವೆ ಎಂದು ನುಡಿದು, ಹನುಮ ಜಯಂತಿಯ  ಪೂಜಾ ಕಾರ್ಯದ ವ್ಯವಸ್ಥಾಪನೆಗೈದ ಸುಧಾ ಎನ್‌. ಶೆಟ್ಟಿ ಮತ್ತು ನಾರಾಯಣ ಶೆಟ್ಟಿ ದಂಪತಿಗೆ ಹಾಗೂ ಬಳಗದ  ಮುಖಾಂತರ ಮಾಡುವ ನಮ್ಮ ಧಾರ್ಮಿಕ, ಸಾಮಾಜಿಕ ಸೇವೆಯಿಂದ 

ನಮಗೆಲ್ಲರಿಗೂ ಶ್ರೇಯೋಭಿವೃದ್ಧಿಯನ್ನು ಭಗವಂತ ಕರುಣಿಸಲಿ  ಎಂದು ಆಶಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಕೊನೆಯಲ್ಲಿ ಪ್ರಸಾದ ರೂಪದಲ್ಲಿ ಅನ್ನದಾನ ನೆರವೇರಿತು. ಶ್ರೀ ಗುರುದೇವ ಬಳಗದ ಪ್ರಮುಖರಾದ   ಪುಣೆ ಬಳಗದ ಮಾಜಿ ಅಧ್ಯಕ್ಷ, ಸಲಹೆಗಾರ  ಉಷಾ ಕುಮಾರ್‌ ಶೆಟ್ಟಿ, ಪ್ರಭಾಕರ ಶೆಟ್ಟಿ ತಮನ್ನ, ವಿಜಯ ಶೆಟ್ಟಿ, ಶಿವರಾಮ ಶೆಟ್ಟಿ ಸಾಯಿ ಸಾಗರ್‌, ಶೇಖರ್‌ ಶೆಟ್ಟಿ ಯಾತ್ರಿಕ್‌, ವಿಟuಲ್‌ ಶೆಟ್ಟಿ ಪೂನಾ ಕೆಫೆ, ಸುಧಾಕರ್‌ ಶೆಟ್ಟಿ ಕೆಇಎಂ, ನಾರಾಯಣ ಶೆಟ್ಟಿ, ವಿಟuಲ್‌ ಶೆಟ್ಟಿ, ಸತೀಶ್‌ ರೈ, ಸುಧೀರ್‌ ಶೆಟ್ಟಿ,  ಉಮೇಶ್‌ ಶೆಟ್ಟಿ, ನಾಗರಾಜ್‌ ಶೆಟ್ಟಿ, ಸುರೇಶ್‌  ಶೆಟ್ಟಿ, ಜಗದೀಶ್‌ ಹೆಗ್ಡೆ, ಬಾಲಕೃಷ್ಣ ಶೆಟ್ಟಿ ಮತ್ತು ಸದಸ್ಯರು ಹಾಗೂ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಪ್ರಮುಖರಾದ  ವೀಣಾ ಪಿ. ಶೆಟ್ಟಿ, ಜಯಲಕ್ಷ್ಮೀ ಪಿ. ಶೆಟ್ಟಿ, ಶೋಭಾ ಯು. ಶೆಟ್ಟಿ, ಸರೋಜಿನಿ ಬಂಗೇರ, ಲೀಲಾ ಶೆಟ್ಟಿ, ಶಾರದಾ ಹೆಗ್ಡೆ, ಸುಜಾತಾ ಶೆಟ್ಟಿ, ಉಷಾ ಯು. ಶೆಟ್ಟಿ, ಶ್ವೇತಾ ಎಚ್‌. ಎಂ., ಸೋನಿ ಶೆಟ್ಟಿ, ಸ್ವರ್ಣಲತಾ ಜೆ. ಹೆಗ್ಡೆ  ಹಾಗೂ ಹೆಚ್ಚಿನ ಸಂಖ್ಯೆಯ  ಭಕ್ತರು ಉಪಸ್ಥಿತರಿದ್ದರು.

ಚಿತ್ರ- ವರದಿ: ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.